‘ಈ ತಿಂಗಳು ಯುಗಾದಿ ಹಬ್ಬ ಇತ್ತು. ಸಮಿತಿಯ ಕಾರ್ಯದರ್ಶಿಗಳು ಚುನಾವಣೆಯ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ. ಸಮಿತಿ ಅಧ್ಯಕ್ಷರಾಗಿರುವ ಪಾಲಿಕೆ ಸದಸ್ಯರು ತಮ್ಮ ಪಕ್ಷದ ಪರ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ. ಹಾಗಾಗಿ ಯಾವ ವಾರ್ಡ್ನಲ್ಲೂ ಸಭೆ ನಡೆದಿಲ್ಲ’ ಎಂದು ವಾರ್ಡ್ ಸಮಿತಿ ಬಲಪಡಿಸುವ ಹೋರಾಟದಲ್ಲಿ ತೊಡಗಿರುವ ಸಿಟಿಜನ್ಸ್ ಫಾರ್ ಬೆಂಗಳೂರು ಸಂಘಟನೆಯ ಶ್ರೀನಿವಾಸ ಅಲವಿಲ್ಲಿ ‘ಪ್ರಜಾವಾಣಿ’ಗೆ ತಿಳಿಸಿದರು.