<p><strong>ಗುಂಡ್ಲುಪೇಟೆ: </strong>ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ಉಪವಿಭಾಗದ ನುಗು ವನ್ಯಜೀವಿ ವಲಯದಲ್ಲಿ ಭಾನುವಾರ ಮೂರು ಹುಲಿ ಮರಿಗಳು ಪತ್ತೆಯಾಗಿದ್ದು, ಅದರಲ್ಲಿ ಒಂದು ಸ್ಥಳದಲ್ಲಿಯೇ ಮೃತಪಟ್ಟಿದೆ. ಮತ್ತೊಂದು ಚಿಕಿತ್ಸೆಗೆ ಸ್ಪಂದಿಸದೆ ಮೈಸೂರಿನ ಮೃಗಾಲಯದಲ್ಲಿ ಮೃತಪಟ್ಟಿದೆ.</p>.<p>ಶವಪರೀಕ್ಷೆ ನಡೆಸಿದ್ದು, ಹಸಿವಿನಿಂದ ಮೃತಪಟ್ಟಿರುವುದು ತಿಳಿದುಬಂದಿದೆ.</p>.<p>ಮರಿಗಳು ಶೋಚನೀಯ ಸ್ಥಿತಿಯಲ್ಲಿ ಇರುವುದನ್ನು ಗಮನಿಸಿದ ಸಿಬ್ಬಂದಿ, ಹಿರಿಯ ಅರಣ್ಯಾಧಿಕಾರಿಗಳ ಗಮನಕ್ಕೆ ತಂದು ಮೃಗಾಲಯಕ್ಕೆ ಕಳುಹಿಸಿಕೊಟ್ಟರು. ಬದುಕುಳಿದ ಗಂಡು ಹುಲಿ ಮರಿಯ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ ಎಂದು ಸಹಾಯಕ ವಲಯ ಅರಣ್ಯಾಧಿಕಾರಿ ಕೆ.ಪರಮೇಶ್ ತಿಳಿಸಿದ್ದಾರೆ.</p>.<p>‘ಹುಲಿ ಮರಿಗಳು ಪತ್ತೆಯಾದ ಸ್ಥಳದಲ್ಲಿ ಕೂಂಬಿಂಗ್ ನಡೆಸಿ ತಾಯಿ ಹುಲಿಯ ಹೆಜ್ಜೆ ಗುರುತು ಪತ್ತೆ ಮಾಡಲಾಗಿದೆ. ತಾಯಿ ಹುಲಿಯ ಪತ್ತೆಗೆ ಶೋಧನ ಕಾರ್ಯ ಪ್ರಗತಿಯಲ್ಲಿದೆ. ಇದಕ್ಕಾಗಿ ಕ್ಯಾಮೆರಾ ಅಳವಡಿಸಿ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ’ ಎಂದು ಹುಲಿ ಯೋಜನೆ ನಿರ್ದೇಶಕ ಎಸ್.ಆರ್.ನಟೇಶ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ: </strong>ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ಉಪವಿಭಾಗದ ನುಗು ವನ್ಯಜೀವಿ ವಲಯದಲ್ಲಿ ಭಾನುವಾರ ಮೂರು ಹುಲಿ ಮರಿಗಳು ಪತ್ತೆಯಾಗಿದ್ದು, ಅದರಲ್ಲಿ ಒಂದು ಸ್ಥಳದಲ್ಲಿಯೇ ಮೃತಪಟ್ಟಿದೆ. ಮತ್ತೊಂದು ಚಿಕಿತ್ಸೆಗೆ ಸ್ಪಂದಿಸದೆ ಮೈಸೂರಿನ ಮೃಗಾಲಯದಲ್ಲಿ ಮೃತಪಟ್ಟಿದೆ.</p>.<p>ಶವಪರೀಕ್ಷೆ ನಡೆಸಿದ್ದು, ಹಸಿವಿನಿಂದ ಮೃತಪಟ್ಟಿರುವುದು ತಿಳಿದುಬಂದಿದೆ.</p>.<p>ಮರಿಗಳು ಶೋಚನೀಯ ಸ್ಥಿತಿಯಲ್ಲಿ ಇರುವುದನ್ನು ಗಮನಿಸಿದ ಸಿಬ್ಬಂದಿ, ಹಿರಿಯ ಅರಣ್ಯಾಧಿಕಾರಿಗಳ ಗಮನಕ್ಕೆ ತಂದು ಮೃಗಾಲಯಕ್ಕೆ ಕಳುಹಿಸಿಕೊಟ್ಟರು. ಬದುಕುಳಿದ ಗಂಡು ಹುಲಿ ಮರಿಯ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ ಎಂದು ಸಹಾಯಕ ವಲಯ ಅರಣ್ಯಾಧಿಕಾರಿ ಕೆ.ಪರಮೇಶ್ ತಿಳಿಸಿದ್ದಾರೆ.</p>.<p>‘ಹುಲಿ ಮರಿಗಳು ಪತ್ತೆಯಾದ ಸ್ಥಳದಲ್ಲಿ ಕೂಂಬಿಂಗ್ ನಡೆಸಿ ತಾಯಿ ಹುಲಿಯ ಹೆಜ್ಜೆ ಗುರುತು ಪತ್ತೆ ಮಾಡಲಾಗಿದೆ. ತಾಯಿ ಹುಲಿಯ ಪತ್ತೆಗೆ ಶೋಧನ ಕಾರ್ಯ ಪ್ರಗತಿಯಲ್ಲಿದೆ. ಇದಕ್ಕಾಗಿ ಕ್ಯಾಮೆರಾ ಅಳವಡಿಸಿ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ’ ಎಂದು ಹುಲಿ ಯೋಜನೆ ನಿರ್ದೇಶಕ ಎಸ್.ಆರ್.ನಟೇಶ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>