ಶುಕ್ರವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ನಾವು ಈ ಹಿಂದೆಯೂ ಸಂಘ ಸಂಸ್ಥೆಗಳ ನೆರವು ಪಡೆದಿಲ್ಲ. ಮುಂದೆಯೂ ಪಡೆಯುವುದಿಲ್ಲ.ಹಾನಿ ಸಮೀಕ್ಷೆ, ಪರಿಹಾರಕ್ಕೆ ಸಂಬಂಧಿಸಿದ ದಾಖಲೆಗಳ ನಿರ್ವಹಣೆ, ಪರಿಹಾರ ವಿತರಣೆ ಸೇರಿದಂತೆ ಎಲ್ಲ ಕೆಲಸಗಳನ್ನೂ ಹುಲಿ ಯೋಜನೆಯ ಅಧಿಕಾರಿಗಳೇ ನಿರ್ವಹಿಸುತ್ತಾರೆ’ ಎಂದು ಹೇಳಿದ್ದಾರೆ.