<p><strong>ಕೊಳ್ಳೇಗಾಲ: </strong>ತಾಲ್ಲೂಕಿನಲ್ಲಿ ಒಂದೇ ದಿನ ಮೂರು ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ. ಒಬ್ಬರು ಹಾವು ಕಡಿದು ಮೃತಪಟ್ಟಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರಲ್ಲಿ ಇಬ್ಬರು ವಿದ್ಯಾರ್ಥಿಗಳು. ಇನ್ನೊಬ್ಬರು ಗೃಹಿಣಿ.</p>.<p>ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ: ತಾಲ್ಲೂಕಿನ ಮುಳ್ಳೂರು ಗ್ರಾಮದ ಮಮತಾ ಎಂಬ ವಿದ್ಯಾರ್ಥಿನಿ ತನ್ನ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.</p>.<p>ಯಳಂದೂರುಆದರ್ಶ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದ ಮಮತಾ ಖಿನ್ನತೆಯಿಂದ ಬಳಲುತ್ತಿದ್ದಳು ಎನ್ನಲಾಗಿದೆ.</p>.<p>ಮೂರು ದಿನಗಳಿಂದ ಮುಳ್ಳೂರಿನ ಮನೆಯಲ್ಲಿದ್ದ ವಿದ್ಯಾರ್ಥಿನಿ, ಮಂಗಳವಾರ ತಡರಾತ್ರಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತನ್ನ ಸಾವಿಗೆ ಯಾರು ಕಾರಣವಲ್ಲ ಎಂದು ಮರಣ ಪತ್ರದಲ್ಲಿ ಬರೆದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p class="Subhead">ಪಿಯು ವಿದ್ಯಾರ್ಥಿ ಆತ್ಮಹತ್ಯೆ: ನಗರದ ಲಿಂಗಣಾಪುರದ ಮನೆಯಲ್ಲಿ ಬೆಂಗಳೂರಿನ ಪಿಯು ವಿದ್ಯಾರ್ಥಿ ನಿತೀಶ್ ರಾಜ್ (16) ಎಂಬಾತ ಬುಧವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.</p>.<p>ಬೆಂಗಳೂರಿನ ನಿವಾಸಿಯಾಗಿದ್ದ ನಿತೀಶ್, ನಗರದಲ್ಲಿರುವ ತನ್ನ ಚಿಕ್ಕಮ್ಮನ ಮನೆಗೆ ಬಂದಿದ್ದ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾರಣ ಇನ್ನೂ ತಿಳಿದು ಬಂದಿಲ್ಲ ಎಂದುಪೊಲೀಸರು ತಿಳಿಸಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p class="Subhead"><strong>ಗೃಹಿಣಿ ಆತ್ಮಹತ್ಯೆ:</strong> ಇಲ್ಲಿನ ದೇವಾಂಗ ಪೇಟೆಯ ಚೌಡೇಶ್ವರಿ ಗುಡಿ ಬೀದಿಯಲ್ಲಿ ಗೃಹಿಣಿಯೊಬ್ಬರು ತಮ್ಮ ನಿವಾಸದಲ್ಲಿ ಬುಧವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಹೂವಿನ ಅಲಂಕಾರದ ಕೆಲಸ ಮಾಡುವ ರಮೇಶ್ ಎಂಬುವವರ ಪತ್ನಿ ಗೀತಾ (26) ಆತ್ಮಹತ್ಯೆ ಮಾಡಿಕೊಂಡವರು. ದಂಪತಿಗೆ ಆರು ವರ್ಷದ ಹೆಣ್ಣುಮಗು ಇದೆ.</p>.<p>ಗೀತಾ ಅವರಿಗೆ ಪದೇ ಪದೇ ಹೊಟ್ಟೆನೋವು ಕಾಡುತ್ತಿದ್ದು, ಇದರಿಂದಾಗಿ ಮನನೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p class="Briefhead"><strong>ಹಾವು ಕಚ್ಚಿ ವ್ಯಕ್ತಿ ಸಾವು</strong></p>.<p>ತಾಲ್ಲೂಕಿನ ಟಗರಪುರ ಮೋಳೆ ಗ್ರಾಮದಲ್ಲಿ ರೈತ ಉಮೇಶ್ (36) ಎಂಬುವವರು ಹಾವು ಕಚ್ಚಿ ಮೃತಪಟ್ಟಿದ್ದಾರೆ.</p>.<p>ಮಂಗಳವಾರ ರಾತ್ರಿ ಮೋಳೆ ಗ್ರಾಮದ ಹೊರವಲಯದ ಜಮೀನಿಗೆ ನೀರು ಬಿಡಲು ಹೋದಾಗ ನಾಗರಹಾವು ಕಚ್ಚಿದೆ. ತಕ್ಷಣ ಮನೆಗೆ ಬಂದು ಬಂದು ಕುಟುಂಬಸ್ಥರಿಗೆ ವಿಷಯ ತಿಳಿಸಿದರು. ತಕ್ಷಣವೇ ಅವರನ್ನು ಕೊಳ್ಳೇಗಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮಾರ್ಗ ಮಧ್ಯದಲ್ಲೇ ಅವರು ಮೃತಪಟ್ಟಿದ್ದಾರೆ.</p>.<p>ಈ ಸಂಬಂಧ, ಯಳಂದೂರು ತಾಲ್ಲೂಕಿನ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಳ್ಳೇಗಾಲ: </strong>ತಾಲ್ಲೂಕಿನಲ್ಲಿ ಒಂದೇ ದಿನ ಮೂರು ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ. ಒಬ್ಬರು ಹಾವು ಕಡಿದು ಮೃತಪಟ್ಟಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರಲ್ಲಿ ಇಬ್ಬರು ವಿದ್ಯಾರ್ಥಿಗಳು. ಇನ್ನೊಬ್ಬರು ಗೃಹಿಣಿ.</p>.<p>ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ: ತಾಲ್ಲೂಕಿನ ಮುಳ್ಳೂರು ಗ್ರಾಮದ ಮಮತಾ ಎಂಬ ವಿದ್ಯಾರ್ಥಿನಿ ತನ್ನ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.</p>.<p>ಯಳಂದೂರುಆದರ್ಶ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದ ಮಮತಾ ಖಿನ್ನತೆಯಿಂದ ಬಳಲುತ್ತಿದ್ದಳು ಎನ್ನಲಾಗಿದೆ.</p>.<p>ಮೂರು ದಿನಗಳಿಂದ ಮುಳ್ಳೂರಿನ ಮನೆಯಲ್ಲಿದ್ದ ವಿದ್ಯಾರ್ಥಿನಿ, ಮಂಗಳವಾರ ತಡರಾತ್ರಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತನ್ನ ಸಾವಿಗೆ ಯಾರು ಕಾರಣವಲ್ಲ ಎಂದು ಮರಣ ಪತ್ರದಲ್ಲಿ ಬರೆದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p class="Subhead">ಪಿಯು ವಿದ್ಯಾರ್ಥಿ ಆತ್ಮಹತ್ಯೆ: ನಗರದ ಲಿಂಗಣಾಪುರದ ಮನೆಯಲ್ಲಿ ಬೆಂಗಳೂರಿನ ಪಿಯು ವಿದ್ಯಾರ್ಥಿ ನಿತೀಶ್ ರಾಜ್ (16) ಎಂಬಾತ ಬುಧವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.</p>.<p>ಬೆಂಗಳೂರಿನ ನಿವಾಸಿಯಾಗಿದ್ದ ನಿತೀಶ್, ನಗರದಲ್ಲಿರುವ ತನ್ನ ಚಿಕ್ಕಮ್ಮನ ಮನೆಗೆ ಬಂದಿದ್ದ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾರಣ ಇನ್ನೂ ತಿಳಿದು ಬಂದಿಲ್ಲ ಎಂದುಪೊಲೀಸರು ತಿಳಿಸಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p class="Subhead"><strong>ಗೃಹಿಣಿ ಆತ್ಮಹತ್ಯೆ:</strong> ಇಲ್ಲಿನ ದೇವಾಂಗ ಪೇಟೆಯ ಚೌಡೇಶ್ವರಿ ಗುಡಿ ಬೀದಿಯಲ್ಲಿ ಗೃಹಿಣಿಯೊಬ್ಬರು ತಮ್ಮ ನಿವಾಸದಲ್ಲಿ ಬುಧವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಹೂವಿನ ಅಲಂಕಾರದ ಕೆಲಸ ಮಾಡುವ ರಮೇಶ್ ಎಂಬುವವರ ಪತ್ನಿ ಗೀತಾ (26) ಆತ್ಮಹತ್ಯೆ ಮಾಡಿಕೊಂಡವರು. ದಂಪತಿಗೆ ಆರು ವರ್ಷದ ಹೆಣ್ಣುಮಗು ಇದೆ.</p>.<p>ಗೀತಾ ಅವರಿಗೆ ಪದೇ ಪದೇ ಹೊಟ್ಟೆನೋವು ಕಾಡುತ್ತಿದ್ದು, ಇದರಿಂದಾಗಿ ಮನನೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p class="Briefhead"><strong>ಹಾವು ಕಚ್ಚಿ ವ್ಯಕ್ತಿ ಸಾವು</strong></p>.<p>ತಾಲ್ಲೂಕಿನ ಟಗರಪುರ ಮೋಳೆ ಗ್ರಾಮದಲ್ಲಿ ರೈತ ಉಮೇಶ್ (36) ಎಂಬುವವರು ಹಾವು ಕಚ್ಚಿ ಮೃತಪಟ್ಟಿದ್ದಾರೆ.</p>.<p>ಮಂಗಳವಾರ ರಾತ್ರಿ ಮೋಳೆ ಗ್ರಾಮದ ಹೊರವಲಯದ ಜಮೀನಿಗೆ ನೀರು ಬಿಡಲು ಹೋದಾಗ ನಾಗರಹಾವು ಕಚ್ಚಿದೆ. ತಕ್ಷಣ ಮನೆಗೆ ಬಂದು ಬಂದು ಕುಟುಂಬಸ್ಥರಿಗೆ ವಿಷಯ ತಿಳಿಸಿದರು. ತಕ್ಷಣವೇ ಅವರನ್ನು ಕೊಳ್ಳೇಗಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮಾರ್ಗ ಮಧ್ಯದಲ್ಲೇ ಅವರು ಮೃತಪಟ್ಟಿದ್ದಾರೆ.</p>.<p>ಈ ಸಂಬಂಧ, ಯಳಂದೂರು ತಾಲ್ಲೂಕಿನ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>