ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿರುವ ಸೆಸ್ಕ್ನ ಚಾಮರಾಜನಗರ ಉಪವಿಭಾಗದ ಕಾರ್ಯಪಾಲಕ ಎಂಜಿನಿಯರ್ ವಸಂತಕುಮಾರ್, ‘ದೂರು ಇನ್ನೂ ನನ್ನ ಕೈಸೇರಿಲ್ಲ. ಕಚೇರಿಯಲ್ಲಿ ಕೊಟ್ಟಿದ್ದರೆ, ಅದನ್ನು ಪರಿಶೀಲಿಸುತ್ತೇನೆ. ಘಟನೆ ಬಗ್ಗೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರಿಂದ ವರದಿ ತರಿಸಿಕೊಂಡು ನಂತರ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.