ಸಮೀಪದ ಅಂಬಳೆ, ಗೂಳಿಪುರ ಸೇರಿದಂತೆ ಇತರೆ ಗ್ರಾಮಗಳ ಜನರು ಈ ಊರಿನ ಮೂಲಕವೇ ವಾಹನಗಳಲ್ಲಿ ಸಂಚರಿಸುತ್ತಿದ್ದರು. ಇದರಿಂದ ಗ್ರಾಮದಲ್ಲಿ ವಾಹನ ಸಂಚಾರಕ್ಕೆ ಕಡಿವಾಣ ಬಿದ್ದಿರಲಿಲ್ಲ. ಹೀಗಾಗಿ, ಈ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನೇ ಗ್ರಾಮಸ್ಥರು ಬಂದ್ ಮಾಡಿದ್ದಾರೆ. ಪರ್ಯಾಯ ರಸ್ತೆಯಲ್ಲಿ ಸಂಚರಿಸುವಂತೆ ಇತರೆ ಗ್ರಾಮಗಳ ಜನರಿಗೆ ಹೇಳಿದ್ದಾರೆ.