ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಹದೇಶ್ವರ ಬೆಟ್ಟ: ಕಾಲ್ನಡಿಗೆ ಬರುತ್ತಿದ್ದ ಭಕ್ತರ ಮೇಲೆ ಕಾಡಾನೆ ದಾಳಿ;ಮಹಿಳೆ ಸಾವು

Published 10 ಏಪ್ರಿಲ್ 2024, 6:19 IST
Last Updated 10 ಏಪ್ರಿಲ್ 2024, 6:19 IST
ಅಕ್ಷರ ಗಾತ್ರ

ಮಹದೇಶ್ವರ ಬೆಟ್ಟ (ಚಾಮರಾಜನಗರ): ಹನೂರು ತಾಲ್ಲೂಕಿನ ತಾಳಬೆಟ್ಟದಿಂದ ಮಹದೇಶ್ವರ ಬೆಟ್ಟಕ್ಕೆ ಮಂಗಳವಾರ ಸಂಜೆ ಕಾಲ್ನಡಿಗೆಯಲ್ಲಿ ಬರುತ್ತಿದ್ದ ಭಕ್ತರ ಮೇಲೆ ಕಾಡಾನೆಯೊಂದು ದಾಳಿ ಮಾಡಿದ್ದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕಿರುಗಾವಲಿನ ಹೊನ್ನೇನಳ್ಳಿಯ ಲಕ್ಷ್ಮಿ (40) ಮೃತಪಟ್ಟವರು.

ಗ್ರಾಮದಿಂದ ಎಂಟು ಮಂದಿ ಬೆಟ್ಟಕ್ಕೆ ಬಂದಿದ್ದರು. ಈ ಪೈಕಿ ಲಕ್ಷ್ಮಿ, ಪದ್ಮಮ್ಮ, ಪುಟ್ಟರಾಜು ಅವರು ಕಾಲ್ನಡಿಗೆಯಲ್ಲಿ ಬರುತ್ತಿದ್ದರು. ಸಂಜೆ 7 ಗಂಟೆಯ ಸುಮಾರಿಗೆ ಆನೆ ತಲೆದಿಂಬ ಸಮೀಪ ಕಾಡಾನೆ ಹಠಾತ್ ದಾಳಿ ಮಾಡಿದೆ. ಆನೆ ತುಳಿತಕ್ಕೆ ಒಳಗಾದ ಲಕ್ಷ್ಮಿ ಅವರು ಸ್ಥಳದಲ್ಲೇ ಮೃತಪಟ್ಟರು.

ಸ್ಥಳಕ್ಕೆ ಅರಣ್ಯ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT