<p><strong>ಚಾಮರಾಜನಗರ:</strong> ‘ರಾಜ್ಯ ಸರ್ಕಾರದ ಖಜಾನೆ ಬರಿದಾಗಿದೆ. ಸಿದ್ದರಾಮಯ್ಯ ಡಮ್ಮಿ ಮುಖ್ಯಮಂತ್ರಿಯಾಗಿದ್ದಾರೆ’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಸೋಮವಾರ ಇಲ್ಲಿ ಟೀಕಿಸಿದರು.</p>.<p>ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಸರ್ಕಾರದ ಹುಳುಕು ಮುಚ್ಚಲು ಏನು ಬೇಕಾದರೂ ಮಾಡುವ ಸಿದ್ದರಾಮಯ್ಯ, ಎರಡನೇ ಬಾರಿ ಮುಖ್ಯಮಂತ್ರಿಯಾದ ಮೇಲೆ ನಿಷ್ಕ್ರಿಯರಾಗಿದ್ದಾರೆ’ ಎಂದರು.</p>.<p>‘ಬಳ್ಳಾರಿಯಲ್ಲಿ ಕಾಂಗ್ರೆಸ್ನವರು ಮಾಡಿರುವ ಪಾಪದ ಕೆಲಸ ಎಲ್ಲರಿಗೂ ತಿಳಿದಿದ್ದು, ಕಾನೂನು ಪ್ರಕಾರ ಕ್ರಮಕೈಗೊಳ್ಳಬೇಕು. ಮುಗ್ಧ ಜನರನ್ನು ಬಲಿ ಕೊಡಬಾರದು, ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರೂ ಕಾನೂನು ಕ್ರಮ ಜರುಗಿಸದಿದ್ದರೆ ಮುಖ್ಯಮಂತ್ರಿ ರಾಜ್ಯದ ಖಳನಾಯಕರಾಗುತ್ತಾರೆ’ ಎಂದು ಹೇಳಿದರು.</p>.<p>‘ಸಚಿವ ಮುನಿಯಪ್ಪ ಅವರು ತಮ್ಮ ಸ್ಥಾನ ಉಳಿಸಿಕೊಳ್ಳಲೆಂದೇ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಹೇಳಿದ್ದಾರಷ್ಟೆ. ಅವರು ಗಡುಸಾಗಿ ಮಾತನಾಡುವುದನ್ನು ಕಲಿಯಬೇಕು’ ಎಂದರು.</p>.<p>‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆಯಾಗುತ್ತದೆಯೇ’ ಎಂಬ ಪ್ರಶ್ನೆಗೆ ಸಚಿವರು ಉತ್ತರಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ‘ರಾಜ್ಯ ಸರ್ಕಾರದ ಖಜಾನೆ ಬರಿದಾಗಿದೆ. ಸಿದ್ದರಾಮಯ್ಯ ಡಮ್ಮಿ ಮುಖ್ಯಮಂತ್ರಿಯಾಗಿದ್ದಾರೆ’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಸೋಮವಾರ ಇಲ್ಲಿ ಟೀಕಿಸಿದರು.</p>.<p>ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಸರ್ಕಾರದ ಹುಳುಕು ಮುಚ್ಚಲು ಏನು ಬೇಕಾದರೂ ಮಾಡುವ ಸಿದ್ದರಾಮಯ್ಯ, ಎರಡನೇ ಬಾರಿ ಮುಖ್ಯಮಂತ್ರಿಯಾದ ಮೇಲೆ ನಿಷ್ಕ್ರಿಯರಾಗಿದ್ದಾರೆ’ ಎಂದರು.</p>.<p>‘ಬಳ್ಳಾರಿಯಲ್ಲಿ ಕಾಂಗ್ರೆಸ್ನವರು ಮಾಡಿರುವ ಪಾಪದ ಕೆಲಸ ಎಲ್ಲರಿಗೂ ತಿಳಿದಿದ್ದು, ಕಾನೂನು ಪ್ರಕಾರ ಕ್ರಮಕೈಗೊಳ್ಳಬೇಕು. ಮುಗ್ಧ ಜನರನ್ನು ಬಲಿ ಕೊಡಬಾರದು, ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರೂ ಕಾನೂನು ಕ್ರಮ ಜರುಗಿಸದಿದ್ದರೆ ಮುಖ್ಯಮಂತ್ರಿ ರಾಜ್ಯದ ಖಳನಾಯಕರಾಗುತ್ತಾರೆ’ ಎಂದು ಹೇಳಿದರು.</p>.<p>‘ಸಚಿವ ಮುನಿಯಪ್ಪ ಅವರು ತಮ್ಮ ಸ್ಥಾನ ಉಳಿಸಿಕೊಳ್ಳಲೆಂದೇ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಹೇಳಿದ್ದಾರಷ್ಟೆ. ಅವರು ಗಡುಸಾಗಿ ಮಾತನಾಡುವುದನ್ನು ಕಲಿಯಬೇಕು’ ಎಂದರು.</p>.<p>‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆಯಾಗುತ್ತದೆಯೇ’ ಎಂಬ ಪ್ರಶ್ನೆಗೆ ಸಚಿವರು ಉತ್ತರಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>