<p><strong>ಚಾಮರಾಜನಗರ:</strong> ''ಎಲ್ಲ ಮುಸ್ಲಿಮರು ಕೆಟ್ಟವರಲ್ಲ, ಹಿಂದೂಗಳೆಲ್ಲರೂ ಒಳ್ಳೆಯವರಲ್ಲ. ಕಾಶ್ಮೀರ ಫೈಲ್ಸ್ ಚಿತ್ರವನ್ನು ಮುಸ್ಲಿಮರೂ ನೋಡ್ತಾರೆ. ಇತಿಹಾಸದಲ್ಲಿ ನಡೆದ ಘಟನೆ ಮುಂದೆ ಪುನರಾವರ್ತನೆಯಾಗಬಾರದು ಎಂಬ ಉದ್ದೇಶದಿಂದ ಸಿನಿಮಾ ಬಂದಿದೆ'' ಎಂದು ವಸತಿ, ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಹೇಳಿದರು.</p>.<p>ಕೊಳ್ಳೇಗಾಲದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ''ಕಾಶ್ಮೀರಕ್ಕೆ ನಾನೂ ಹಲವು ಬಾರಿ ಹೋಗಿದ್ದೇನೆ. ಅದು ಹೇಗಿದೆ ಎಂಬುದು ಗೊತ್ತಿದೆ. ಹಿಂದೆ ನಡೆದ ವಾಸ್ತವವನ್ನು ಜನರ ಮುಂದೆ ಸಿನಿಮಾ ಇಟ್ಟಿದೆ. ಮುಂದೆ ಇಂತಹದ್ದು ನಡೆಯಬಾರದು ಎಂಬುದು ಉದ್ದೇಶ. ಇದರಲ್ಲಿ ಯಾರದೇ ಪ್ರಾಯೋಜಕತ್ವ ಇಲ್ಲ'' ಎಂದರು.</p>.<p>ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೊಳಿಸುವ ಸರ್ಕಾರದ ಚಿಂತನೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸೋಮಣ್ಣ ಅವರು, ''ನನಗೆ ಈ ವಿಷಯ ಗೊತ್ತಿಲ್ಲ. ಚಾಮರಾಜನಗರದ ಉಸ್ತುವಾರಿ ಕೊಟ್ಟಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ಮಾತ್ರ ಗಮನ ಹರಿಸುತ್ತಿದ್ದೇನೆ. ಪಠ್ಯ ಸಿದ್ಧಪಡಿಸುವುದಕ್ಕಾಗಿ ಸಮಿತಿ ಇದೆ. ಸಾಧಕ ಬಾಧಕಗಳನ್ನು ಚರ್ಚೆ ಮಾಡಿ ನಿರ್ಧರಿಸುತ್ತದೆ. ದೇಶದ ಇತಿಹಾಸವನ್ನು ಮುಂದಿನ ಪೀಳಿಗೆಗೆ ತಲುಪಿಸಲು ಬೇಕಾದ ಕ್ರಮಗಳನ್ನು ಸಮಿತಿ ಕೈಗೊಳ್ಳಲಿದೆ'' ಎಂದರು.</p>.<p><a href="https://www.prajavani.net/district/bengaluru-city/there-is-no-role-of-ravi-d-channannavar-in-demanding-for-bribe-case-cm-basavaraj-bommai-920436.html" itemprop="url">ಲಂಚಕ್ಕೆ ಬೇಡಿಕೆ ಪ್ರಕರಣದಲ್ಲಿ ರವಿ ಚನ್ನಣ್ಣನವರ್ ಪಾತ್ರ ಇಲ್ಲ: ಸಿಎಂ ಬೊಮ್ಮಾಯಿ </a></p>.<p>ವಂಶರಾಜಕಾರಣದ ಬಗ್ಗೆ ಪ್ರಧಾನಿಮೋದಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ''ಕೆಲವರಿಗೆ ಸೀಮಿತವಾದ ರಾಜಕಾರಣದಲ್ಲಿ ಸಾಮಾನ್ಯ ಜನರಿಗೂ ಅವಕಾಶ ಇದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಚಿಂತನೆ ಒಪ್ಪಬೇಕಾಗಿದ್ದೇ'' ಎಂದರು.</p>.<p>''ನನ್ನ ಮಗನಿಗೆ ಅದೃಷ್ಟ ಇದ್ದರೆ ಶಾಸಕ ಆಗುತ್ತಾನೆ. 6.5 ಕೋಟಿ ಜನರಲ್ಲಿ 224 ಜನರು ಮಾತ್ರ ಶಾಸಕರಾಗುವುದು. ನನ್ನ ಮಗ ಶಾಸಕ ಆಗದೇ ಇದ್ದರೆ ಬೇಜಾರೇನಿಲ್ಲ'' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p><strong>ಆರೋಗ್ಯ ವಿಚಾರಣೆ:</strong> ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಬಸ್ ಅಪಘಾತದಲ್ಲಿ ಗಾಯಗೊಂಡು ಕೊಳ್ಳೇಗಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯವನ್ನು ಸೋಮಣ್ಣ ವಿಚಾರಿಸಿದರು.</p>.<p><a href="https://www.prajavani.net/karnataka-news/aap-will-come-to-power-in-karnataka-if-three-parties-not-going-to-change-leadership-warns-bjp-leader-920458.html" itemprop="url">3 ಪಕ್ಷಗಳ ನಾಯಕತ್ವ ಬದಲಾಗದಿದ್ದರೆ ಎಎಪಿ ಅಧಿಕಾರಕ್ಕೆ: ಬಿಜೆಪಿಯ ಲೆಹರ್ ಸಿಂಗ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ''ಎಲ್ಲ ಮುಸ್ಲಿಮರು ಕೆಟ್ಟವರಲ್ಲ, ಹಿಂದೂಗಳೆಲ್ಲರೂ ಒಳ್ಳೆಯವರಲ್ಲ. ಕಾಶ್ಮೀರ ಫೈಲ್ಸ್ ಚಿತ್ರವನ್ನು ಮುಸ್ಲಿಮರೂ ನೋಡ್ತಾರೆ. ಇತಿಹಾಸದಲ್ಲಿ ನಡೆದ ಘಟನೆ ಮುಂದೆ ಪುನರಾವರ್ತನೆಯಾಗಬಾರದು ಎಂಬ ಉದ್ದೇಶದಿಂದ ಸಿನಿಮಾ ಬಂದಿದೆ'' ಎಂದು ವಸತಿ, ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಹೇಳಿದರು.</p>.<p>ಕೊಳ್ಳೇಗಾಲದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ''ಕಾಶ್ಮೀರಕ್ಕೆ ನಾನೂ ಹಲವು ಬಾರಿ ಹೋಗಿದ್ದೇನೆ. ಅದು ಹೇಗಿದೆ ಎಂಬುದು ಗೊತ್ತಿದೆ. ಹಿಂದೆ ನಡೆದ ವಾಸ್ತವವನ್ನು ಜನರ ಮುಂದೆ ಸಿನಿಮಾ ಇಟ್ಟಿದೆ. ಮುಂದೆ ಇಂತಹದ್ದು ನಡೆಯಬಾರದು ಎಂಬುದು ಉದ್ದೇಶ. ಇದರಲ್ಲಿ ಯಾರದೇ ಪ್ರಾಯೋಜಕತ್ವ ಇಲ್ಲ'' ಎಂದರು.</p>.<p>ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೊಳಿಸುವ ಸರ್ಕಾರದ ಚಿಂತನೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸೋಮಣ್ಣ ಅವರು, ''ನನಗೆ ಈ ವಿಷಯ ಗೊತ್ತಿಲ್ಲ. ಚಾಮರಾಜನಗರದ ಉಸ್ತುವಾರಿ ಕೊಟ್ಟಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ಮಾತ್ರ ಗಮನ ಹರಿಸುತ್ತಿದ್ದೇನೆ. ಪಠ್ಯ ಸಿದ್ಧಪಡಿಸುವುದಕ್ಕಾಗಿ ಸಮಿತಿ ಇದೆ. ಸಾಧಕ ಬಾಧಕಗಳನ್ನು ಚರ್ಚೆ ಮಾಡಿ ನಿರ್ಧರಿಸುತ್ತದೆ. ದೇಶದ ಇತಿಹಾಸವನ್ನು ಮುಂದಿನ ಪೀಳಿಗೆಗೆ ತಲುಪಿಸಲು ಬೇಕಾದ ಕ್ರಮಗಳನ್ನು ಸಮಿತಿ ಕೈಗೊಳ್ಳಲಿದೆ'' ಎಂದರು.</p>.<p><a href="https://www.prajavani.net/district/bengaluru-city/there-is-no-role-of-ravi-d-channannavar-in-demanding-for-bribe-case-cm-basavaraj-bommai-920436.html" itemprop="url">ಲಂಚಕ್ಕೆ ಬೇಡಿಕೆ ಪ್ರಕರಣದಲ್ಲಿ ರವಿ ಚನ್ನಣ್ಣನವರ್ ಪಾತ್ರ ಇಲ್ಲ: ಸಿಎಂ ಬೊಮ್ಮಾಯಿ </a></p>.<p>ವಂಶರಾಜಕಾರಣದ ಬಗ್ಗೆ ಪ್ರಧಾನಿಮೋದಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ''ಕೆಲವರಿಗೆ ಸೀಮಿತವಾದ ರಾಜಕಾರಣದಲ್ಲಿ ಸಾಮಾನ್ಯ ಜನರಿಗೂ ಅವಕಾಶ ಇದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಚಿಂತನೆ ಒಪ್ಪಬೇಕಾಗಿದ್ದೇ'' ಎಂದರು.</p>.<p>''ನನ್ನ ಮಗನಿಗೆ ಅದೃಷ್ಟ ಇದ್ದರೆ ಶಾಸಕ ಆಗುತ್ತಾನೆ. 6.5 ಕೋಟಿ ಜನರಲ್ಲಿ 224 ಜನರು ಮಾತ್ರ ಶಾಸಕರಾಗುವುದು. ನನ್ನ ಮಗ ಶಾಸಕ ಆಗದೇ ಇದ್ದರೆ ಬೇಜಾರೇನಿಲ್ಲ'' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p><strong>ಆರೋಗ್ಯ ವಿಚಾರಣೆ:</strong> ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಬಸ್ ಅಪಘಾತದಲ್ಲಿ ಗಾಯಗೊಂಡು ಕೊಳ್ಳೇಗಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯವನ್ನು ಸೋಮಣ್ಣ ವಿಚಾರಿಸಿದರು.</p>.<p><a href="https://www.prajavani.net/karnataka-news/aap-will-come-to-power-in-karnataka-if-three-parties-not-going-to-change-leadership-warns-bjp-leader-920458.html" itemprop="url">3 ಪಕ್ಷಗಳ ನಾಯಕತ್ವ ಬದಲಾಗದಿದ್ದರೆ ಎಎಪಿ ಅಧಿಕಾರಕ್ಕೆ: ಬಿಜೆಪಿಯ ಲೆಹರ್ ಸಿಂಗ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>