<p><strong>ಗುಂಡ್ಲುಪೇಟೆ:</strong> ಪಟ್ಟಣದಲ್ಲಿ ಮತಗಳ್ಳತನ ವಿರುದ್ಧದ ಅಭಿಯಾನಕ್ಕೆ ಸ್ಟಿಕ್ಕರ್ ಅಂಟಿಸುವ ಮೂಲಕ ಶಾಸಕ ಎಚ್.ಎಂ.ಗಣೇಶಪ್ರಸಾದ್ ಚಾಲನೆ ನೀಡಿದರು.</p>.<p>ಪಟ್ಟಣದ ಪ್ರವಾಸಿ ಮಂದಿರದಲ್ಲಿ ಯೂತ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ ಆದೇಶದ ಮೇರೆಗೆ ಮತಗಳ್ಳಗನದ ವಿರುದ್ಧ ಅಭಿಯಾನ ಆರಂಭಿಸಲಾಗಿದೆ. ಈ ಬಗ್ಗೆ ಸಾರ್ವಜನಿಕರು ಜಾಗೃತರಾಗಬೇಕು ಎಂದು ಸಲಹೆ ನೀಡಿದರು.</p>.<p>ಹೊರ ರಾಜ್ಯದಲ್ಲಿ ಇತ್ತೀಚಿಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯೊಂದರಲ್ಲಿ 50 ಮತ ಹೆಚ್ಚುವರಿಯಾಗಿ ಚಲಾವಣೆಯಾಗಿದೆ. ಈ ಕುರಿತು ಸುಪ್ರಿಂ ಕೋರ್ಟ್ ಕೂಡ ಆದೇಶ ಎತ್ತಿ ಹಿಡಿದಿದೆ. ಇದರ ಬಗ್ಗೆ ಮತದಾರರು ಚಿಂತನೆ ನಡೆಸಬೇಕು. ಜೊತೆಗೆ ಬಿಜೆಪಿಯ ಮತಗಳ್ಳತನದ ವಿರುದ್ಧ ಇತರರಿಗೂ ತಿಳಿಸಬೇಕು ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ಮಡಹಳ್ಳಿ ಮಣಿ, ಗಿರೀಶ್ ಲಕ್ಕೂರು, ಗೋಪಾಲಪುರ ಲೋಕೇಶ್, ಸುನೀಲ್ ಶೆಟ್ಟಿ, ನಾಗರಾಜು, ಕರಕಲಮಾದಹಳ್ಳಿ ಪ್ರಭು, ಎಪಿಎಂಸಿ ಅಧ್ಯಕ್ಷ ನಾಗರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಬಿ.ರಾಜಶೇಖರ್, ಚಾಮುಲ್ ನಿರ್ದೇಶಕ ನಂಜುಂಡಪ್ರಸಾದ್ ಸೇರಿದಂತೆ ಹಲವು ಮಂದಿ ಕಾಂಗ್ರೆಸ್ ಮುಖಂಡರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ:</strong> ಪಟ್ಟಣದಲ್ಲಿ ಮತಗಳ್ಳತನ ವಿರುದ್ಧದ ಅಭಿಯಾನಕ್ಕೆ ಸ್ಟಿಕ್ಕರ್ ಅಂಟಿಸುವ ಮೂಲಕ ಶಾಸಕ ಎಚ್.ಎಂ.ಗಣೇಶಪ್ರಸಾದ್ ಚಾಲನೆ ನೀಡಿದರು.</p>.<p>ಪಟ್ಟಣದ ಪ್ರವಾಸಿ ಮಂದಿರದಲ್ಲಿ ಯೂತ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ ಆದೇಶದ ಮೇರೆಗೆ ಮತಗಳ್ಳಗನದ ವಿರುದ್ಧ ಅಭಿಯಾನ ಆರಂಭಿಸಲಾಗಿದೆ. ಈ ಬಗ್ಗೆ ಸಾರ್ವಜನಿಕರು ಜಾಗೃತರಾಗಬೇಕು ಎಂದು ಸಲಹೆ ನೀಡಿದರು.</p>.<p>ಹೊರ ರಾಜ್ಯದಲ್ಲಿ ಇತ್ತೀಚಿಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯೊಂದರಲ್ಲಿ 50 ಮತ ಹೆಚ್ಚುವರಿಯಾಗಿ ಚಲಾವಣೆಯಾಗಿದೆ. ಈ ಕುರಿತು ಸುಪ್ರಿಂ ಕೋರ್ಟ್ ಕೂಡ ಆದೇಶ ಎತ್ತಿ ಹಿಡಿದಿದೆ. ಇದರ ಬಗ್ಗೆ ಮತದಾರರು ಚಿಂತನೆ ನಡೆಸಬೇಕು. ಜೊತೆಗೆ ಬಿಜೆಪಿಯ ಮತಗಳ್ಳತನದ ವಿರುದ್ಧ ಇತರರಿಗೂ ತಿಳಿಸಬೇಕು ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ಮಡಹಳ್ಳಿ ಮಣಿ, ಗಿರೀಶ್ ಲಕ್ಕೂರು, ಗೋಪಾಲಪುರ ಲೋಕೇಶ್, ಸುನೀಲ್ ಶೆಟ್ಟಿ, ನಾಗರಾಜು, ಕರಕಲಮಾದಹಳ್ಳಿ ಪ್ರಭು, ಎಪಿಎಂಸಿ ಅಧ್ಯಕ್ಷ ನಾಗರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಬಿ.ರಾಜಶೇಖರ್, ಚಾಮುಲ್ ನಿರ್ದೇಶಕ ನಂಜುಂಡಪ್ರಸಾದ್ ಸೇರಿದಂತೆ ಹಲವು ಮಂದಿ ಕಾಂಗ್ರೆಸ್ ಮುಖಂಡರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>