ತನ್ನನ್ನು ಪ್ರೀತಿಸುವಂತೆ ಚೇತನ್, 16 ವರ್ಷದ ಬಾಲಕಿಯನ್ನು ಪೀಡಿಸುತ್ತಿದ್ದ. ಅದಕ್ಕೆ ಆಕೆ ಒಪ್ಪಿರಲಿಲ್ಲ. 2019ರ ಮೇ 8ರಂದು ಬಾಲಕಿಯು ತನ್ನ ಅಜ್ಜಿ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಗುರುಪ್ರಸಾದ್ ಆಕೆಗೆ ಕರೆ ಮಾಡಿ, ’ನೀನು ಚೇತನ್ನನ್ನು ಪ್ರೀತಿಸಬೇಕು. ಇಲ್ಲದಿದ್ದರೆ ನಿನ್ನ ಅಣ್ಣನನ್ನು ಕೊಲೆ ಮಾಡುತ್ತೇವೆ. ತಕ್ಷಣವೇ ಬಾ‘ ಎಂದು ಬೆದರಿಕೆ ಹಾಕಿದ್ದ. ಇದರಿಂದ ಹೆದರಿದ್ದ ಬಾಲಕಿ ತಕ್ಷಣ ವಾಪಸ್ ಬಂದು, ಇಬ್ಬರನ್ನೂ ಭೇಟಿ ಮಾಡಿದ್ದಳು. ಈ ಸಂದರ್ಭದಲ್ಲಿ ಚೇತನ್ ಆಕೆಯನ್ನು ತನ್ನ ಬೈಕ್ನಲ್ಲಿ ಕೂರಿಸಿಕೊಂಡು ಸುತ್ತಾಡಿಸಿ, ’ನೀನು ನನ್ನನ್ನೇ ಮದುವೆಯಾಗಬೇಕು. ಇಲ್ಲದಿದ್ದರೆ ನಿಮ್ಮ ಮನೆಯವರ ಪೈಕಿ ಯಾರನ್ನಾದರೂ ಕೊಲೆ ಮಾಡಲು ತಯಾರಿದ್ದೇನೆ‘ ಎಂದು ಬೆದರಿಕೆ ಹಾಕಿದ್ದಲ್ಲದೇ, ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದ.