<p><strong>ಕೊಳ್ಳೇಗಾಲ</strong>: ತಾಲ್ಲೂಕಿನ ಉತ್ತಂಬಳ್ಳಿ ಗ್ರಾಮದ ಮೇಲ್ಸೇತುವೆ ಸಂಪೂರ್ಣ ಅವೈಜ್ಞಾಕವಾಗಿದೆ ಎಂದು ಸಂಸದ ಸುನೀಲ್ ಬೋಸ್ ಹೇಳಿದರು.</p><p>ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ವಾಹನಗಳು ಹೋಗುವುದಕ್ಕೆ ಯೋಗ್ಯವಾಗಿಲ್ಲ. ವೇಗವಾಗಿ ವಾಹನ ಚಾಲನೆ ಮಾಡಿಕೊಂಡು ಹೋದರೆ ಕಾರು ಅಲುಗಾಡುತ್ತದೆ ಹಾಗಾಗಿ ಆ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ. ಆ ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿ, ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮುಖ್ಯವಾಗಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕೆಂಬ ಸೂಚನೆಯನ್ನು ನೀಡಿದ್ದೇನೆ ಎಂದರು.</p><p>ಗುತ್ತಿಗೆದಾರರಿಗೆ ಯಾವುದೇ ಅನುದಾನ ಹೋಗದಂತೆ ತಡೆಹಿಡಿಯಬೇಕು ಎಂಬುದಾಗಿಯೂ ಸಹ ಹೇಳಿದ್ದೇನೆ. ಮುಂದಿನ ದಿನಗಳಲ್ಲಿ ಕಳಪೆ ಕಾಮಗಾರಿ ಕಿತ್ತುಹಾಕಿ ಹೊಸದಾಗಿ ಮಾಡಬೇಕು. ಮುಂದಿನ ವಾರ ಕಾಮಗಾರಿಯನ್ನು ವೀಕ್ಷಣೆ ಮಾಡುತ್ತೇನೆ, ಒಂದು ವೇಳೆ ಲೋಪವಿದ್ದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇನೆ ಎಂದರು.</p><p>ಈ ಸಂದರ್ಭದಲ್ಲಿ ಎಚ್.ಡಿ ಕೋಟೆ ಶಾಸಕ ಅನಿಲ್ ಚಿಕ್ಕಮಾದು, ಮುಖಂಡ ರಮೇಶ್, ಸುಮನ್, ಬಸವಣ್ಣ, ರೇವಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಳ್ಳೇಗಾಲ</strong>: ತಾಲ್ಲೂಕಿನ ಉತ್ತಂಬಳ್ಳಿ ಗ್ರಾಮದ ಮೇಲ್ಸೇತುವೆ ಸಂಪೂರ್ಣ ಅವೈಜ್ಞಾಕವಾಗಿದೆ ಎಂದು ಸಂಸದ ಸುನೀಲ್ ಬೋಸ್ ಹೇಳಿದರು.</p><p>ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ವಾಹನಗಳು ಹೋಗುವುದಕ್ಕೆ ಯೋಗ್ಯವಾಗಿಲ್ಲ. ವೇಗವಾಗಿ ವಾಹನ ಚಾಲನೆ ಮಾಡಿಕೊಂಡು ಹೋದರೆ ಕಾರು ಅಲುಗಾಡುತ್ತದೆ ಹಾಗಾಗಿ ಆ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ. ಆ ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿ, ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮುಖ್ಯವಾಗಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕೆಂಬ ಸೂಚನೆಯನ್ನು ನೀಡಿದ್ದೇನೆ ಎಂದರು.</p><p>ಗುತ್ತಿಗೆದಾರರಿಗೆ ಯಾವುದೇ ಅನುದಾನ ಹೋಗದಂತೆ ತಡೆಹಿಡಿಯಬೇಕು ಎಂಬುದಾಗಿಯೂ ಸಹ ಹೇಳಿದ್ದೇನೆ. ಮುಂದಿನ ದಿನಗಳಲ್ಲಿ ಕಳಪೆ ಕಾಮಗಾರಿ ಕಿತ್ತುಹಾಕಿ ಹೊಸದಾಗಿ ಮಾಡಬೇಕು. ಮುಂದಿನ ವಾರ ಕಾಮಗಾರಿಯನ್ನು ವೀಕ್ಷಣೆ ಮಾಡುತ್ತೇನೆ, ಒಂದು ವೇಳೆ ಲೋಪವಿದ್ದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇನೆ ಎಂದರು.</p><p>ಈ ಸಂದರ್ಭದಲ್ಲಿ ಎಚ್.ಡಿ ಕೋಟೆ ಶಾಸಕ ಅನಿಲ್ ಚಿಕ್ಕಮಾದು, ಮುಖಂಡ ರಮೇಶ್, ಸುಮನ್, ಬಸವಣ್ಣ, ರೇವಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>