<p><strong>ಕೊಳ್ಳೇಗಾಲ: ‘</strong>ಶಾಸಕ ಎನ್.ಮಹೇಶ್ ಅವರಿಗೆ ಚಪ್ಪಲಿ ತೋರಿಸಿದ್ದಾರೆ ಎಂಬ ಆರೋಪದಲ್ಲಿ ಪೊಲೀಸರು ಗ್ರಾಮದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ’ ಎಂದು ಆರೋಪಿಸಿ ತಾಲ್ಲೂಕಿನ ಉತ್ತಂಬಳ್ಳಿ ಗ್ರಾಮಸ್ಥರು ನಗರ ಠಾಣೆಯ ಮುಂದೆ ಶುಕ್ರವಾರ ಸಂಜೆ ದಿಢೀರ್ ಪ್ರತಿಭಟನೆ ನಡೆಸಿದರು.</p>.<p>ಉತ್ತಂಬಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ಕೊಂಡೋತ್ಸವ ನಡೆದಿತ್ತು. ಶಾಸಕ ಎನ್.ಮಹೇಶ್ ಅವರು ಕೊಂಡೋತ್ಸವದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸಿದ್ದರಾಜು ಎಂಬುವವರು, ‘ನೀವು ಏನೂ ಕೆಲಸ ಮಾಡಿಲ್ಲ. ಯಾಕೆ ಗ್ರಾಮಕ್ಕೆ ಬರುತ್ತಿದ್ದೀರಿ? ನೀವು ಮಾಡಿರುವ ಅಭಿವೃದ್ಧಿ ಶೂನ್ಯ. ಗ್ರಾಮಕ್ಕೆ ಬರುವ ಅರ್ಹತೆ ನಿಮಗೆ ಇಲ್ಲ’ ಎಂದು ನೇರವಾಗಿ ಶಾಸಕ ಎನ್.ಮಹೇಶ್ ಅವರಿಗೆ ಹೇಳಿದ್ದಾರೆ ಎನ್ನಲಾಗಿದೆ.</p>.<p>ಈ ವೇಳೆ, ಎನ್.ಮಹೇಶ್ ಹಾಗೂ ಸಿದ್ದರಾಜು ಅವರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭದಲ್ಲಿ ಸಿದ್ದರಾಜು ಅವರು ಶಾಸಕರಿಗೆ ಚಪ್ಪಲಿ ತೋರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಸಿದ್ದರಾಜು ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹೇಶ್ ಅವರು ಪೊಲೀಸರಿಗೆ ಸೂಚನೆ ನೀಡಿದ್ದರು ಎನ್ನಲಾಗಿದೆ. ಆದರೆ, ಇದನ್ನು ಶಾಸಕರು ನಿರಾಕರಿಸಿದ್ದಾರೆ. </p>.<p>‘ಶಾಸಕರ ಸೂಚನೆಯ ಮೇರೆಗೆ ಪೊಲೀಸರು ಸಿದ್ದರಾಜು ಅವರನ್ನು ಅಗರ–ಮಾಂಬಳ್ಳಿ ಠಾಣೆಗೆ ಕರೆದೊಯ್ದು, ಅವರಿಗೆ ಹಿಗ್ಗಾ ಮುಗ್ಗ ಹೊಡೆದಿದ್ದಾರೆ’ ಎಂಬುದು ಗ್ರಾಮಸ್ಥರ ಆರೋಪ.</p>.<p>ಆಸ್ಪತ್ರೆಗೆ ದಾಖಲು: ಪೊಲೀಸರ ಏಟು ತಿಂದು ಅಸ್ವಸ್ಥಗೊಂಡಿದ್ದ ಸಿದ್ದರಾಜು ಅವರನ್ನು ಸಂಜೆಯ ಹೊತ್ತಿಗೆ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆಯ ಬಳಿಕ ಸಿದ್ದರಾಜು ಕೊಂಚ ಚೇತರಿಸಿಕೊಂಡರು.</p>.<p>ಆಸ್ಪತ್ರೆಯ ಮುಂದೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಜು, ‘ನೋಡಪ್ಪ ಹೇಗೆ ಹೋಗ್ತಾ ಇದ್ದಾನೆ? ನಾವು ಸಾಯುವವರೆಗೆ ಹೀಗೆ ಇರುವಂತಾಯಿತಲ್ಲ ಎಂದು ಶಾಸಕರನ್ನು ನೋಡಿ ಹೇಳಿದ್ದೆ. ಆದರೆ, ನಾನು ಚಪ್ಪಲಿ ತೋರಿಸಿದ್ದೇನೆ ಎಂದು ಆರೋಪಿಸಲಾಗಿದೆ. ನಾನು ಚಪ್ಪಲಿಯೇ ಧರಿಸಿರಲಿಲ್ಲ’ ಎಂದರು.</p>.<p>‘ಶಾಸಕರಿಗೆ ಚಪ್ಪಲಿ ತೋರಿಸಿದ್ದೇನೆ ಎಂದು ನನ್ನನ್ನು ಪೊಲೀಸರು ಅಗರ ಮಾಂಬಳ್ಳಿ ಠಾಣೆಗೆ ಕರೆದೊಯ್ದು ಸಿಕ್ಕಾಪಟ್ಟೆ ಹೊಡೆದಿದ್ದಾರೆ. ಹಗ್ಗದಲ್ಲಿ ನೇತಾಡಿಸಿ ಬಡಿದಿದ್ದಾರೆ. ಬೇಡ ಬೇಡ ಎಂದರೂ ಕೇಳಲಿಲ್ಲ. ನನಗೆ ಹೊಡೆದವರಿಗೆ ಶಿಕ್ಷೆಯಾಗಬೇಕು. ಮುಂದೆ ಯಾರಿಗೂ ಈ ರೀತಿ ಆಗಬಾರದು’ ಎಂದು ಹೇಳಿದರು. </p>.<p>ಪ್ರತಿಭಟನೆ: ವಿಷಯ ತಿಳಿಯುತ್ತಿದ್ದಂತೆಯೇ ಗ್ರಾಮದಿಂದ ಭಾರಿ ಸಂಖ್ಯೆಯಲ್ಲಿ ಬಂದ ಜನರು ಹಾಗೂ ನಗರದ ದಲಿತ ಮುಖಂಡರು ನಗರ ಪೊಲೀಸ್ ಠಾಣೆಯ ಮುಂದೆ ಸೇರಿ ಪ್ರತಿಭಟನೆ ಆರಂಭಿಸಿ, ಶಾಸಕರು ಹಾಗೂ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಿದ್ದರಾಜು ಮೇಲೆ ಹಲ್ಲೆ ಮಾಡಿರುವ ಪೊಲೀಸ್ ಸಿಬ್ಬಂದಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಪಟ್ಟು ಹಿಡಿದರು.</p>.<p><strong>ವಾರದಲ್ಲಿ ಕ್ರಮದ ಭರವಸೆ </strong></p>.<p>ಉತ್ತಂಬಳ್ಳಿ ಗ್ರಾಮಸ್ಥರು ಹಾಗೂ ನಗರದ ದಲಿತ ಮುಖಂಡರು ಪಟ್ಟು ಸಡಿಲಿಸದೇ ಇದ್ದಾಗ, ಸ್ಥಳಕ್ಕೆ ಬಂದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರ್ರಾಜ್ ಅವರು ಪ್ರತಿಭಟನಕಾರರ ಮನವೊಲಿಸಲು ಯತ್ನಿಸಿದರು.</p>.<p>‘ಯಳಂದೂರು ಸರ್ಕಲ್ ಇನ್ಸ್ಪೆಕ್ಟರ್ ಶಿವಮಾದಯ್ಯ ಅವರು ವಿಚಾರಣೆಗಾಗಿ ಸಿದ್ದರಾಜು ಅವರನ್ನು ಕರೆದುಕೊಂಡು ಹೋಗಿದ್ದರು. ಶಾಸಕರನ್ನು ಕರೆಸಲು, ಅಥವಾ ಅವರ ಬಳಿ ಈ ವಿಚಾರವಾಗಿ ಮಾತನಾಡಲು ನಮಗೆ ಸಾಧ್ಯವಿಲ್ಲ. ಆದರೆ, ಪೊಲೀಸರಿಂದ ಲೋಪ ಆಗಿದೆ ಎಂದು ಆರೋಪಿಸಿದ್ದೀರಿ. ಈ ಬಗ್ಗೆ ಪರಿಶೀಲನೆ ನಡೆಸುತ್ತೇವೆ’ ಎಂದರು.</p>.<p>ಥಳಿಸಿದ ಪೊಲೀಸರ ವಿರುದ್ಧ ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ಹಾಗೂ ದಲಿತ ಸಮುದಾಯದ ಮುಖಂಡರು ಆಗ್ರಹಿಸಿದಾಗ, ‘ನನಗೆ ಒಂದು ವಾರ ಸಮಯ ಕೊಡಿ. ಎಲ್ಲವನ್ನೂ ಪರಿಶೀಲಿಸಿ, ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇನೆ’ ಎಂದರು.</p>.<p>ಇದಕ್ಕೆ ಸಮ್ಮತಿಸಿದ ಗ್ರಾಮಸ್ಥರು ಪ್ರತಿಭಟನೆಯನ್ನು ವಾಪಸ್ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಳ್ಳೇಗಾಲ: ‘</strong>ಶಾಸಕ ಎನ್.ಮಹೇಶ್ ಅವರಿಗೆ ಚಪ್ಪಲಿ ತೋರಿಸಿದ್ದಾರೆ ಎಂಬ ಆರೋಪದಲ್ಲಿ ಪೊಲೀಸರು ಗ್ರಾಮದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ’ ಎಂದು ಆರೋಪಿಸಿ ತಾಲ್ಲೂಕಿನ ಉತ್ತಂಬಳ್ಳಿ ಗ್ರಾಮಸ್ಥರು ನಗರ ಠಾಣೆಯ ಮುಂದೆ ಶುಕ್ರವಾರ ಸಂಜೆ ದಿಢೀರ್ ಪ್ರತಿಭಟನೆ ನಡೆಸಿದರು.</p>.<p>ಉತ್ತಂಬಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ಕೊಂಡೋತ್ಸವ ನಡೆದಿತ್ತು. ಶಾಸಕ ಎನ್.ಮಹೇಶ್ ಅವರು ಕೊಂಡೋತ್ಸವದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸಿದ್ದರಾಜು ಎಂಬುವವರು, ‘ನೀವು ಏನೂ ಕೆಲಸ ಮಾಡಿಲ್ಲ. ಯಾಕೆ ಗ್ರಾಮಕ್ಕೆ ಬರುತ್ತಿದ್ದೀರಿ? ನೀವು ಮಾಡಿರುವ ಅಭಿವೃದ್ಧಿ ಶೂನ್ಯ. ಗ್ರಾಮಕ್ಕೆ ಬರುವ ಅರ್ಹತೆ ನಿಮಗೆ ಇಲ್ಲ’ ಎಂದು ನೇರವಾಗಿ ಶಾಸಕ ಎನ್.ಮಹೇಶ್ ಅವರಿಗೆ ಹೇಳಿದ್ದಾರೆ ಎನ್ನಲಾಗಿದೆ.</p>.<p>ಈ ವೇಳೆ, ಎನ್.ಮಹೇಶ್ ಹಾಗೂ ಸಿದ್ದರಾಜು ಅವರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭದಲ್ಲಿ ಸಿದ್ದರಾಜು ಅವರು ಶಾಸಕರಿಗೆ ಚಪ್ಪಲಿ ತೋರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಸಿದ್ದರಾಜು ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹೇಶ್ ಅವರು ಪೊಲೀಸರಿಗೆ ಸೂಚನೆ ನೀಡಿದ್ದರು ಎನ್ನಲಾಗಿದೆ. ಆದರೆ, ಇದನ್ನು ಶಾಸಕರು ನಿರಾಕರಿಸಿದ್ದಾರೆ. </p>.<p>‘ಶಾಸಕರ ಸೂಚನೆಯ ಮೇರೆಗೆ ಪೊಲೀಸರು ಸಿದ್ದರಾಜು ಅವರನ್ನು ಅಗರ–ಮಾಂಬಳ್ಳಿ ಠಾಣೆಗೆ ಕರೆದೊಯ್ದು, ಅವರಿಗೆ ಹಿಗ್ಗಾ ಮುಗ್ಗ ಹೊಡೆದಿದ್ದಾರೆ’ ಎಂಬುದು ಗ್ರಾಮಸ್ಥರ ಆರೋಪ.</p>.<p>ಆಸ್ಪತ್ರೆಗೆ ದಾಖಲು: ಪೊಲೀಸರ ಏಟು ತಿಂದು ಅಸ್ವಸ್ಥಗೊಂಡಿದ್ದ ಸಿದ್ದರಾಜು ಅವರನ್ನು ಸಂಜೆಯ ಹೊತ್ತಿಗೆ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆಯ ಬಳಿಕ ಸಿದ್ದರಾಜು ಕೊಂಚ ಚೇತರಿಸಿಕೊಂಡರು.</p>.<p>ಆಸ್ಪತ್ರೆಯ ಮುಂದೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಜು, ‘ನೋಡಪ್ಪ ಹೇಗೆ ಹೋಗ್ತಾ ಇದ್ದಾನೆ? ನಾವು ಸಾಯುವವರೆಗೆ ಹೀಗೆ ಇರುವಂತಾಯಿತಲ್ಲ ಎಂದು ಶಾಸಕರನ್ನು ನೋಡಿ ಹೇಳಿದ್ದೆ. ಆದರೆ, ನಾನು ಚಪ್ಪಲಿ ತೋರಿಸಿದ್ದೇನೆ ಎಂದು ಆರೋಪಿಸಲಾಗಿದೆ. ನಾನು ಚಪ್ಪಲಿಯೇ ಧರಿಸಿರಲಿಲ್ಲ’ ಎಂದರು.</p>.<p>‘ಶಾಸಕರಿಗೆ ಚಪ್ಪಲಿ ತೋರಿಸಿದ್ದೇನೆ ಎಂದು ನನ್ನನ್ನು ಪೊಲೀಸರು ಅಗರ ಮಾಂಬಳ್ಳಿ ಠಾಣೆಗೆ ಕರೆದೊಯ್ದು ಸಿಕ್ಕಾಪಟ್ಟೆ ಹೊಡೆದಿದ್ದಾರೆ. ಹಗ್ಗದಲ್ಲಿ ನೇತಾಡಿಸಿ ಬಡಿದಿದ್ದಾರೆ. ಬೇಡ ಬೇಡ ಎಂದರೂ ಕೇಳಲಿಲ್ಲ. ನನಗೆ ಹೊಡೆದವರಿಗೆ ಶಿಕ್ಷೆಯಾಗಬೇಕು. ಮುಂದೆ ಯಾರಿಗೂ ಈ ರೀತಿ ಆಗಬಾರದು’ ಎಂದು ಹೇಳಿದರು. </p>.<p>ಪ್ರತಿಭಟನೆ: ವಿಷಯ ತಿಳಿಯುತ್ತಿದ್ದಂತೆಯೇ ಗ್ರಾಮದಿಂದ ಭಾರಿ ಸಂಖ್ಯೆಯಲ್ಲಿ ಬಂದ ಜನರು ಹಾಗೂ ನಗರದ ದಲಿತ ಮುಖಂಡರು ನಗರ ಪೊಲೀಸ್ ಠಾಣೆಯ ಮುಂದೆ ಸೇರಿ ಪ್ರತಿಭಟನೆ ಆರಂಭಿಸಿ, ಶಾಸಕರು ಹಾಗೂ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಿದ್ದರಾಜು ಮೇಲೆ ಹಲ್ಲೆ ಮಾಡಿರುವ ಪೊಲೀಸ್ ಸಿಬ್ಬಂದಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಪಟ್ಟು ಹಿಡಿದರು.</p>.<p><strong>ವಾರದಲ್ಲಿ ಕ್ರಮದ ಭರವಸೆ </strong></p>.<p>ಉತ್ತಂಬಳ್ಳಿ ಗ್ರಾಮಸ್ಥರು ಹಾಗೂ ನಗರದ ದಲಿತ ಮುಖಂಡರು ಪಟ್ಟು ಸಡಿಲಿಸದೇ ಇದ್ದಾಗ, ಸ್ಥಳಕ್ಕೆ ಬಂದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರ್ರಾಜ್ ಅವರು ಪ್ರತಿಭಟನಕಾರರ ಮನವೊಲಿಸಲು ಯತ್ನಿಸಿದರು.</p>.<p>‘ಯಳಂದೂರು ಸರ್ಕಲ್ ಇನ್ಸ್ಪೆಕ್ಟರ್ ಶಿವಮಾದಯ್ಯ ಅವರು ವಿಚಾರಣೆಗಾಗಿ ಸಿದ್ದರಾಜು ಅವರನ್ನು ಕರೆದುಕೊಂಡು ಹೋಗಿದ್ದರು. ಶಾಸಕರನ್ನು ಕರೆಸಲು, ಅಥವಾ ಅವರ ಬಳಿ ಈ ವಿಚಾರವಾಗಿ ಮಾತನಾಡಲು ನಮಗೆ ಸಾಧ್ಯವಿಲ್ಲ. ಆದರೆ, ಪೊಲೀಸರಿಂದ ಲೋಪ ಆಗಿದೆ ಎಂದು ಆರೋಪಿಸಿದ್ದೀರಿ. ಈ ಬಗ್ಗೆ ಪರಿಶೀಲನೆ ನಡೆಸುತ್ತೇವೆ’ ಎಂದರು.</p>.<p>ಥಳಿಸಿದ ಪೊಲೀಸರ ವಿರುದ್ಧ ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ಹಾಗೂ ದಲಿತ ಸಮುದಾಯದ ಮುಖಂಡರು ಆಗ್ರಹಿಸಿದಾಗ, ‘ನನಗೆ ಒಂದು ವಾರ ಸಮಯ ಕೊಡಿ. ಎಲ್ಲವನ್ನೂ ಪರಿಶೀಲಿಸಿ, ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇನೆ’ ಎಂದರು.</p>.<p>ಇದಕ್ಕೆ ಸಮ್ಮತಿಸಿದ ಗ್ರಾಮಸ್ಥರು ಪ್ರತಿಭಟನೆಯನ್ನು ವಾಪಸ್ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>