<p>ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರವೂ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿತ್ತು. ರಜಾ ದಿನವೂ ಆಗಿದ್ದರಿಂದ ವಾಹನಗಳ ಹಾಗೂ ಜನರ ಓಡಾಟ ಕಡಿಮೆ ಇತ್ತು.</p>.<p>ಹಣ್ಣು, ತರಕಾರಿ, ಹಾಲು, ದಿನಸಿ ಅಂಗಡಿಗಳು ಮಧ್ಯಾಹ್ನದ ವರೆಗೆ ತೆರೆದಿದ್ದವು. ಕೆಲವು ಹೋಟೆಲ್ಗಳು ಇಡೀ ದಿನ ಕಾರ್ಯಾಚರಿಸಿದವು.</p>.<p>ಸಾಮಾನ್ಯವಾಗಿ ನಗರದಲ್ಲಿ ಹೋಟೆಲ್, ದಿನಸಿ ಅಂಗಡಿಗಳ ಮಾಲೀಕರು ಭಾನುವಾರ ರಜೆಯ ಕಾರಣಕ್ಕೆ ಅಂಗಡಿಗಳನ್ನುತೆರೆಯುವುದಿಲ್ಲ. ಹಾಗಾಗಿ, ಕೆಲವು ದಿನಸಿ ಅಂಗಡಿಗಳು ಹಾಗೂ ಹೋಟೆಲ್ಗಳು ತೆರೆದಿರಲಿಲ್ಲ.</p>.<p>ಮದ್ಯದ ಅಂಗಡಿಗಳು ಮಧ್ಯಾಹ್ನ 2 ಗಂಟೆಯವರೆಗೆ ವಹಿವಾಟು ನಡೆಸಿದವು. ಪಾರ್ಸೆಲ್ ಮಾತ್ರ ಲಭ್ಯವಿತ್ತು. ಬೀದಿ ಬದಿ ವ್ಯಾಪಾರಿಗಳು ಮಧ್ಯಾಹ್ನದವರೆಗೆ ವ್ಯಾಪಾರ ನಡೆಸಲು ಅಡಚಣೆ ಇರಲಿಲ್ಲ. ಕೆಎಸ್ಆರ್ಟಿಸಿ ಬಸ್ಗಳು ಭಾನುವಾರವೂ ಸಂಚರಿಸಿದವು. ಆದರೆ, ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು.</p>.<p>ಮಧ್ಯಾಹ್ನ 2 ಗಂಟೆ ಆಗುತ್ತಲೇ ಪೊಲೀಸರು ಎಲ್ಲ ಬೀದಿಗಳಲ್ಲಿ ಸಂಚರಿಸಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ಸೂಚಿಸಿದರು.</p>.<p class="Subhead">ಚೆಕ್ಪೋಸ್ಟ್ಗಳಲ್ಲಿ ಬಿಗಿ ಕ್ರಮ: ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿ ಇದ್ದುದರಿಂದ ಅಂತರರಾಜ್ಯ ಚೆಕ್ಪೋಸ್ಟ್ಗಳಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗಿತ್ತು. ಪ್ರಯಾಣಿಕರು ಆರ್ಟಿ–ಪಿಸಿಆರ್ ನೆಗೆಟಿವ್ ವರದಿ ಹೊಂದಿದ್ದರೂ, ಜಿಲ್ಲೆಯ ಪ್ರವೇಶಕ್ಕೆ ಅವಕಾಶ ನಿರಾಕರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರವೂ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿತ್ತು. ರಜಾ ದಿನವೂ ಆಗಿದ್ದರಿಂದ ವಾಹನಗಳ ಹಾಗೂ ಜನರ ಓಡಾಟ ಕಡಿಮೆ ಇತ್ತು.</p>.<p>ಹಣ್ಣು, ತರಕಾರಿ, ಹಾಲು, ದಿನಸಿ ಅಂಗಡಿಗಳು ಮಧ್ಯಾಹ್ನದ ವರೆಗೆ ತೆರೆದಿದ್ದವು. ಕೆಲವು ಹೋಟೆಲ್ಗಳು ಇಡೀ ದಿನ ಕಾರ್ಯಾಚರಿಸಿದವು.</p>.<p>ಸಾಮಾನ್ಯವಾಗಿ ನಗರದಲ್ಲಿ ಹೋಟೆಲ್, ದಿನಸಿ ಅಂಗಡಿಗಳ ಮಾಲೀಕರು ಭಾನುವಾರ ರಜೆಯ ಕಾರಣಕ್ಕೆ ಅಂಗಡಿಗಳನ್ನುತೆರೆಯುವುದಿಲ್ಲ. ಹಾಗಾಗಿ, ಕೆಲವು ದಿನಸಿ ಅಂಗಡಿಗಳು ಹಾಗೂ ಹೋಟೆಲ್ಗಳು ತೆರೆದಿರಲಿಲ್ಲ.</p>.<p>ಮದ್ಯದ ಅಂಗಡಿಗಳು ಮಧ್ಯಾಹ್ನ 2 ಗಂಟೆಯವರೆಗೆ ವಹಿವಾಟು ನಡೆಸಿದವು. ಪಾರ್ಸೆಲ್ ಮಾತ್ರ ಲಭ್ಯವಿತ್ತು. ಬೀದಿ ಬದಿ ವ್ಯಾಪಾರಿಗಳು ಮಧ್ಯಾಹ್ನದವರೆಗೆ ವ್ಯಾಪಾರ ನಡೆಸಲು ಅಡಚಣೆ ಇರಲಿಲ್ಲ. ಕೆಎಸ್ಆರ್ಟಿಸಿ ಬಸ್ಗಳು ಭಾನುವಾರವೂ ಸಂಚರಿಸಿದವು. ಆದರೆ, ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು.</p>.<p>ಮಧ್ಯಾಹ್ನ 2 ಗಂಟೆ ಆಗುತ್ತಲೇ ಪೊಲೀಸರು ಎಲ್ಲ ಬೀದಿಗಳಲ್ಲಿ ಸಂಚರಿಸಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ಸೂಚಿಸಿದರು.</p>.<p class="Subhead">ಚೆಕ್ಪೋಸ್ಟ್ಗಳಲ್ಲಿ ಬಿಗಿ ಕ್ರಮ: ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿ ಇದ್ದುದರಿಂದ ಅಂತರರಾಜ್ಯ ಚೆಕ್ಪೋಸ್ಟ್ಗಳಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗಿತ್ತು. ಪ್ರಯಾಣಿಕರು ಆರ್ಟಿ–ಪಿಸಿಆರ್ ನೆಗೆಟಿವ್ ವರದಿ ಹೊಂದಿದ್ದರೂ, ಜಿಲ್ಲೆಯ ಪ್ರವೇಶಕ್ಕೆ ಅವಕಾಶ ನಿರಾಕರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>