ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚರಂಡಿಗೆ ಬಿದ್ದ ಬೈಕ್‌: ಇಬ್ಬರು ಸ್ಥಳದಲ್ಲೇ ಸಾವು

Last Updated 4 ಏಪ್ರಿಲ್ 2021, 16:45 IST
ಅಕ್ಷರ ಗಾತ್ರ

ಚಾಮರಾಜನಗರ: ತಾಲ್ಲೂಕಿನ ಮೂಡಲ ಹೊಸಹಳ್ಳಿ ಗ್ರಾಮದ ಬಳಿ ಭಾನುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಒಬ್ಬರು ಗಾಯಗೊಂಡಿದ್ದಾರೆ.

ತಮಿಳುನಾಡಿನ ಕುಮಾರ್‌ (44), ಮೂಡಲ ಹೊಸಹಳ್ಳಿಯ ಬಸವಯ್ಯ (65) ಮೃತಪಟ್ಟವರು. ಮೂಡಲ ಹೊಸಹಳ್ಳಿ ಗ್ರಾಮದವೇ ಆದ ಮಹದೇವಯ್ಯ ಎಂಬುವವರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತಮಿಳುನಾಡಿನ ಕುಮಾರ್ ಅವರು ಮೂಡಲ ಹೊಸಹಳ್ಳಿಯಲ್ಲಿ ಜಮೀನು ಹೊಂದಿದ್ದರು. ಭಾನುವಾರ ಮೂವರೂ ಒಂದೇ ಬೈಕ್‌ನಲ್ಲಿ ಮೂಡಲ ಹೊಸಹಳ್ಳಿಯಿಂದ ವಡ್ಡರಹಳ್ಳಿಗೆ ಹೊರಟಿದ್ದರು. ಈ ಸಂದರ್ಭದಲ್ಲಿ ದಾರಿ ಮಧ್ಯೆ ರಸ್ತೆ ಪಕ್ಕದಲ್ಲಿ ನಿರ್ಮಿಸಿರುವ ಚರಂಡಿಗೆ ಬೈಕ್‌ ಬಿದ್ದಿದೆ. ಬೈಕ್‌ ಚಾಲನೆ ಮಾಡುತ್ತಿದ್ದ ಕುಮಾರ್‌ ಹಾಗೂ ಮಧ್ಯದಲ್ಲಿ ಕುಳಿತಿದ್ದ ಬಸವಯ್ಯ ಅವರಿಗೆ ತೀವ್ರ ಏಟಾಗಿ ಸ್ಥಳದಲ್ಲೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂಬದಿಯಲ್ಲಿದ್ದ ಮಹದೇವಯ್ಯ ಅವರು ಗಾಯಗೊಂಡರು. ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಯಿತು. ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜೀವಕ್ಕೆ ಯಾವುದೇ ಅಪಾಯ ಇಲ್ಲ ಎಂದು ಹೇಳಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆಯೇ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಅನಿತಾ ಬಿ.ಹದ್ದಣ್ಣವರ್‌, ಡಿವೈಎಸ್‌ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಗ್ರಾಮಾಂತರ ಸರ್ಕಲ್‌ ಇನ್‌ಸ್ಪೆಕ್ಟರ್‌ ನಂಜಪ್ಪ, ಗ್ರಾಮಾಂತರ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ಹನುಮಂತು ಉಪ್ಪಾರ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT