ಶಾಲೆಯಲ್ಲಿ 44 ಮಕ್ಕಳು ಓದುತ್ತಿದ್ದು, ಮುಖ್ಯ ಶಿಕ್ಷಕ ಹಾಗೂ ಒಬ್ಬ ಶಿಕ್ಷಕಿ ಇದ್ದಾರೆ. ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಬಿಇಒ ಮಂಜುಳಾ, ‘ಶಾಲೆ ಹಾಗೂ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರನ್ನು ಮನವೊಲಿಸಿದ್ದೇವೆ. ತಪ್ಪಿತಸ್ಥರಿಗೆ ಕಾನೂನು ರೀತಿಯಲ್ಲಿ ಶಿಕ್ಷೆ ಆಗುವುದು ಖಚಿತ. ನಾಳೆಯಿಂದ ಮಕ್ಕಳನ್ನು ಶಾಲೆಗೆ ಕಳುಹಿಸಿ ಎಂದು ಹೇಳಿದ್ದೇವೆ’ ಎಂದರು.