<p><strong>ಚಾಮರಾಜನಗರ</strong>:ಗ್ರಾಮೀಣ ಜನರಿಗೆ ತರಕಾರಿ ಹಾಗೂ ಹಣ್ಣುಗಳ ಅಭಾವ ಉಂಟಾಗಬಾರದು ಎಂಬ ಉದ್ದೇಶದಿಂದ ತೋಟಗಾರಿಕಾ ಇಲಾಖೆ ಹಾಗೂ ಹಾಪ್ಕಾಮ್ಸ್ ಜಂಟಿಯಾಗಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ತರಕಾರಿ ಹಾಗೂ ಹಣ್ಣುಗಳನ್ನು ಮಾರಾಟ ಮಾಡಲು ಮುಂದಾಗಿದೆ.</p>.<p>ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಶುಕ್ರವಾರ ಜಿಲ್ಲಾಡಳಿತ ಭವನದ ಎದುರು ತರಕಾರಿ ಹಾಗೂ ಹಣ್ಣುಗಳ ಮಾರಾಟ ವಾಹನಕ್ಕೆ ಹಸಿರು ನಿಶಾನೆ ತೋರಿಸಿದರು.</p>.<p>ನಂತರ ಮಾತನಾಡಿದ ಅವರು, ‘ಆನ್ಆರ್ಎಲ್ಎನ್ ಸಿಬ್ಬಂದಿ ಬಳಸಿಕೊಂಡು ಎಲ್ಲ 130 ಗ್ರಾಮ ಪಂಚಾಯಿತಿಗಳಲ್ಲೂ ತರಕಾರಿ ಹಾಗೂ ಹಣ್ಣುಗಳನ್ನು ಮಾರಾಟ ಮಾಡಲಾಗುವುದು. ಗ್ರಾಮ ಪಂಚಾಯಿತಿ ಆದ ನಂತರ ಇತರ ಹಳ್ಳಿಗಳಿಗೂ ಇದನ್ನು ವಿಸ್ತರಿಸಲಾಗುವುದು’ ಎಂದು ಹೇಳಿದರು.</p>.<p>‘ಇದಲ್ಲದೇ, ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಶನಿವಾರದಿಂದ ಸಂಚಾರಿ ವಾಹನಗಳ ಮೂಲಕ ಎಲ್ಲರಿಗೂ ಅಗತ್ಯ ವಸ್ತುಗಳನ್ನು ಪೂರೈಸುವ ಉದ್ದೇಶವನ್ನು ಹೊಂದಿದ್ದೇವೆ’ ಎಂದರು.</p>.<p>‘ಇದುವರೆಗೆ ಕಾಳಸಂತೆಯಲ್ಲಿ ವಸ್ತುಗಳ ಮಾರಾಟ, ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಪ್ರಕರಣಗಳು ಜಿಲ್ಲೆಯಲ್ಲಿ ಕಂಡು ಬಂದಿಲ್ಲ. ಈಗಿನ ಸ್ಥಿತಿಯನ್ನು ದರ್ಬಳಕೆ ಮಾಡಿಕೊಂಡರೆ ಅಂತಹ ವ್ಯಾಪಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ’ ಎಂದು ಪ್ರಶ್ನೆಯೊಂದಕ್ಕೆ ಜಿಲ್ಲಾಧಿಕಾರಿ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>:ಗ್ರಾಮೀಣ ಜನರಿಗೆ ತರಕಾರಿ ಹಾಗೂ ಹಣ್ಣುಗಳ ಅಭಾವ ಉಂಟಾಗಬಾರದು ಎಂಬ ಉದ್ದೇಶದಿಂದ ತೋಟಗಾರಿಕಾ ಇಲಾಖೆ ಹಾಗೂ ಹಾಪ್ಕಾಮ್ಸ್ ಜಂಟಿಯಾಗಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ತರಕಾರಿ ಹಾಗೂ ಹಣ್ಣುಗಳನ್ನು ಮಾರಾಟ ಮಾಡಲು ಮುಂದಾಗಿದೆ.</p>.<p>ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಶುಕ್ರವಾರ ಜಿಲ್ಲಾಡಳಿತ ಭವನದ ಎದುರು ತರಕಾರಿ ಹಾಗೂ ಹಣ್ಣುಗಳ ಮಾರಾಟ ವಾಹನಕ್ಕೆ ಹಸಿರು ನಿಶಾನೆ ತೋರಿಸಿದರು.</p>.<p>ನಂತರ ಮಾತನಾಡಿದ ಅವರು, ‘ಆನ್ಆರ್ಎಲ್ಎನ್ ಸಿಬ್ಬಂದಿ ಬಳಸಿಕೊಂಡು ಎಲ್ಲ 130 ಗ್ರಾಮ ಪಂಚಾಯಿತಿಗಳಲ್ಲೂ ತರಕಾರಿ ಹಾಗೂ ಹಣ್ಣುಗಳನ್ನು ಮಾರಾಟ ಮಾಡಲಾಗುವುದು. ಗ್ರಾಮ ಪಂಚಾಯಿತಿ ಆದ ನಂತರ ಇತರ ಹಳ್ಳಿಗಳಿಗೂ ಇದನ್ನು ವಿಸ್ತರಿಸಲಾಗುವುದು’ ಎಂದು ಹೇಳಿದರು.</p>.<p>‘ಇದಲ್ಲದೇ, ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಶನಿವಾರದಿಂದ ಸಂಚಾರಿ ವಾಹನಗಳ ಮೂಲಕ ಎಲ್ಲರಿಗೂ ಅಗತ್ಯ ವಸ್ತುಗಳನ್ನು ಪೂರೈಸುವ ಉದ್ದೇಶವನ್ನು ಹೊಂದಿದ್ದೇವೆ’ ಎಂದರು.</p>.<p>‘ಇದುವರೆಗೆ ಕಾಳಸಂತೆಯಲ್ಲಿ ವಸ್ತುಗಳ ಮಾರಾಟ, ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಪ್ರಕರಣಗಳು ಜಿಲ್ಲೆಯಲ್ಲಿ ಕಂಡು ಬಂದಿಲ್ಲ. ಈಗಿನ ಸ್ಥಿತಿಯನ್ನು ದರ್ಬಳಕೆ ಮಾಡಿಕೊಂಡರೆ ಅಂತಹ ವ್ಯಾಪಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ’ ಎಂದು ಪ್ರಶ್ನೆಯೊಂದಕ್ಕೆ ಜಿಲ್ಲಾಧಿಕಾರಿ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>