<p><strong>ಕೊಳ್ಳೇಗಾಲ:</strong> ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಕನಕಗಿರಿ ರಸ್ತೆ ಅಭಿವೃದ್ಧಿಪಡಿಸದೇ ನಿರ್ಲಕ್ಷ್ಯ ವಹಿಸಿರುವ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಶುಕ್ರವಾರ ಕಚೇರಿ ಮುಂದೆ ದಿಢೀರ್ ಪ್ರತಿಭಟನೆ ನಡೆಸಿತು.<br><br>ನಗರದ ಲೋಕೋಪಯೋಗಿ ಇಲಾಖೆಯ ಮುಂಭಾಗದಲ್ಲಿ ಜಮಾಯಿಸಿದ್ದ ರೈತರು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. <br> ನಂತರ ಜಿಲ್ಲಾ ರೈತ ಸಂಘದ ಕಾರ್ಯಾಧ್ಯಕ್ಷ ಶೈಲೇಂದ್ರ ಮಾತನಾಡಿ, ಕನಕಗಿರಿ ರಸ್ತೆ ಅಭಿವೃದ್ಧಿ ಪಡಿಸುವಂತೆ ಕಳೆದ ನವೆಂಬರ್ನಲ್ಲಿ ಪ್ರತಿಭಟನೆ ನಡೆಸಿದಾಗ ಒಂದು ತಿಂಗಳೊಳಗೆ ಅಭಿವೃದ್ಧಿ ಪಡಿಸುವುದಾಗಿ ಹೇಳಿ ಹೋದ ಅಧಿಕಾರಿಗಳು ಇದುವರೆಗೂ ಕಾಮಗಾರಿ ನಡೆಸದೇ ಸುಮ್ಮನೆ ಕುಳಿತಿದ್ದಾರೆ. ಆ ರಸ್ತೆಯಲ್ಲಿ ಮಾ.6ರಂದು ಬೆಳಿಗ್ಗೆ ಬೈಕ್ ನಲ್ಲಿ ತೆರಳುತ್ತಿದ್ದ ದೊಡ್ಡಿಂದುವಾಡಿ ಗ್ರಾಮದ ರೈತ ರಾಜಣ್ಣ ಅವರಿಗೆ ಎದುರುಗಡೆ ಹೋಗುತ್ತಿದ್ದ ವಾಹನದ ಟೈರ್ ಸಿಲುಕಿದ ಚಿಕ್ಕ ಕಲ್ಲು ಸಿಡಿದು ಅವರ ಕಾಲಿಗೆ ಬಿದ್ದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದರು. </p>.<p>ರಸ್ತೆ ಅಭಿವೃದ್ಧಿ ಪಡಿಸುವಲ್ಲಿ ವಿಫಲವಾಗಿರುವ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆಯ ಎಇಇ ಪುರುಷೋತ್ತಮ್ ಅವರನ್ನು ಅಮಾನತು ಮಾಡಬೇಕು. ಅವರು ಬರೀ ಸುಳ್ಳು ಹೇಳಿಕೊಂಡೆ ಕಾಲ ಕಳೆಯುತ್ತಿದ್ದಾರೆ ಎಂದು ಪಟ್ಟು ಹಿಡಿದರು. ಜೊತೆಗೆ ಸಂಬಂಧಪಟ್ಟ ಗುತ್ತಿಗೆದಾರರನ್ನು ಬ್ಲಾಕ್ ಪಟ್ಟಿಯಲ್ಲಿಡಬೇಕು ಎಂದು ಒತ್ತಾಯಿಸಿದರು.<br /><br /> ನಂತರ ಎಇಇ ಪುರುಷೋತ್ತಮ್ ಮಾತನಾಡಿ, ಕನಕಗಿರಿ ರಸ್ತೆಯ ಕಾಮಗಾರಿಯನ್ನು ಸೋಮವಾರದಿಂದ ಆರಂಭ ಮಾಡಿಸುತ್ತೇವೆ. ಈಗ ಪ್ರತಿಭಟನೆಯನ್ನು ಕೈಬಿಡಿ ಎಂದು ಮನವಿ ಮಾಡಿದರು. ಸೋಮವಾರ ಕೆಲಸ ಆರಂಭವಾಗದೆ ಹೋದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿ ಪ್ರತಿಭಟನೆಯನ್ನು ಕೈಬಿಟ್ಟರು.<br /><br />ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ರೈತ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಪೆರಿಯಾನಾಯಗಂ, ದೊಡ್ಡಿಂದುವಾಡಿ ಗ್ರಾಮ ಘಟಕ ಅಧ್ಯಕ್ಷ ವಸಂತಕುಮಾರ್, ಸಿಂಗನಲ್ಲೂರು ಗ್ರಾಮ ಘಟಕ ಬೆಟ್ಟೇಗೌಡ, ಬಸವಲಿಂಗಶೆಟ್ಟಿ, ರಂಗಸ್ವಾಮಿ, ರಾಜು, ಗೋವಿಂದರಾಜು, ನಾಗೇಂದ್ರ, ವೆಂಕಟೇಶ್, ಕೃಷ್ಣಶೆಟ್ಟಿ, ರವಿ, ಕೀರ್ತಿ, ನಾಗೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಳ್ಳೇಗಾಲ:</strong> ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಕನಕಗಿರಿ ರಸ್ತೆ ಅಭಿವೃದ್ಧಿಪಡಿಸದೇ ನಿರ್ಲಕ್ಷ್ಯ ವಹಿಸಿರುವ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಶುಕ್ರವಾರ ಕಚೇರಿ ಮುಂದೆ ದಿಢೀರ್ ಪ್ರತಿಭಟನೆ ನಡೆಸಿತು.<br><br>ನಗರದ ಲೋಕೋಪಯೋಗಿ ಇಲಾಖೆಯ ಮುಂಭಾಗದಲ್ಲಿ ಜಮಾಯಿಸಿದ್ದ ರೈತರು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. <br> ನಂತರ ಜಿಲ್ಲಾ ರೈತ ಸಂಘದ ಕಾರ್ಯಾಧ್ಯಕ್ಷ ಶೈಲೇಂದ್ರ ಮಾತನಾಡಿ, ಕನಕಗಿರಿ ರಸ್ತೆ ಅಭಿವೃದ್ಧಿ ಪಡಿಸುವಂತೆ ಕಳೆದ ನವೆಂಬರ್ನಲ್ಲಿ ಪ್ರತಿಭಟನೆ ನಡೆಸಿದಾಗ ಒಂದು ತಿಂಗಳೊಳಗೆ ಅಭಿವೃದ್ಧಿ ಪಡಿಸುವುದಾಗಿ ಹೇಳಿ ಹೋದ ಅಧಿಕಾರಿಗಳು ಇದುವರೆಗೂ ಕಾಮಗಾರಿ ನಡೆಸದೇ ಸುಮ್ಮನೆ ಕುಳಿತಿದ್ದಾರೆ. ಆ ರಸ್ತೆಯಲ್ಲಿ ಮಾ.6ರಂದು ಬೆಳಿಗ್ಗೆ ಬೈಕ್ ನಲ್ಲಿ ತೆರಳುತ್ತಿದ್ದ ದೊಡ್ಡಿಂದುವಾಡಿ ಗ್ರಾಮದ ರೈತ ರಾಜಣ್ಣ ಅವರಿಗೆ ಎದುರುಗಡೆ ಹೋಗುತ್ತಿದ್ದ ವಾಹನದ ಟೈರ್ ಸಿಲುಕಿದ ಚಿಕ್ಕ ಕಲ್ಲು ಸಿಡಿದು ಅವರ ಕಾಲಿಗೆ ಬಿದ್ದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದರು. </p>.<p>ರಸ್ತೆ ಅಭಿವೃದ್ಧಿ ಪಡಿಸುವಲ್ಲಿ ವಿಫಲವಾಗಿರುವ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆಯ ಎಇಇ ಪುರುಷೋತ್ತಮ್ ಅವರನ್ನು ಅಮಾನತು ಮಾಡಬೇಕು. ಅವರು ಬರೀ ಸುಳ್ಳು ಹೇಳಿಕೊಂಡೆ ಕಾಲ ಕಳೆಯುತ್ತಿದ್ದಾರೆ ಎಂದು ಪಟ್ಟು ಹಿಡಿದರು. ಜೊತೆಗೆ ಸಂಬಂಧಪಟ್ಟ ಗುತ್ತಿಗೆದಾರರನ್ನು ಬ್ಲಾಕ್ ಪಟ್ಟಿಯಲ್ಲಿಡಬೇಕು ಎಂದು ಒತ್ತಾಯಿಸಿದರು.<br /><br /> ನಂತರ ಎಇಇ ಪುರುಷೋತ್ತಮ್ ಮಾತನಾಡಿ, ಕನಕಗಿರಿ ರಸ್ತೆಯ ಕಾಮಗಾರಿಯನ್ನು ಸೋಮವಾರದಿಂದ ಆರಂಭ ಮಾಡಿಸುತ್ತೇವೆ. ಈಗ ಪ್ರತಿಭಟನೆಯನ್ನು ಕೈಬಿಡಿ ಎಂದು ಮನವಿ ಮಾಡಿದರು. ಸೋಮವಾರ ಕೆಲಸ ಆರಂಭವಾಗದೆ ಹೋದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿ ಪ್ರತಿಭಟನೆಯನ್ನು ಕೈಬಿಟ್ಟರು.<br /><br />ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ರೈತ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಪೆರಿಯಾನಾಯಗಂ, ದೊಡ್ಡಿಂದುವಾಡಿ ಗ್ರಾಮ ಘಟಕ ಅಧ್ಯಕ್ಷ ವಸಂತಕುಮಾರ್, ಸಿಂಗನಲ್ಲೂರು ಗ್ರಾಮ ಘಟಕ ಬೆಟ್ಟೇಗೌಡ, ಬಸವಲಿಂಗಶೆಟ್ಟಿ, ರಂಗಸ್ವಾಮಿ, ರಾಜು, ಗೋವಿಂದರಾಜು, ನಾಗೇಂದ್ರ, ವೆಂಕಟೇಶ್, ಕೃಷ್ಣಶೆಟ್ಟಿ, ರವಿ, ಕೀರ್ತಿ, ನಾಗೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>