<p><strong>ಕೊಳ್ಳೇಗಾಲ: ಇ</strong>ಲ್ಲಿನ ನಗರಸಭೆಯ 5ನೇ ವಾರ್ಡ್ನ ವ್ಯಾಪ್ತಿಗೆ ಬರುವ ಮೋಳೆ ಬಡಾವಣೆಯಲ್ಲಿ ಮೂಲ ಸೌಕರ್ಯಗಳ ಕೊರತೆಯಿಂದ ಜನರು ನಿತ್ಯವೂ ತೊಂದರೆ ಅನುಭವಿಸುತ್ತಿದ್ದಾರೆ.</p>.<p>ಬಡಾವಣೆಯಲ್ಲಿ ಸಾವಿರ ಕುಟುಂಬಗಳು ವಾಸ ಮಾಡುತ್ತಿವೆ. 3 ಸಾವಿರ ಜನರಿದ್ದಾರೆ. ಬಡವರು ಮತ್ತು ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ನಗರಸಭೆಯ ವ್ಯಾಪ್ತಿಯಲ್ಲಿದ್ದರೂ, ಅಭಿವೃದ್ಧಿ ಕಂಡಿಲ್ಲ.</p>.<p>ಚರಂಡಿ ವ್ಯವಸ್ಥೆ ಸರಿಯಿಲ್ಲ. ಬಡಾವಣೆಯ ರಸ್ತೆಗಳು ಹಾಳಾಗಿವೆ. ಬೀದಿ ದೀಪ ಬೆಳಕು ನೀಡುತ್ತಿಲ್ಲ. ಮುಖ್ಯ ರಸ್ತೆಯಲ್ಲೇ ಕಸದ ರಾಶಿಯಿದ್ದು, ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿಯಿದೆ.</p>.<p>ಬಡಾವಣೆಯ ಕೆಲವು ಬೀದಿಗಳಲ್ಲಿ ಚರಂಡಿ ಇದ್ದರೂ ನೀರು ಸರಾಗವಾಗಿ ಹರಿಯುವುದಿಲ್ಲ. ಸ್ವಚ್ಛಗೊಳಿಸುವ ಕಾರ್ಯವನ್ನೂ ನಗರಸಭೆ ಸರಿಯಾಗಿ ಮಾಡುತ್ತಿಲ್ಲ. ಚರಂಡಿಯೊಳಗೆ ಆಳೆತ್ತರದ ಗಿಡಗಳು ಬೆಳೆದಿವೆ. ಇದರಿಂದ ಬಡಾವಣೆ ಗಬ್ಬು ನಾರುತ್ತಿದೆ. ಸಾಂಕ್ರಾಮಿಕ ರೋಗ ಬರಬಹುದು ಎಂಬ ಭೀತಿಯಲ್ಲಿ ಜನರಿದ್ದಾರೆ.</p>.<p>‘ಇನ್ನೂ ಕೆಲವು ಬೀದಿಗಳಲ್ಲಿ ಚರಂಡಿ ಇಲ್ಲ. ಹೀಗಾಗಿ ನಿವಾಸಿಗಳು ಮನೆಯ ಹಿಂಭಾಗದ ಖಾಲಿ ನಿವೇಶನದಲ್ಲಿ ಚರಂಡಿ ನೀರನ್ನು ಬಿಟ್ಟಿದ್ದಾರೆ. ತ್ಯಾಜ್ಯವನ್ನೂ ಖಾಲಿ ಜಾಗದಲ್ಲೇ ಎಸೆಯಲಾಗುತ್ತಿದೆ. ನಮ್ಮ ವಾರ್ಡ್ ಸಮಸ್ಯೆಗಳಿಂದ ಯಾವಾಗ ಮುಕ್ತಿ ಹೊಂದುತ್ತದೆಯೋ ತಿಳಿದಿಲ್ಲ’ ಎಂದು ಬಡಾವಣೆ ನಿವಾಸಿ ಮಹೇಶ್ ಹೇಳಿದರು.</p>.<p class="Subhead">ರಸ್ತೆ ಇಲ್ಲ: ಮೋಳೆಯ ಕೆಲವು ಬೀದಿಗಳಿಗೆ ಇನ್ನೂ ಸುಸಜ್ಜಿತ ರಸ್ತೆಗಳಿಲ್ಲ. ಕಲ್ಲು ಮಣ್ಣಿನ ರಸ್ತೆಯಲ್ಲೇ ಜನರು ಸಂಚರಿಸಬೇಕು. ಮಳೆ ಬಂದರೆ ರಸ್ತೆ ಕೆಸರುಮಯವಾಗುತ್ತದೆ.</p>.<p>‘ಸರಿಯಾದ ರಸ್ತೆ ಮತ್ತು ಚರಂಡಿ ಇಲ್ಲದೆ ಮಳೆಗಾಲದಲ್ಲಿ ನೀರು ಮನೆಗಳಿಗೆ ನುಗುತ್ತದೆ. ಇದರಿಂದಾಗಿ ನಾವೆಲ್ಲಾ ತುಂಬಾ ತೊಂದರೆ ಅನುಭವಿಸುವಂತಾಗಿದೆ. ಅಧಿಕಾರಿಗಳು ರಸ್ತೆ ನಿರ್ಮಿಸಲು ಕ್ರಮ ಕೈಗೊಳ್ಳಬೇಕು’ ಎಂದು ಉಪ್ಪಾರ ಬಡಾವಣೆಯ ನಿವಾಸಿ ಮಹಾಲಕ್ಷ್ಮೀ ಒತ್ತಾಯಿಸಿದರು.</p>.<p class="Briefhead"><strong>ಪಾಳು ಬಿದ್ದ ಶೌಚಾಲಯ, ಬಯಲೇ ಆಶ್ರಯ</strong></p>.<p>ಬಡಾವಣೆಯ ಮುಖ್ಯ ರಸ್ತೆ ಸೇರಿದಂತೆ ಅಕ್ಕ ಪಕ್ಕದ ಖಾಲಿ ನಿವೇಶನ, ಜಮೀನುಗಳನ್ನು ಬಡಾವಣೆಯ ನಿವಾಸಿಗಳು ಪ್ರತಿ ನಿತ್ಯವೂ ಬಹಿರ್ದೆಸೆಗೆ ಬಳಸುತ್ತಿದ್ದಾರೆ. ಇದ್ದ ಶೌಚಾಲಯ ಪಾಳು ಬಿದ್ದ ಕಾರಣ ನಿವಾಸಿಗಳು ಬಯಲನ್ನೇ ಆಶ್ರಯಿಸಿದ್ದಾರೆ.</p>.<p>ಕೆಲವರು ಮನೆಯಲ್ಲೇ ಶೌಚಾಲಯಗಳನ್ನು ನಿರ್ಮಾಣ ಮಾಡಿಕೊಂಡಿದ್ದಾರೆ. ಇನ್ನೂ ಕೆಲವರು ಶೌಚಾಲಯವಿದ್ದರೂ ಅದನ್ನು ಉಪಯೋಗಿಸದೆ, ಬಯಲನ್ನೇ ಅವಲಂಬಿಸಿದ್ದಾರೆ.</p>.<p class="Briefhead"><strong>‘ಅಭಿವೃದ್ಧಿ ಕೆಲಸ ಪ್ರಗತಿಯಲ್ಲಿ’</strong></p>.<p>ಸಮಸ್ಯೆಗಳ ಬಗ್ಗೆ ಪ್ರತಿಕ್ರಿಯಿಸಿದ ಐದನೇ ವಾರ್ಡ್ ಸದಸ್ಯ ಧರಣೇಶ್, ‘ನನ್ನ ವಾರ್ಡ್ನಲ್ಲಿ ಕಡು ಬಡವರು ವಾಸ ಮಾಡುತ್ತಿದ್ದಾರೆ. ಮೂಲ ಸೌಕರ್ಯಗಳ ಕೊರತೆ ಬಗ್ಗೆ ಶಾಸಕರು, ಸಂಸದರ ಗಮನಕ್ಕೆ ತಂದಿದ್ದೇನೆ. ಹೆಚ್ಚಿನ ಅನುದಾನ ನೀಡುವ ಭರವಸೆ ನೀಡಿದ್ದಾರೆ. ಈಗಾಗಲೇ ರಸ್ತೆ, ಚರಂಡಿ ಕಾಮಗಾರಿಗಳಿಗೆ ₹ 50 ಲಕ್ಷಕ್ಕೂ ಹೆಚ್ಚು ಅನುದಾನ ಬಿಡುಗಡೆಯಾಗಿದ್ದು, ಕೆಲಸ ನಡೆಯುತ್ತಿವೆ’ ಎಂದು ಹೇಳಿದರು.</p>.<p>ಬಡಾವಣೆಯಲ್ಲಿ ಮೂಲಸೌಕರ್ಯಗಳ ಕೊರತೆಯಿಂದ ನಿವಾಸಿಗಳಿಗೆ ತೊಂದರೆಯಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಗಮನಹರಿಸಬೇಕು</p>.<p><strong>- ರಾಮಸ್ವಾಮಿ, ಬಡಾವಣೆಯ ನಿವಾಸಿ</strong></p>.<p>ಬಡಾವಣೆಯ ಸ್ವಚ್ಛತೆಗೆ ಕ್ರಮ ಕೈಗೊಳ್ಳಲಾಗುವುದು. ನಗರಸಭೆಯಿಂದ ಪ್ರತಿ ನಿತ್ಯ ಕಸ ಸಂಗ್ರಹಿಸಲು ವ್ಯವಸ್ಥೆ ಮಾಡಲಾಗುವುದು</p>.<p><strong>- ವಿಜಯ್, ನಗರಸಭೆ ಆಯುಕ್ತ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಳ್ಳೇಗಾಲ: ಇ</strong>ಲ್ಲಿನ ನಗರಸಭೆಯ 5ನೇ ವಾರ್ಡ್ನ ವ್ಯಾಪ್ತಿಗೆ ಬರುವ ಮೋಳೆ ಬಡಾವಣೆಯಲ್ಲಿ ಮೂಲ ಸೌಕರ್ಯಗಳ ಕೊರತೆಯಿಂದ ಜನರು ನಿತ್ಯವೂ ತೊಂದರೆ ಅನುಭವಿಸುತ್ತಿದ್ದಾರೆ.</p>.<p>ಬಡಾವಣೆಯಲ್ಲಿ ಸಾವಿರ ಕುಟುಂಬಗಳು ವಾಸ ಮಾಡುತ್ತಿವೆ. 3 ಸಾವಿರ ಜನರಿದ್ದಾರೆ. ಬಡವರು ಮತ್ತು ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ನಗರಸಭೆಯ ವ್ಯಾಪ್ತಿಯಲ್ಲಿದ್ದರೂ, ಅಭಿವೃದ್ಧಿ ಕಂಡಿಲ್ಲ.</p>.<p>ಚರಂಡಿ ವ್ಯವಸ್ಥೆ ಸರಿಯಿಲ್ಲ. ಬಡಾವಣೆಯ ರಸ್ತೆಗಳು ಹಾಳಾಗಿವೆ. ಬೀದಿ ದೀಪ ಬೆಳಕು ನೀಡುತ್ತಿಲ್ಲ. ಮುಖ್ಯ ರಸ್ತೆಯಲ್ಲೇ ಕಸದ ರಾಶಿಯಿದ್ದು, ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿಯಿದೆ.</p>.<p>ಬಡಾವಣೆಯ ಕೆಲವು ಬೀದಿಗಳಲ್ಲಿ ಚರಂಡಿ ಇದ್ದರೂ ನೀರು ಸರಾಗವಾಗಿ ಹರಿಯುವುದಿಲ್ಲ. ಸ್ವಚ್ಛಗೊಳಿಸುವ ಕಾರ್ಯವನ್ನೂ ನಗರಸಭೆ ಸರಿಯಾಗಿ ಮಾಡುತ್ತಿಲ್ಲ. ಚರಂಡಿಯೊಳಗೆ ಆಳೆತ್ತರದ ಗಿಡಗಳು ಬೆಳೆದಿವೆ. ಇದರಿಂದ ಬಡಾವಣೆ ಗಬ್ಬು ನಾರುತ್ತಿದೆ. ಸಾಂಕ್ರಾಮಿಕ ರೋಗ ಬರಬಹುದು ಎಂಬ ಭೀತಿಯಲ್ಲಿ ಜನರಿದ್ದಾರೆ.</p>.<p>‘ಇನ್ನೂ ಕೆಲವು ಬೀದಿಗಳಲ್ಲಿ ಚರಂಡಿ ಇಲ್ಲ. ಹೀಗಾಗಿ ನಿವಾಸಿಗಳು ಮನೆಯ ಹಿಂಭಾಗದ ಖಾಲಿ ನಿವೇಶನದಲ್ಲಿ ಚರಂಡಿ ನೀರನ್ನು ಬಿಟ್ಟಿದ್ದಾರೆ. ತ್ಯಾಜ್ಯವನ್ನೂ ಖಾಲಿ ಜಾಗದಲ್ಲೇ ಎಸೆಯಲಾಗುತ್ತಿದೆ. ನಮ್ಮ ವಾರ್ಡ್ ಸಮಸ್ಯೆಗಳಿಂದ ಯಾವಾಗ ಮುಕ್ತಿ ಹೊಂದುತ್ತದೆಯೋ ತಿಳಿದಿಲ್ಲ’ ಎಂದು ಬಡಾವಣೆ ನಿವಾಸಿ ಮಹೇಶ್ ಹೇಳಿದರು.</p>.<p class="Subhead">ರಸ್ತೆ ಇಲ್ಲ: ಮೋಳೆಯ ಕೆಲವು ಬೀದಿಗಳಿಗೆ ಇನ್ನೂ ಸುಸಜ್ಜಿತ ರಸ್ತೆಗಳಿಲ್ಲ. ಕಲ್ಲು ಮಣ್ಣಿನ ರಸ್ತೆಯಲ್ಲೇ ಜನರು ಸಂಚರಿಸಬೇಕು. ಮಳೆ ಬಂದರೆ ರಸ್ತೆ ಕೆಸರುಮಯವಾಗುತ್ತದೆ.</p>.<p>‘ಸರಿಯಾದ ರಸ್ತೆ ಮತ್ತು ಚರಂಡಿ ಇಲ್ಲದೆ ಮಳೆಗಾಲದಲ್ಲಿ ನೀರು ಮನೆಗಳಿಗೆ ನುಗುತ್ತದೆ. ಇದರಿಂದಾಗಿ ನಾವೆಲ್ಲಾ ತುಂಬಾ ತೊಂದರೆ ಅನುಭವಿಸುವಂತಾಗಿದೆ. ಅಧಿಕಾರಿಗಳು ರಸ್ತೆ ನಿರ್ಮಿಸಲು ಕ್ರಮ ಕೈಗೊಳ್ಳಬೇಕು’ ಎಂದು ಉಪ್ಪಾರ ಬಡಾವಣೆಯ ನಿವಾಸಿ ಮಹಾಲಕ್ಷ್ಮೀ ಒತ್ತಾಯಿಸಿದರು.</p>.<p class="Briefhead"><strong>ಪಾಳು ಬಿದ್ದ ಶೌಚಾಲಯ, ಬಯಲೇ ಆಶ್ರಯ</strong></p>.<p>ಬಡಾವಣೆಯ ಮುಖ್ಯ ರಸ್ತೆ ಸೇರಿದಂತೆ ಅಕ್ಕ ಪಕ್ಕದ ಖಾಲಿ ನಿವೇಶನ, ಜಮೀನುಗಳನ್ನು ಬಡಾವಣೆಯ ನಿವಾಸಿಗಳು ಪ್ರತಿ ನಿತ್ಯವೂ ಬಹಿರ್ದೆಸೆಗೆ ಬಳಸುತ್ತಿದ್ದಾರೆ. ಇದ್ದ ಶೌಚಾಲಯ ಪಾಳು ಬಿದ್ದ ಕಾರಣ ನಿವಾಸಿಗಳು ಬಯಲನ್ನೇ ಆಶ್ರಯಿಸಿದ್ದಾರೆ.</p>.<p>ಕೆಲವರು ಮನೆಯಲ್ಲೇ ಶೌಚಾಲಯಗಳನ್ನು ನಿರ್ಮಾಣ ಮಾಡಿಕೊಂಡಿದ್ದಾರೆ. ಇನ್ನೂ ಕೆಲವರು ಶೌಚಾಲಯವಿದ್ದರೂ ಅದನ್ನು ಉಪಯೋಗಿಸದೆ, ಬಯಲನ್ನೇ ಅವಲಂಬಿಸಿದ್ದಾರೆ.</p>.<p class="Briefhead"><strong>‘ಅಭಿವೃದ್ಧಿ ಕೆಲಸ ಪ್ರಗತಿಯಲ್ಲಿ’</strong></p>.<p>ಸಮಸ್ಯೆಗಳ ಬಗ್ಗೆ ಪ್ರತಿಕ್ರಿಯಿಸಿದ ಐದನೇ ವಾರ್ಡ್ ಸದಸ್ಯ ಧರಣೇಶ್, ‘ನನ್ನ ವಾರ್ಡ್ನಲ್ಲಿ ಕಡು ಬಡವರು ವಾಸ ಮಾಡುತ್ತಿದ್ದಾರೆ. ಮೂಲ ಸೌಕರ್ಯಗಳ ಕೊರತೆ ಬಗ್ಗೆ ಶಾಸಕರು, ಸಂಸದರ ಗಮನಕ್ಕೆ ತಂದಿದ್ದೇನೆ. ಹೆಚ್ಚಿನ ಅನುದಾನ ನೀಡುವ ಭರವಸೆ ನೀಡಿದ್ದಾರೆ. ಈಗಾಗಲೇ ರಸ್ತೆ, ಚರಂಡಿ ಕಾಮಗಾರಿಗಳಿಗೆ ₹ 50 ಲಕ್ಷಕ್ಕೂ ಹೆಚ್ಚು ಅನುದಾನ ಬಿಡುಗಡೆಯಾಗಿದ್ದು, ಕೆಲಸ ನಡೆಯುತ್ತಿವೆ’ ಎಂದು ಹೇಳಿದರು.</p>.<p>ಬಡಾವಣೆಯಲ್ಲಿ ಮೂಲಸೌಕರ್ಯಗಳ ಕೊರತೆಯಿಂದ ನಿವಾಸಿಗಳಿಗೆ ತೊಂದರೆಯಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಗಮನಹರಿಸಬೇಕು</p>.<p><strong>- ರಾಮಸ್ವಾಮಿ, ಬಡಾವಣೆಯ ನಿವಾಸಿ</strong></p>.<p>ಬಡಾವಣೆಯ ಸ್ವಚ್ಛತೆಗೆ ಕ್ರಮ ಕೈಗೊಳ್ಳಲಾಗುವುದು. ನಗರಸಭೆಯಿಂದ ಪ್ರತಿ ನಿತ್ಯ ಕಸ ಸಂಗ್ರಹಿಸಲು ವ್ಯವಸ್ಥೆ ಮಾಡಲಾಗುವುದು</p>.<p><strong>- ವಿಜಯ್, ನಗರಸಭೆ ಆಯುಕ್ತ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>