<p><strong>ಯಳಂದೂರು</strong>: ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ ವಾಂತಿಭೇದಿಯಿಂದ ಬಳಲಿದ್ದ 9 ಜನರು ಮನೆಗೆ ಹಿಂತಿರುಗಿದ ನಂತರ, ಮತ್ತೆ ನಾಲ್ವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಚಾಮರಾಜನಗರ ಮತ್ತು ಯಳಂದೂರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.</p>.<p>ಇದರ ನಡುವೆ, ಗ್ರಾಮದ ವೃದ್ಧ ನಿಂಗಯ್ಯ ಎಂಬುವವರು ಭಾನುವಾರ ಮರಣ ಹೊಂದಿದ್ದು, ಅವರು ಕಲುಷಿತ ನೀರಿನ ಸೇವನೆಯಿಂದಲೇ ಅಸ್ವಸ್ಥರಾಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅಧಿಕಾರಿಗಳನ್ನು ಇದನ್ನು ನಿರಾಕರಿಸಿದ್ದರು.</p>.<p>‘ನಿಂಗಯ್ಯ ಅವರು ಉಬ್ಬಸದಿಂದ ಬಳಲುತ್ತಿದ್ದರು’ ಎಂದು ಯಳಂದೂರು ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಶ್ರೀಧರ್ ‘ಪ್ರಜಾವಾಣಿ’ಗೆ ತಿಳಿಸಿದರು. </p>.<p>ಈ ಬಗ್ಗೆ ಗ್ರಾಮಸ್ಥರು ಹೆಚ್ಚಿನ ಮಾಹಿತಿ ನೀಡುತ್ತಿಲ್ಲ. ಸೋಮವಾರ ಸಂಜೆ ಮೃತರ ಅಂತ್ಯಕ್ರಿಯೆ ನಡೆದಿದೆ. </p>.<p>ಮತ್ತೆ ಅಸ್ವಸ್ಥರಾದವರಲ್ಲಿ ಮೂವರು ಯಳಂದೂರು ಆಸ್ಪತ್ರೆಗೆ ದಾಖಲಾಗಿದ್ದು, ಮತ್ತೊಬ್ಬರು ಚಾಮರಾಜನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. </p>.<p>ಈ ಮೊದಲು ಅಸ್ವಸ್ಥರಾಗಿದ್ದ ಒಂಬತ್ತು ಮಂದಿ ಗ್ರಾಮದ ತೊಂಬೆಯ ಕಲುಷಿತ ನೀರು ಕುಡಿದಿದ್ದರು ಎಂದು ಹೇಳಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಳಂದೂರು</strong>: ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ ವಾಂತಿಭೇದಿಯಿಂದ ಬಳಲಿದ್ದ 9 ಜನರು ಮನೆಗೆ ಹಿಂತಿರುಗಿದ ನಂತರ, ಮತ್ತೆ ನಾಲ್ವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಚಾಮರಾಜನಗರ ಮತ್ತು ಯಳಂದೂರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.</p>.<p>ಇದರ ನಡುವೆ, ಗ್ರಾಮದ ವೃದ್ಧ ನಿಂಗಯ್ಯ ಎಂಬುವವರು ಭಾನುವಾರ ಮರಣ ಹೊಂದಿದ್ದು, ಅವರು ಕಲುಷಿತ ನೀರಿನ ಸೇವನೆಯಿಂದಲೇ ಅಸ್ವಸ್ಥರಾಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅಧಿಕಾರಿಗಳನ್ನು ಇದನ್ನು ನಿರಾಕರಿಸಿದ್ದರು.</p>.<p>‘ನಿಂಗಯ್ಯ ಅವರು ಉಬ್ಬಸದಿಂದ ಬಳಲುತ್ತಿದ್ದರು’ ಎಂದು ಯಳಂದೂರು ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಶ್ರೀಧರ್ ‘ಪ್ರಜಾವಾಣಿ’ಗೆ ತಿಳಿಸಿದರು. </p>.<p>ಈ ಬಗ್ಗೆ ಗ್ರಾಮಸ್ಥರು ಹೆಚ್ಚಿನ ಮಾಹಿತಿ ನೀಡುತ್ತಿಲ್ಲ. ಸೋಮವಾರ ಸಂಜೆ ಮೃತರ ಅಂತ್ಯಕ್ರಿಯೆ ನಡೆದಿದೆ. </p>.<p>ಮತ್ತೆ ಅಸ್ವಸ್ಥರಾದವರಲ್ಲಿ ಮೂವರು ಯಳಂದೂರು ಆಸ್ಪತ್ರೆಗೆ ದಾಖಲಾಗಿದ್ದು, ಮತ್ತೊಬ್ಬರು ಚಾಮರಾಜನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. </p>.<p>ಈ ಮೊದಲು ಅಸ್ವಸ್ಥರಾಗಿದ್ದ ಒಂಬತ್ತು ಮಂದಿ ಗ್ರಾಮದ ತೊಂಬೆಯ ಕಲುಷಿತ ನೀರು ಕುಡಿದಿದ್ದರು ಎಂದು ಹೇಳಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>