ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಡು ಪ್ರಾಣಿಗಳ ಬೇಟೆ: ನಾಲ್ವರು ಯುವಕರ ಬಂಧನ

Last Updated 21 ಆಗಸ್ಟ್ 2020, 10:30 IST
ಅಕ್ಷರ ಗಾತ್ರ

ಕೊಳ್ಳೇಗಾಲ: ಮಲೆ ಮಹದೇಶ್ವರ ವನ್ಯಜೀವಿ ವಿಭಾಗ ಮತ್ತು ಬಿ.ಆರ್.ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಾಡು ಪ್ರಾಣಿಗಳನ್ನು ಬೇಟೆಯಾಡಿ ಚರ್ಮ, ಎಲುಬುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ‌ ನಾಲ್ವರು ಯುವಕರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ತಾಲ್ಲೂಕಿನ ಗುಂಡಾಲ್ ಜಲಾಶಯದ ಬಳಿ ಆರೋಪಿಗಳನ್ನು ಮಾಲು ಸಮೇತ ಬಂಧಿಸಿದ್ದಾರೆ.

ಹನೂರು ತಾಲ್ಲೂಕಿನ ನಲ್ಲಿಕತ್ರಿ ಗ್ರಾಮದ ಮಹಾದೇವ, ಕುಮಾರ್, ಗೊಂಬೆಗಲ್ಲು ಗ್ರಾಮದ ಮಹದೇವ, ರಂಗಸ್ವಾಮಿ ಎಂಬುವವರನ್ನು ಬಂಧಿಸಿದ್ದಾರೆ. ನಾಲ್ವರು ಕೂಡ ಸೋಲಿಗ ಸಮುದಾಯದವರು.

ಬಂಧಿತರಿಂದ ಒಂದು‌ ಹುಲಿಯ ಮೂಳೆಗಳು, ನಾಲ್ಕು ಉಗುರುಗಳು, ಚಿರತೆಯ ಎರಡು‌ ಉಗುರುಗಳು, ಎರಡು ಜಿಂಕೆ ಚರ್ಮ, ಎರಡು ಕಾಡುಕುರಿ ಚರ್ಮ, ಕಡವೆಯ ಚರ್ಮ, ಸೀಳು ನಾಯಿ ಚರ್ಮ ಹಾಗೂ ಮೂಳೆಗಳು, ಎರಡು ಹಾರುವ ಅಳಿಲಿನ ಚರ್ಮ ಸೇರಿದಂತೆಎರಡು ಬೈಕ್‌ಗಳನ್ನುವಶಪಡಿಸಿಕೊಳ್ಳಲಾಗಿದೆ.

ಮಲೆ‌ಮಹದೇಶ್ವರ ವನ್ಯಧಾಮ, ಬಿಆರ್‌ಟಿ‌ ಹುಲಿ‌ಸಂರಕ್ಷಿತ ಪ್ರದೇಶ ಹಾಗೂ ಕಾವೇರಿ ವನ್ಯಧಾಮದ‌ ಅಧಿಕಾರಿಗಳು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT