<p><strong>ಹನೂರು</strong>: ತಾಲ್ಲೂಕಿನ ಕಾಡಂಚಿನ ಪಚ್ಚೆದೊಡ್ಡಿಯ ಸರ್ಕಾರಿ ಶಾಲೆಗೆ ಕಾಡಾನೆಯೊಂದು ನುಗ್ಗಿ ಶಾಲಾ ಮುಂಭಾಗದ ಗೇಟ್ ನಾಶಗೊಳಿಸಿದೆ.</p>.<p>ಪಚ್ಚೆದೊಡ್ಡಿಯ ಶಾಲೆಯ ಮುಖ್ಯ ಗೇಟ್ ಮುರಿದು ಒಳನುಗ್ಗಿರುವ ಕಾಡಾನೆ, ಆವರಣದಲ್ಲಿ ಅಳವಡಿಸಲಾಗಿದ್ದ ನೀರಿನ ಪೈಪ್ ಸೇರಿದಂತೆ ಹಲವು ಪರಿಕರ ತುಳಿದು ಧ್ವಂಸಗೊಳಿಸಿದೆ.</p>.<p>‘ಇತ್ತೀಚೆಗೆ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಭಯಭೀತರಾಗಿದ್ದಾರೆ. ಅದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತು ಈ ಭಾಗದಲ್ಲಿ ಕಾಡುಪ್ರಾಣಿಗಳ ನಿಯಂತ್ರಣ ಮಾಡಬೇಕು’ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನೂರು</strong>: ತಾಲ್ಲೂಕಿನ ಕಾಡಂಚಿನ ಪಚ್ಚೆದೊಡ್ಡಿಯ ಸರ್ಕಾರಿ ಶಾಲೆಗೆ ಕಾಡಾನೆಯೊಂದು ನುಗ್ಗಿ ಶಾಲಾ ಮುಂಭಾಗದ ಗೇಟ್ ನಾಶಗೊಳಿಸಿದೆ.</p>.<p>ಪಚ್ಚೆದೊಡ್ಡಿಯ ಶಾಲೆಯ ಮುಖ್ಯ ಗೇಟ್ ಮುರಿದು ಒಳನುಗ್ಗಿರುವ ಕಾಡಾನೆ, ಆವರಣದಲ್ಲಿ ಅಳವಡಿಸಲಾಗಿದ್ದ ನೀರಿನ ಪೈಪ್ ಸೇರಿದಂತೆ ಹಲವು ಪರಿಕರ ತುಳಿದು ಧ್ವಂಸಗೊಳಿಸಿದೆ.</p>.<p>‘ಇತ್ತೀಚೆಗೆ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಭಯಭೀತರಾಗಿದ್ದಾರೆ. ಅದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತು ಈ ಭಾಗದಲ್ಲಿ ಕಾಡುಪ್ರಾಣಿಗಳ ನಿಯಂತ್ರಣ ಮಾಡಬೇಕು’ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>