ನಗರಸಭೆ ಅಧ್ಯಕ್ಷೆ ಸಿ.ಎಂ.ಆಶಾ ಅವರು ಮಾತನಾಡಿ, ‘ಜಯಂತಿ, ಆಚರಣೆಗಳು ಪೂಜೆ ಪುನಸ್ಕಾರಗಳಿಗೆ ಮಾತ್ರ ಸೀಮಿತವಾಗದೆ, ಶ್ರೇಷ್ಠರ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಇತರರಿಗೂ ಮಾದರಿಯಾಗಬೇಕು’ ಎಂದರು.
ಮುಖ್ಯ ಭಾಷಣಕಾರರಾದ ಮೈಸೂರಿನ ಶಿಕ್ಷಣ ಇಲಾಖೆ ನಿವೃತ್ತ ಉಪನಿರ್ದೇಶಕ ಮಂಟೇಲಿಂಗಾಚಾರ್ ಅವರು ಮಾತನಾಡಿ, ‘ತಮ್ಮ ಕುಶಲ ಕೆಲಸ ಕಾರ್ಯದಿಂದಲೇ ಆದಿ ವಿಶ್ವಕರ್ಮ, ಜಕ್ಕಣ್ಣಚಾರಿ ಇನ್ನಿತರರು ಜಗತ್ತಿನಾದ್ಯಂತ ಪ್ರಸಿದ್ಧಿ ಹೊಂದಿದ್ದಾರೆ. ಇವರ ಕರಕುಶಲತೆ ಸಾಮಾನ್ಯ ವ್ಯಕ್ತಿಯ ಮನೆಯಿಂದ ದೇವಾಲಯದವರೆಗೂ ಹಬ್ಬಿದೆ. ಸಮಾಜಕ್ಕೆ ಸದ್ವಿಚಾರಗಳನ್ನು ತಿಳಿಸುವ ಕಾರ್ಯವನ್ನು ಪ್ರತಿಯೊಬ್ಬರೂ ಮಾಡಬೇಕಾಗಿದೆ’ ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಕೆ. ಗೀರಿಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಎಚ್.ಎಸ್.ಗಂಗಾಧರ್, ಸಮುದಾಯದ ಅಧ್ಯಕ್ಷರಾದ ಸೋಮಣ್ಣಚಾರ್ ಮತ್ತು ನಾಗೇಂದ್ರಬಾಬು, ಮುಖಂಡರಾದ ಶ್ರೀನಿವಾಸ್ ಪ್ರಸಾದ್, ಮಧು, ಕುಮಾರ್, ಶಂಭುಲಿಂಗಸ್ವಾಮಿ, ಬಂಡಳ್ಳಿ ಶ್ರೀನಿವಾಸ್, ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಸಿ.ಎಂ. ನರಸಿಂಹಮೂರ್ತಿ, ನಿಜಧ್ವನಿ ಸೇನಾಸಮಿತಿ ಅಧ್ಯಕ್ಷ ಗೋವಿಂದರಾಜು, ಜೈ ಭುವನೇಶ್ವರಿ ಕನ್ನಡ ಯುವಕರ ಸಂಘದ ಅಧ್ಯಕ್ಷ ಜಿ. ಬಂಗಾರು ಇದ್ದರು.