<p><strong>ಗುಂಡ್ಲುಪೇಟೆ: </strong>ಮೃತಪಟ್ಟ ಗಂಡನ ಶವಕ್ಕಾಗಿ ಮೊದಲ ಪತ್ನಿ ಹಾಗು ಎರಡನೇ ಪತ್ನಿ ನಡುವೆ ಕಿತ್ತಾಟ ನಡೆದಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.</p>.<p>ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ ಕೊನೆಗೂ ಪೊಲೀಸರ ಮಧ್ಯಪ್ರವೇಶದಿಂದ ಇತ್ಯರ್ಥವಾಯಿತು. ಮೊದಲ ಪತ್ನಿಗೆ ಶವವನ್ನು ಹಸ್ತಾಂತರಿಸಲಾಯಿತು.</p>.<p>ದೊಡ್ಡತುಪ್ಪೂರು ಗ್ರಾಮದ ವಕೀಲ ಪಾಪಣ್ಣಶೆಟ್ಟಿಅವರು ಅನಾರೋಗ್ಯದಿಂದ ಬುಧವಾರ ಮೃತಪಟ್ಟಿದ್ದರು. ಪಾಪಣ್ಣಶೆಟ್ಟಿ ಅವರು ಮೊದಲಪತ್ನಿ ನಿಮಿತ ಎಂಬುವವರಿಂದ ದೂರವಿದ್ದು, ಮಹದೇವಮ್ಮ ಎಂಬ ಎರಡನೇ ಪತ್ನಿ ಜೊತೆಗೆ ವಾಸವಿದ್ದರು.</p>.<p>ಪಾಪಣ್ಣಶೆಟ್ಟಿ ಅವರು ನಿಮಿತ ಎಂಬುವವರನ್ನು ಈ ಹಿಂದೆ ಮದುವೆಯಾಗಿದ್ದರು. ಅವರ ತಂದೆ ತಮ್ಮ ಆಸ್ತಿಯನ್ನು ಪಾಪಣ್ಣ ಅವರಿಗೆ ಬರೆದಿದ್ದರು ಎನ್ನಲಾಗಿದೆ. ದಂಪತಿ ನಡುವೆ ಭಿನ್ನಾಭಿಪ್ರಾಯ ಬಂದು ಪಾಪಣ್ಣ ಶೆಟ್ಟಿ ಅವರು ನಿಮಿತ ಅವರಿಂದ ದೂರವಾಗಿದ್ದರು. ನಂತರ ಮಹದೇವಮ್ಮ ಎಂಬುವವರನ್ನು ಮದುವೆಯಾಗಿದ್ದರು. ಈ ದಂಪತಿಗೆ ಒಬ್ಬ ಮಗ ಇದ್ದಾನೆ.</p>.<p>ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ಪಾಪಣ್ಣಶೆಟ್ಟಿ ತನಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿ ನಿಮಿತ ಅವರು ಕೆಲವು ತಿಂಗಳ ಹಿಂದೆ ಕೋರ್ಟ್ ಮೆಟ್ಟಿಲೇರಿದ್ದರು. ಈ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.</p>.<p>ಬುಧವಾರ ಪಾಪಣ್ಣ ಶೆಟ್ಟಿ ಅವರು ದೊಡ್ಡತುಪ್ಪೂರಿನ ಮನೆಯಲ್ಲಿ ನಿಧನರಾದ ವಿಷಯ ತಿಳಿಯುತ್ತಿದ್ದಂತೆ ನಿಮಿತ ಅವರು ಗುರುವಾರ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ, ಪೊಲೀಸರಿಗೆ ದೂರು ನೀಡಿದ್ದರು. ದೂರು ದಾಖಲಾಗಿದ್ದರಿಂದ ಪೊಲೀಸರು ಶವಪರೀಕ್ಷೆ ನಡೆಸಿದರು.</p>.<p>ಆ ಬಳಿಕ, ಶವವನ್ನು ತಮಗೆ ಹಸ್ತಾಂತರಿಸಬೇಕು ಎಂದು ನಿಮಿತ ಒತ್ತಾಯ ಮಾಡಿದ್ದಕ್ಕೆ ಮಹದೇವಮ್ಮ ಅವರು ಆಕ್ಷೇಪಿಸಿದರು. ಇದರಿಂದ ಪೊಲೀಸರು ಇಕ್ಕಟ್ಟಿಗೆ ಸಿಲಿಕಿದರು. ಪ್ರಕರಣ ಇತ್ಯರ್ಥ ಆಗದೇ ಇದ್ದುದರಿಂದ ಶವವನ್ನು ಗುರುವಾರ ಸಂಜೆ ಜಿಲ್ಲಾಸ್ಪತ್ರೆಗೆ ತಂದು ಶವಾಗಾರದಲ್ಲಿ ಇರಿಸಲಾಗಿತ್ತು.</p>.<p>ಶುಕ್ರವಾರ ಬೆಳಿಗ್ಗೆ ಮತ್ತೆ ಪೊಲೀಸರ ಮಧ್ಯಪ್ರವೇಶದಿಂದ ಶವವನ್ನು ಮೊದಲ ಪತ್ನಿ ನಿಮಿತ ಅವರಿಗೆ ಹಸ್ತಾಂತರಿಸಲಾಯಿತು. ಪೊಲೀಸರ ಉಪಸ್ಥಿತಿಯಲ್ಲೇ ಅಂತ್ಯಕ್ರಿಯೆಯನ್ನು ನಡೆಸಲಾಯಿತು.</p>.<p>ಇನ್ಸ್ಪೆಕ್ಟರ್ ಮಹದೇವಸ್ವಾಮಿ ಅವರು ಇದನ್ನು ‘ಪ್ರಜಾವಾಣಿ’ಗೆ ಖಚಿತ ಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ: </strong>ಮೃತಪಟ್ಟ ಗಂಡನ ಶವಕ್ಕಾಗಿ ಮೊದಲ ಪತ್ನಿ ಹಾಗು ಎರಡನೇ ಪತ್ನಿ ನಡುವೆ ಕಿತ್ತಾಟ ನಡೆದಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.</p>.<p>ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ ಕೊನೆಗೂ ಪೊಲೀಸರ ಮಧ್ಯಪ್ರವೇಶದಿಂದ ಇತ್ಯರ್ಥವಾಯಿತು. ಮೊದಲ ಪತ್ನಿಗೆ ಶವವನ್ನು ಹಸ್ತಾಂತರಿಸಲಾಯಿತು.</p>.<p>ದೊಡ್ಡತುಪ್ಪೂರು ಗ್ರಾಮದ ವಕೀಲ ಪಾಪಣ್ಣಶೆಟ್ಟಿಅವರು ಅನಾರೋಗ್ಯದಿಂದ ಬುಧವಾರ ಮೃತಪಟ್ಟಿದ್ದರು. ಪಾಪಣ್ಣಶೆಟ್ಟಿ ಅವರು ಮೊದಲಪತ್ನಿ ನಿಮಿತ ಎಂಬುವವರಿಂದ ದೂರವಿದ್ದು, ಮಹದೇವಮ್ಮ ಎಂಬ ಎರಡನೇ ಪತ್ನಿ ಜೊತೆಗೆ ವಾಸವಿದ್ದರು.</p>.<p>ಪಾಪಣ್ಣಶೆಟ್ಟಿ ಅವರು ನಿಮಿತ ಎಂಬುವವರನ್ನು ಈ ಹಿಂದೆ ಮದುವೆಯಾಗಿದ್ದರು. ಅವರ ತಂದೆ ತಮ್ಮ ಆಸ್ತಿಯನ್ನು ಪಾಪಣ್ಣ ಅವರಿಗೆ ಬರೆದಿದ್ದರು ಎನ್ನಲಾಗಿದೆ. ದಂಪತಿ ನಡುವೆ ಭಿನ್ನಾಭಿಪ್ರಾಯ ಬಂದು ಪಾಪಣ್ಣ ಶೆಟ್ಟಿ ಅವರು ನಿಮಿತ ಅವರಿಂದ ದೂರವಾಗಿದ್ದರು. ನಂತರ ಮಹದೇವಮ್ಮ ಎಂಬುವವರನ್ನು ಮದುವೆಯಾಗಿದ್ದರು. ಈ ದಂಪತಿಗೆ ಒಬ್ಬ ಮಗ ಇದ್ದಾನೆ.</p>.<p>ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ಪಾಪಣ್ಣಶೆಟ್ಟಿ ತನಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿ ನಿಮಿತ ಅವರು ಕೆಲವು ತಿಂಗಳ ಹಿಂದೆ ಕೋರ್ಟ್ ಮೆಟ್ಟಿಲೇರಿದ್ದರು. ಈ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.</p>.<p>ಬುಧವಾರ ಪಾಪಣ್ಣ ಶೆಟ್ಟಿ ಅವರು ದೊಡ್ಡತುಪ್ಪೂರಿನ ಮನೆಯಲ್ಲಿ ನಿಧನರಾದ ವಿಷಯ ತಿಳಿಯುತ್ತಿದ್ದಂತೆ ನಿಮಿತ ಅವರು ಗುರುವಾರ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ, ಪೊಲೀಸರಿಗೆ ದೂರು ನೀಡಿದ್ದರು. ದೂರು ದಾಖಲಾಗಿದ್ದರಿಂದ ಪೊಲೀಸರು ಶವಪರೀಕ್ಷೆ ನಡೆಸಿದರು.</p>.<p>ಆ ಬಳಿಕ, ಶವವನ್ನು ತಮಗೆ ಹಸ್ತಾಂತರಿಸಬೇಕು ಎಂದು ನಿಮಿತ ಒತ್ತಾಯ ಮಾಡಿದ್ದಕ್ಕೆ ಮಹದೇವಮ್ಮ ಅವರು ಆಕ್ಷೇಪಿಸಿದರು. ಇದರಿಂದ ಪೊಲೀಸರು ಇಕ್ಕಟ್ಟಿಗೆ ಸಿಲಿಕಿದರು. ಪ್ರಕರಣ ಇತ್ಯರ್ಥ ಆಗದೇ ಇದ್ದುದರಿಂದ ಶವವನ್ನು ಗುರುವಾರ ಸಂಜೆ ಜಿಲ್ಲಾಸ್ಪತ್ರೆಗೆ ತಂದು ಶವಾಗಾರದಲ್ಲಿ ಇರಿಸಲಾಗಿತ್ತು.</p>.<p>ಶುಕ್ರವಾರ ಬೆಳಿಗ್ಗೆ ಮತ್ತೆ ಪೊಲೀಸರ ಮಧ್ಯಪ್ರವೇಶದಿಂದ ಶವವನ್ನು ಮೊದಲ ಪತ್ನಿ ನಿಮಿತ ಅವರಿಗೆ ಹಸ್ತಾಂತರಿಸಲಾಯಿತು. ಪೊಲೀಸರ ಉಪಸ್ಥಿತಿಯಲ್ಲೇ ಅಂತ್ಯಕ್ರಿಯೆಯನ್ನು ನಡೆಸಲಾಯಿತು.</p>.<p>ಇನ್ಸ್ಪೆಕ್ಟರ್ ಮಹದೇವಸ್ವಾಮಿ ಅವರು ಇದನ್ನು ‘ಪ್ರಜಾವಾಣಿ’ಗೆ ಖಚಿತ ಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>