<p><strong>ಚಾಮರಾಜನಗರ: </strong>ತಾಲ್ಲೂಕಿನ ಬ್ಯಾಡಮೂಡ್ಲು ಗ್ರಾಮದ ಮಾರಿಗುಡಿ ಹತ್ತಿರ ಜಮೀನಿನಲ್ಲಿ ಹುರುಳಿ ಕೀಳುತ್ತಿದ್ದ ರೈತರೊಬ್ಬರ ಮೇಲೆ ಮಂಗಳವಾರ ಬೆಳಿಗ್ಗೆ ಕಾಡು ಹಂದಿಯೊಂದು ದಾಳಿ ಮಾಡಿದೆ. ಗಾಯಗೊಂಡಿರುವ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. </p>.<p>ಚಿಕ್ಕಮೋಳೆ ಗ್ರಾಮದ ಬಸವರಾಜು (40) ಗಾಯಗೊಂಡ ರೈತ. ಅವರನ್ನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.</p>.<p>ಬಸವರಾಜು ಅವರು ಪತ್ನಿ ಪುಟ್ಟನಂಜಮ್ಮ, ನಾದಿನಿ ಮಂಗಳಮ್ಮ ಜೊತೆಗೂಡಿ ಬೆಳಿಗ್ಗೆ ತಮ್ಮ ಜಮೀನಿನಲ್ಲಿ ಹುರುಳಿ ಗಿಡಗಳನ್ನು ಕೀಳುತ್ತಿದ್ದರು. ಈ ಸಂದರ್ಭದಲ್ಲಿ ಹಿಂದಿನಿಂದ ಬಂದ ಕಾಡು ಹಂದಿಯೊಂದು ಏಕಾಏಕಿ ಅವರ ಮೇಲೆ ದಾಳಿ ನಡೆಸಿತು. ಹಂದಿಯ ಕೋರೆ ತಗುಲಿ ಅವರ ಹೊಟ್ಟೆ ಹಾಗೂ ಬಲಗಾಲಿನ ತೊಡೆ ಭಾಗಕ್ಕೆ ಗಾಯಗಳಾಗಿವೆ.</p>.<p>ಬಸವರಾಜು ಅವರು ಜೋರಾಗಿ ಕಿರುಚಾಡಿದಾಗ ಅಕ್ಕಪಕ್ಕದ ಜಮೀನಿನಲ್ಲಿದ್ದ ರೈತರು ಬಂದು ಹಂದಿಯನ್ನು ಓಡಿಸಿದರು. ಗಾಯಗೊಂಡಿದ್ದ ಬಸವರಾಜು ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದರು. ಚಾಮರಾಜನಗರ ಪೂರ್ವ ಠಾಣೆಯಲ್ಲಿ (ರಾಮಸಮುದ್ರ) ಪ್ರಕರಣ ದಾಖಲಾಗಿದೆ.</p>.<p class="Subhead"><strong>ಪರಿಹಾರಕ್ಕೆ ಆಗ್ರಹ:</strong> ‘ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಆಗಾಗ್ಗೆ ಕಾಡುಪ್ರಾಣಿಗಳು ದಾಳಿ ನಡೆಸುತ್ತಿದ್ದು, ಇದರಿಂದ ಜಮೀನಿಗೆ ಹೋಗಲು ಭಯವಾಗುತ್ತಿದೆ. ದಾಳಿಗೆ ಒಳಗಾಗಿರುವ ಬಸವರಾಜು ಅವರಿಗೆ ಅರಣ್ಯ ಇಲಾಖೆ ಪರಿಹಾರ ಕೊಡಿಸಬೇಕು’ ಎಂದು ರೈತರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ತಾಲ್ಲೂಕಿನ ಬ್ಯಾಡಮೂಡ್ಲು ಗ್ರಾಮದ ಮಾರಿಗುಡಿ ಹತ್ತಿರ ಜಮೀನಿನಲ್ಲಿ ಹುರುಳಿ ಕೀಳುತ್ತಿದ್ದ ರೈತರೊಬ್ಬರ ಮೇಲೆ ಮಂಗಳವಾರ ಬೆಳಿಗ್ಗೆ ಕಾಡು ಹಂದಿಯೊಂದು ದಾಳಿ ಮಾಡಿದೆ. ಗಾಯಗೊಂಡಿರುವ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. </p>.<p>ಚಿಕ್ಕಮೋಳೆ ಗ್ರಾಮದ ಬಸವರಾಜು (40) ಗಾಯಗೊಂಡ ರೈತ. ಅವರನ್ನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.</p>.<p>ಬಸವರಾಜು ಅವರು ಪತ್ನಿ ಪುಟ್ಟನಂಜಮ್ಮ, ನಾದಿನಿ ಮಂಗಳಮ್ಮ ಜೊತೆಗೂಡಿ ಬೆಳಿಗ್ಗೆ ತಮ್ಮ ಜಮೀನಿನಲ್ಲಿ ಹುರುಳಿ ಗಿಡಗಳನ್ನು ಕೀಳುತ್ತಿದ್ದರು. ಈ ಸಂದರ್ಭದಲ್ಲಿ ಹಿಂದಿನಿಂದ ಬಂದ ಕಾಡು ಹಂದಿಯೊಂದು ಏಕಾಏಕಿ ಅವರ ಮೇಲೆ ದಾಳಿ ನಡೆಸಿತು. ಹಂದಿಯ ಕೋರೆ ತಗುಲಿ ಅವರ ಹೊಟ್ಟೆ ಹಾಗೂ ಬಲಗಾಲಿನ ತೊಡೆ ಭಾಗಕ್ಕೆ ಗಾಯಗಳಾಗಿವೆ.</p>.<p>ಬಸವರಾಜು ಅವರು ಜೋರಾಗಿ ಕಿರುಚಾಡಿದಾಗ ಅಕ್ಕಪಕ್ಕದ ಜಮೀನಿನಲ್ಲಿದ್ದ ರೈತರು ಬಂದು ಹಂದಿಯನ್ನು ಓಡಿಸಿದರು. ಗಾಯಗೊಂಡಿದ್ದ ಬಸವರಾಜು ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದರು. ಚಾಮರಾಜನಗರ ಪೂರ್ವ ಠಾಣೆಯಲ್ಲಿ (ರಾಮಸಮುದ್ರ) ಪ್ರಕರಣ ದಾಖಲಾಗಿದೆ.</p>.<p class="Subhead"><strong>ಪರಿಹಾರಕ್ಕೆ ಆಗ್ರಹ:</strong> ‘ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಆಗಾಗ್ಗೆ ಕಾಡುಪ್ರಾಣಿಗಳು ದಾಳಿ ನಡೆಸುತ್ತಿದ್ದು, ಇದರಿಂದ ಜಮೀನಿಗೆ ಹೋಗಲು ಭಯವಾಗುತ್ತಿದೆ. ದಾಳಿಗೆ ಒಳಗಾಗಿರುವ ಬಸವರಾಜು ಅವರಿಗೆ ಅರಣ್ಯ ಇಲಾಖೆ ಪರಿಹಾರ ಕೊಡಿಸಬೇಕು’ ಎಂದು ರೈತರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>