<p><strong>ಚಾಮರಾಜನಗರ:</strong> ಕೋವಿಡ್–19 ಕಾರಣದಿಂದ ಜಿಲ್ಲೆಯಲ್ಲಿ ಮತ್ತೆ ಇಬ್ಬರು ಮೃತಪಟ್ಟಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ ಮೃತಪಟ್ಟ ಸೋಂಕಿತರ ಸಂಖ್ಯೆ 57ಕ್ಕೆ ಏರಿದೆ. 39 ಮಂದಿ ಕೋವಿಡ್ನಿಂದ ಪ್ರಾಣ ಕಳೆದುಕೊಂಡಿದ್ದರೆ, 18 ಮಂದಿ ಬೇರೆ ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ.</p>.<p>ಮೈಸೂರಿನಲ್ಲಿ ದೃಢಪಟ್ಟ ಎರಡು ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಮಂಗಳವಾರ 38 ಮಂದಿಗೆ ಸೋಂಕು ಖಚಿತವಾಗಿದೆ. 34 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 2,725ಕ್ಕೆ ಏರಿದೆ. ಗುಣಮುಖರಾದವರ ಸಂಖ್ಯೆ 2,151ಕ್ಕೆ ತಲುಪಿದೆ. 518 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 172 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ. 21 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಯಳಂದೂರು ತಾಲ್ಲೂಕಿನ ಗಂಗಾವಾಡಿ ನಿವಾಸಿ 54 ವರ್ಷದ ವ್ಯಕ್ತಿ (ರೋಗಿ ಸಂಖ್ಯೆ–3,71,196) ಸೆ.2ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಅವರು ಮೃತಪಟ್ಟಿದ್ದಾರೆ.</p>.<p>ಚಾಮರಾಜನಗರ ತಾಲ್ಲೂಕಿನ ಹೆಗ್ಗವಾಡಿಪುರದ 60 ವರ್ಷದ ಪುರುಷ (ರೋಗಿ ಸಂಖ್ಯೆ–4,17,210) ಸೆ.6ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.</p>.<p>ಮಂಗಳವಾರ ಜಿಲ್ಲೆಯಲ್ಲಿ 826 ಕೋವಿಡ್ ಪರೀಕ್ಷೆಗಳನ್ನು (ಆರ್ಟಿಪಿಸಿಆರ್–312, ರ್ಯಾಪಿಡ್ ಆ್ಯಂಟಿಜೆನ್–512, ಟ್ರು ನಾಟ್–2) ನಡೆಸಲಾಗಿದೆ. ಈ ಪೈಕಿ 790 ಮಂದಿಯ ವರದಿ ನೆಗೆಟಿವ್ ಬಂದಿದೆ.</p>.<p>ದೃಢಪಟ್ಟ 38 ಪ್ರಕರಣಗಳಲ್ಲಿ ಚಾಮರಾಜನಗರ ತಾಲ್ಲೂಕಿನ 19, ಗುಂಡ್ಲುಪೇಟೆಯ 14, ಕೊಳ್ಳೇಗಾಲದ ನಾಲ್ಕು ಹಾಗೂ ಯಳಂದೂರಿನ ಒಂದು ಪ್ರಕರಣಗಳು ಸೇರಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಕೋವಿಡ್–19 ಕಾರಣದಿಂದ ಜಿಲ್ಲೆಯಲ್ಲಿ ಮತ್ತೆ ಇಬ್ಬರು ಮೃತಪಟ್ಟಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ ಮೃತಪಟ್ಟ ಸೋಂಕಿತರ ಸಂಖ್ಯೆ 57ಕ್ಕೆ ಏರಿದೆ. 39 ಮಂದಿ ಕೋವಿಡ್ನಿಂದ ಪ್ರಾಣ ಕಳೆದುಕೊಂಡಿದ್ದರೆ, 18 ಮಂದಿ ಬೇರೆ ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ.</p>.<p>ಮೈಸೂರಿನಲ್ಲಿ ದೃಢಪಟ್ಟ ಎರಡು ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಮಂಗಳವಾರ 38 ಮಂದಿಗೆ ಸೋಂಕು ಖಚಿತವಾಗಿದೆ. 34 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 2,725ಕ್ಕೆ ಏರಿದೆ. ಗುಣಮುಖರಾದವರ ಸಂಖ್ಯೆ 2,151ಕ್ಕೆ ತಲುಪಿದೆ. 518 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 172 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ. 21 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಯಳಂದೂರು ತಾಲ್ಲೂಕಿನ ಗಂಗಾವಾಡಿ ನಿವಾಸಿ 54 ವರ್ಷದ ವ್ಯಕ್ತಿ (ರೋಗಿ ಸಂಖ್ಯೆ–3,71,196) ಸೆ.2ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಅವರು ಮೃತಪಟ್ಟಿದ್ದಾರೆ.</p>.<p>ಚಾಮರಾಜನಗರ ತಾಲ್ಲೂಕಿನ ಹೆಗ್ಗವಾಡಿಪುರದ 60 ವರ್ಷದ ಪುರುಷ (ರೋಗಿ ಸಂಖ್ಯೆ–4,17,210) ಸೆ.6ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.</p>.<p>ಮಂಗಳವಾರ ಜಿಲ್ಲೆಯಲ್ಲಿ 826 ಕೋವಿಡ್ ಪರೀಕ್ಷೆಗಳನ್ನು (ಆರ್ಟಿಪಿಸಿಆರ್–312, ರ್ಯಾಪಿಡ್ ಆ್ಯಂಟಿಜೆನ್–512, ಟ್ರು ನಾಟ್–2) ನಡೆಸಲಾಗಿದೆ. ಈ ಪೈಕಿ 790 ಮಂದಿಯ ವರದಿ ನೆಗೆಟಿವ್ ಬಂದಿದೆ.</p>.<p>ದೃಢಪಟ್ಟ 38 ಪ್ರಕರಣಗಳಲ್ಲಿ ಚಾಮರಾಜನಗರ ತಾಲ್ಲೂಕಿನ 19, ಗುಂಡ್ಲುಪೇಟೆಯ 14, ಕೊಳ್ಳೇಗಾಲದ ನಾಲ್ಕು ಹಾಗೂ ಯಳಂದೂರಿನ ಒಂದು ಪ್ರಕರಣಗಳು ಸೇರಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>