<p><strong>ಗುಂಡ್ಲುಪೇಟೆ:</strong> ತಾಲ್ಲೂಕಿನ ಹೊಂಗಹಳ್ಳಿ ಗ್ರಾಮದ ಹೊರವಲಯದ ರೈತರ ಜಮೀನುಗಳಲ್ಲಿ ಕಾಡಾನೆ ದಾಳಿ ನಡೆಸಿ ಬಾಳೆ, ತೆಂಗು ಬೆಳೆ ನಾಶಪಡಿಸಿವೆ.</p>.<p>ಹೊಂಗಹಳ್ಳಿ ಗ್ರಾಮದ ತಾಯಮ್ಮ ಸೇರಿ ಇತರೆ ರೈತರು ಬೆಳೆ ನಷ್ಟ ಅನುಭವಿಸಿದ್ದು, ಬಂಡೀಪುರ ರಾಷ್ಟ್ರೀಯ ಉದ್ಯಾನದ ಮದ್ದೂರು ಅಥವಾ ಓಂಕಾರ ಅರಣ್ಯ ವಲಯದಿಂದ ಆಹಾರ ಅರಸಿ ಬಂದಿದ್ದ ಕಾಡಾನೆಗಳು ಸೋಲಾರ್ ವಿದ್ಯುತ್ ತಂತಿ ಬೇಲಿ ಮುರಿದು ಒಳನುಗ್ಗಿವೆ. ಈ ವೇಳೆ ಬೆಳವಣಿಗೆ ಹಂತದಲ್ಲಿದ್ದ ಬಾಳೆ ಬೆಳೆಯನ್ನು ತಿಂದು, ತುಳಿದು ನಾಶ ಮಾಡಿವೆ. ಕಾವಲಿಗಿದ್ದ ರೈತರು ಕೂಗಿಕೊಂಡರೂ ಲೆಕ್ಕಿಸದೇ ಪಕ್ಕದ ಜಮೀನುಗಳಲ್ಲಿ ತೆಂಗಿನ ಗಿಡಗಳನ್ನು ನಾಶ ಮಾಡಿವೆ.</p>.<p>‘ಬೇಸಿಗೆ ಹಿನ್ನೆಲೆಯಲ್ಲಿ ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆ ಉಪಟಳ ಹೆಚ್ಚಿದೆ. ನಿತ್ಯ ಒಂದಲ್ಲ ಒಂದು ಕಡೆಯಿಂದ ಕಂದಕ ದಾಟಿ ಕಾಡಿನಿಂದ ಹೊರಬರುವ ಕಾಡಾನೆಗಳು ಜಮೀನುಗಳಲ್ಲಿ ಬೆಳೆ ನಾಶ ಮಾಡುತ್ತಿವೆ. ಆದ್ದರಿಂದ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಗ್ರಾಮದ ರೈತರು ಒತ್ತಾಯಿಸಿದ್ದಾರೆ.</p>.<p>ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಮದ್ದೂರು ವಲಯ ಅರಣ್ಯಾಧಿಕಾರಿ ಬಿ.ಎಂ.ಮಲ್ಲೇಶ್, ಓಂಕಾರ ಅರಣ್ಯ ವಲಯದ ಶಿವಕುಮಾರ್, ಸತೀಶ್ ಭೇಟಿ ನೀಡಿ ಮಹಜರು ನಡೆಸಿದರು. ಬೆಳೆನಾಶಕ್ಕೆ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ:</strong> ತಾಲ್ಲೂಕಿನ ಹೊಂಗಹಳ್ಳಿ ಗ್ರಾಮದ ಹೊರವಲಯದ ರೈತರ ಜಮೀನುಗಳಲ್ಲಿ ಕಾಡಾನೆ ದಾಳಿ ನಡೆಸಿ ಬಾಳೆ, ತೆಂಗು ಬೆಳೆ ನಾಶಪಡಿಸಿವೆ.</p>.<p>ಹೊಂಗಹಳ್ಳಿ ಗ್ರಾಮದ ತಾಯಮ್ಮ ಸೇರಿ ಇತರೆ ರೈತರು ಬೆಳೆ ನಷ್ಟ ಅನುಭವಿಸಿದ್ದು, ಬಂಡೀಪುರ ರಾಷ್ಟ್ರೀಯ ಉದ್ಯಾನದ ಮದ್ದೂರು ಅಥವಾ ಓಂಕಾರ ಅರಣ್ಯ ವಲಯದಿಂದ ಆಹಾರ ಅರಸಿ ಬಂದಿದ್ದ ಕಾಡಾನೆಗಳು ಸೋಲಾರ್ ವಿದ್ಯುತ್ ತಂತಿ ಬೇಲಿ ಮುರಿದು ಒಳನುಗ್ಗಿವೆ. ಈ ವೇಳೆ ಬೆಳವಣಿಗೆ ಹಂತದಲ್ಲಿದ್ದ ಬಾಳೆ ಬೆಳೆಯನ್ನು ತಿಂದು, ತುಳಿದು ನಾಶ ಮಾಡಿವೆ. ಕಾವಲಿಗಿದ್ದ ರೈತರು ಕೂಗಿಕೊಂಡರೂ ಲೆಕ್ಕಿಸದೇ ಪಕ್ಕದ ಜಮೀನುಗಳಲ್ಲಿ ತೆಂಗಿನ ಗಿಡಗಳನ್ನು ನಾಶ ಮಾಡಿವೆ.</p>.<p>‘ಬೇಸಿಗೆ ಹಿನ್ನೆಲೆಯಲ್ಲಿ ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆ ಉಪಟಳ ಹೆಚ್ಚಿದೆ. ನಿತ್ಯ ಒಂದಲ್ಲ ಒಂದು ಕಡೆಯಿಂದ ಕಂದಕ ದಾಟಿ ಕಾಡಿನಿಂದ ಹೊರಬರುವ ಕಾಡಾನೆಗಳು ಜಮೀನುಗಳಲ್ಲಿ ಬೆಳೆ ನಾಶ ಮಾಡುತ್ತಿವೆ. ಆದ್ದರಿಂದ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಗ್ರಾಮದ ರೈತರು ಒತ್ತಾಯಿಸಿದ್ದಾರೆ.</p>.<p>ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಮದ್ದೂರು ವಲಯ ಅರಣ್ಯಾಧಿಕಾರಿ ಬಿ.ಎಂ.ಮಲ್ಲೇಶ್, ಓಂಕಾರ ಅರಣ್ಯ ವಲಯದ ಶಿವಕುಮಾರ್, ಸತೀಶ್ ಭೇಟಿ ನೀಡಿ ಮಹಜರು ನಡೆಸಿದರು. ಬೆಳೆನಾಶಕ್ಕೆ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>