ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಉಪ್ಪಾರ ಸಮುದಾಯದವು ಆರ್ಥಿಕವಾಗಿ, ಸಾಮಾಜಿಕವಾಗಿ ಸಾಕಷ್ಟು ಹಿಂದುಳಿದಿದೆ. ಬಿಜೆಪಿಯು ಈವರೆಗೂ ಉಪ್ಪಾರರಿಗೆ ರಾಜಕೀಯ ಸ್ಥಾನಮಾನ ನೀಡಿಲ್ಲ. ಈ ಚುನಾವಣೆಯಲ್ಲಿ 11 ಮಂದಿ ವಿಧಾನಪರಿಷತ್ಗೆ ಆಯ್ಕೆಯಾಗಲಿದ್ದಾರೆ. ಪಕ್ಷಕ್ಕೆ ಮೂರು ಸ್ಥಾನಗಳು ಸಿಗಲಿವೆ. ಈ ಪೈಕಿ ಒಂದು ಸ್ಥಾನವನ್ನು ಸಮುದಾಯದ ಮುಖಂಡರಿಗೆ ನೀಡಬೇಕು’ ಎಂದು ಅವರು ಹೇಳಿದರು.