ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾನ ಮನಸ್ಕರ ವೇದಿಕೆಯ ಸಂಚಾಲಕ ಸಿ.ಕೆ.ಜಗನ್ ಅವರು, 'ವಿವಿಧ ಸಂಘಟನೆಗಳು ಒಟ್ಟಾಗಿ ಸಮಾನ ಮನಸ್ಕರ ವೇದಿಕೆಯನ್ನು ಕಟ್ಟಿಕೊಂಡಿದ್ದು, ಕಳೆದ ವರ್ಷದ ಡಿಸೆಂಬರ್ನಲ್ಲಿ ಇದು ಅಸ್ತಿತ್ವಕ್ಕೆ ಬಂದಿದೆ. ವಚನಗಳ ಆಶಯಗಳನ್ನು ಹೊಂದಿರುವ ಸಂವಿಧಾನ, ಎಲ್ಲರನ್ನೂ ಒಳಗೊಳ್ಳುವ, ಬಹುತ್ವ ಸಂವಿಧಾನ ಜಾರಿಗೆ ಬರಬೇಕು ಎಂಬ ಉದ್ದೇಶದಿಂದ ಜನರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಈ ಜಾಥಾವನ್ನು ಹಮ್ಮಿಕೊಂಡಿದ್ದೇವೆ’ ಎಂದರು.