ಸಮೀಪದ ಜನಾರ್ಧನಸ್ವಾಮಿದೇವಾಲಯದಲ್ಲಿಯೂ ವಿಷ್ಣು ದೀಪೋತ್ಸವ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಂಗವಾಗಿ ದೇವಾಲಯದಲ್ಲಿ ಪೂಜಾ ವಿಧಾನಗಳನ್ನು ಪೂರೈಸಿದ ಬಳಿಕ ದೇವರ ಉತ್ಸವ ನಡೆಸಲಾಯಿತು. ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಡಿ.ವಿ. ಪಾಟೀಲ, ಸಿದ್ದಮಲ್ಲೇಶ್ವರ ವಿರಕ್ತ ಮಠಾಧ್ಯಕ್ಷ ಚನ್ನಬಸವಸ್ವಾಮೀಜಿ ಉತ್ಸವದಲ್ಲಿ ಪಾಲ್ಗೊಂಡಿದ್ದರು.