<p><strong>ಹನೂರು:</strong> ತಾಲ್ಲೂಕಿನ ಕಾವೇರಿ ವನ್ಯಧಾಮದ ಹನೂರು ವನ್ಯಜೀವಿ ವಲಯದಲ್ಲಿ ಶುಕ್ರವಾರ ಬೆಂಕಿ ಬಿದ್ದಿದ್ದು, ನೂರಾರು ಎಕರೆ ಅರಣ್ಯ ಪ್ರದೇಶ ಸುಟ್ಟಿದೆ ಎಂದು ಹೇಳಲಾಗಿದೆ.ಕಿಡಿಗೇಡಿಗಳು ಬೆಂಕಿ ಹಾಕಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಹನೂರು ವನ್ಯಜೀವಿ ವಲಯದ ಬಂಡಳ್ಳಿ ಬೀಟ್ನ ಬಾವಿಗುಡ್ಡ ಬಳಿ ಶುಕ್ರವಾರ ಮಧ್ಯಾಹ್ನದ ವೇಳೆ ಬೆಂಕಿ ಕಾಣಿಸಿಕೊಂಡಿದೆ. ರಾತ್ರಿ ಎಂಟು ಗಂಟೆಯವರೆಗೂ ನಿರಂತರವಾಗಿ ಉರಿದಿದೆ. ವಲಯ ಅರಣ್ಯಾಧಿಕಾರಿ ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದರು.</p>.<p>ಈ ಬಗ್ಗೆ ‘<em>ಪ್ರಜಾವಾಣಿ</em>’ಗೆ ಪ್ರತಿಕ್ರಿಯಿಸಿರುವ ಕಾವೇರಿ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಡಾ.ಎಸ್.ರಮೇಶ್ ಅವರು, ‘ಬಂಡಳ್ಳಿ ಬೆಟ್ಟದಲ್ಲಿ ಅರಣ್ಯದ ಮಧ್ಯದೊಳಗೆ ಬೆಂಕಿ ಇಟ್ಟಿದ್ದಾರೆ. ಗಾಳಿಯೂ ಜೋರಾಗಿ ಬೀಸುತ್ತಿರುವುದರಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತರುವುದು ಕಷ್ಟವಾಗುತ್ತಿದೆ. ಕಿಚ್ಚು ನಂದಿಸಲುಸಿಬ್ಬಂದಿ ಶ್ರಮಿಸುತ್ತಿದ್ದಾರೆ’ ಎಂದರು.</p>.<p class="Subhead"><strong>ಅಲ್ಲಲ್ಲಿ ಬೆಂಕಿ:</strong> ಕೆಲವು ದಿನಗಳಿಂದೀಚೆಗೆ ವನ್ಯಧಾಮದ ವಿವಿಧ ಕಡೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿವೆ. ಬೆಂಕಿ ನಂದಿಸುವಲ್ಲಿ ಸಿಬ್ಬಂದಿ ಯಶಸ್ವಿಯಾಗಿದ್ದರು.ಮೂರು ದಿನಗಳ ಹಿಂದೆ ಕೊತ್ತನೂರು ವನ್ಯಜೀವಿ ವಲಯದ ವಿವಿಧ ಕಡೆಗಳಲ್ಲಿ ಬೆಂಕಿ ಬಿದ್ದು ಹತ್ತಾರು ಎಕರೆ ಕಾಡು ಭಸ್ಮವಾಗಿದೆ.</p>.<p class="Subhead"><strong>ಕಡಿಮೆ ಬೆಂಕಿ ಕಾವಲುಗಾರರು: </strong>ಅರಣ್ಯ ಇಲಾಖೆಯು ಈ ಬಾರಿ ಹೆಚ್ಚು ಬೆಂಕಿ ಕಾವಲುಗರನ್ನು ನಿಯೋಜನೆ ಮಾಡಿಲ್ಲ. ಇದರಿಂದ ಕಾಳ್ಗಿಚ್ಚಿನ ಮೇಲೆ ನಿಗಾ ಇಡಲು ಕಷ್ಟವಾಗುತ್ತಿದೆ ಎಂದು ಹೇಳಲಾಗಿದೆ.ಹನೂರು ಮತ್ತು ಕೊತ್ತನೂರು ವನ್ಯಜೀವಿ ವಲಯಗಳಲ್ಲಿ ಬೆಂಕಿ ಕಾವಲುಗಾರರನ್ನು ನಿಯೋಜನೆ ಮಾಡಿಕೊಂಡು ಬಳಿಕ ಅವರನ್ನು ವಜಾ ಮಾಡಲಾಗಿದೆ ಆರೋಪವೂ ಇದೆ.</p>.<p>ಈ ಆರೋಪಗಳನ್ನು ಅಲ್ಲಗಳೆದಿರುವ ರಮೇಶ್ ಅವರು, ‘ಈ ಬಾರಿಯೂ ಬೆಂಕಿ ಕಾವಲುಗಾರರನ್ನು ನಿಯೋಜಿಸಿದ್ದೇವೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕಡಿಮೆ ಸಂಖ್ಯೆಯಲ್ಲಿ ನೇಮಕ ಮಾಡಿಕೊಳ್ಳಲಾಗಿದೆ’ ಎಂದು ಹೇಳಿದರು.</p>.<p class="Subhead"><strong>ಒಣ ಪ್ರದೇಶ: </strong>ಕಾವೇರಿ ವನ್ಯಧಾಮದಲ್ಲಿ ಕುರುಚಲು ಗಿಡಗಳು ಹಾಗೂ ಒಣಹುಲ್ಲು ಹೆಚ್ಚಾಗಿದ್ದು, ಬೇಸಿಗೆ ಸಂದರ್ಭದಲ್ಲಿ ಪೂರ್ಣವಾಗಿ ಒಣಗಿರುತ್ತವೆ. ಸಣ್ಣ ಬೆಂಕಿ ಕಿಡಿ ಬಿದ್ದರೂ ಎಕರೆಗಟ್ಟಲೆ ಪ್ರದೇಶದಲ್ಲಿ ಬೆಂಕಿ ಹರಡುತ್ತದೆ.</p>.<p>ವನ್ಯಧಾಮವು ಬೆಟ್ಟಗುಡ್ಡಗಳಿಂದ ಕೂಡಿದ ಕಡಿದಾದ ಪ್ರದೇಶ ಆಗಿರುವುದರಿಂದಬೆಂಕಿ ಬಿದ್ದ ತಕ್ಷಣ ಸಿಬ್ಬಂದಿ ಸ್ಥಳಕ್ಕೆ ತಲುಪಿ ಕಾರ್ಯಾಚರಣೆ ಮಾಡುವುದು ಕಷ್ಟವಾಗುತ್ತದೆ. ಗಾಳಿಯೂ ಇದ್ದರೆ ಬೆಂಕಿ ಇನ್ನಷ್ಟು ವೇಗದಲ್ಲಿ ಹರಡಿ ನಿಯಂತ್ರಣಕ್ಕೆ ತರುವುದು ಸುಲಭವಿಲ್ಲ ಎಂದು ಹೇಳುತ್ತಾರೆ ಸಿಬ್ಬಂದಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನೂರು:</strong> ತಾಲ್ಲೂಕಿನ ಕಾವೇರಿ ವನ್ಯಧಾಮದ ಹನೂರು ವನ್ಯಜೀವಿ ವಲಯದಲ್ಲಿ ಶುಕ್ರವಾರ ಬೆಂಕಿ ಬಿದ್ದಿದ್ದು, ನೂರಾರು ಎಕರೆ ಅರಣ್ಯ ಪ್ರದೇಶ ಸುಟ್ಟಿದೆ ಎಂದು ಹೇಳಲಾಗಿದೆ.ಕಿಡಿಗೇಡಿಗಳು ಬೆಂಕಿ ಹಾಕಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಹನೂರು ವನ್ಯಜೀವಿ ವಲಯದ ಬಂಡಳ್ಳಿ ಬೀಟ್ನ ಬಾವಿಗುಡ್ಡ ಬಳಿ ಶುಕ್ರವಾರ ಮಧ್ಯಾಹ್ನದ ವೇಳೆ ಬೆಂಕಿ ಕಾಣಿಸಿಕೊಂಡಿದೆ. ರಾತ್ರಿ ಎಂಟು ಗಂಟೆಯವರೆಗೂ ನಿರಂತರವಾಗಿ ಉರಿದಿದೆ. ವಲಯ ಅರಣ್ಯಾಧಿಕಾರಿ ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದರು.</p>.<p>ಈ ಬಗ್ಗೆ ‘<em>ಪ್ರಜಾವಾಣಿ</em>’ಗೆ ಪ್ರತಿಕ್ರಿಯಿಸಿರುವ ಕಾವೇರಿ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಡಾ.ಎಸ್.ರಮೇಶ್ ಅವರು, ‘ಬಂಡಳ್ಳಿ ಬೆಟ್ಟದಲ್ಲಿ ಅರಣ್ಯದ ಮಧ್ಯದೊಳಗೆ ಬೆಂಕಿ ಇಟ್ಟಿದ್ದಾರೆ. ಗಾಳಿಯೂ ಜೋರಾಗಿ ಬೀಸುತ್ತಿರುವುದರಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತರುವುದು ಕಷ್ಟವಾಗುತ್ತಿದೆ. ಕಿಚ್ಚು ನಂದಿಸಲುಸಿಬ್ಬಂದಿ ಶ್ರಮಿಸುತ್ತಿದ್ದಾರೆ’ ಎಂದರು.</p>.<p class="Subhead"><strong>ಅಲ್ಲಲ್ಲಿ ಬೆಂಕಿ:</strong> ಕೆಲವು ದಿನಗಳಿಂದೀಚೆಗೆ ವನ್ಯಧಾಮದ ವಿವಿಧ ಕಡೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿವೆ. ಬೆಂಕಿ ನಂದಿಸುವಲ್ಲಿ ಸಿಬ್ಬಂದಿ ಯಶಸ್ವಿಯಾಗಿದ್ದರು.ಮೂರು ದಿನಗಳ ಹಿಂದೆ ಕೊತ್ತನೂರು ವನ್ಯಜೀವಿ ವಲಯದ ವಿವಿಧ ಕಡೆಗಳಲ್ಲಿ ಬೆಂಕಿ ಬಿದ್ದು ಹತ್ತಾರು ಎಕರೆ ಕಾಡು ಭಸ್ಮವಾಗಿದೆ.</p>.<p class="Subhead"><strong>ಕಡಿಮೆ ಬೆಂಕಿ ಕಾವಲುಗಾರರು: </strong>ಅರಣ್ಯ ಇಲಾಖೆಯು ಈ ಬಾರಿ ಹೆಚ್ಚು ಬೆಂಕಿ ಕಾವಲುಗರನ್ನು ನಿಯೋಜನೆ ಮಾಡಿಲ್ಲ. ಇದರಿಂದ ಕಾಳ್ಗಿಚ್ಚಿನ ಮೇಲೆ ನಿಗಾ ಇಡಲು ಕಷ್ಟವಾಗುತ್ತಿದೆ ಎಂದು ಹೇಳಲಾಗಿದೆ.ಹನೂರು ಮತ್ತು ಕೊತ್ತನೂರು ವನ್ಯಜೀವಿ ವಲಯಗಳಲ್ಲಿ ಬೆಂಕಿ ಕಾವಲುಗಾರರನ್ನು ನಿಯೋಜನೆ ಮಾಡಿಕೊಂಡು ಬಳಿಕ ಅವರನ್ನು ವಜಾ ಮಾಡಲಾಗಿದೆ ಆರೋಪವೂ ಇದೆ.</p>.<p>ಈ ಆರೋಪಗಳನ್ನು ಅಲ್ಲಗಳೆದಿರುವ ರಮೇಶ್ ಅವರು, ‘ಈ ಬಾರಿಯೂ ಬೆಂಕಿ ಕಾವಲುಗಾರರನ್ನು ನಿಯೋಜಿಸಿದ್ದೇವೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕಡಿಮೆ ಸಂಖ್ಯೆಯಲ್ಲಿ ನೇಮಕ ಮಾಡಿಕೊಳ್ಳಲಾಗಿದೆ’ ಎಂದು ಹೇಳಿದರು.</p>.<p class="Subhead"><strong>ಒಣ ಪ್ರದೇಶ: </strong>ಕಾವೇರಿ ವನ್ಯಧಾಮದಲ್ಲಿ ಕುರುಚಲು ಗಿಡಗಳು ಹಾಗೂ ಒಣಹುಲ್ಲು ಹೆಚ್ಚಾಗಿದ್ದು, ಬೇಸಿಗೆ ಸಂದರ್ಭದಲ್ಲಿ ಪೂರ್ಣವಾಗಿ ಒಣಗಿರುತ್ತವೆ. ಸಣ್ಣ ಬೆಂಕಿ ಕಿಡಿ ಬಿದ್ದರೂ ಎಕರೆಗಟ್ಟಲೆ ಪ್ರದೇಶದಲ್ಲಿ ಬೆಂಕಿ ಹರಡುತ್ತದೆ.</p>.<p>ವನ್ಯಧಾಮವು ಬೆಟ್ಟಗುಡ್ಡಗಳಿಂದ ಕೂಡಿದ ಕಡಿದಾದ ಪ್ರದೇಶ ಆಗಿರುವುದರಿಂದಬೆಂಕಿ ಬಿದ್ದ ತಕ್ಷಣ ಸಿಬ್ಬಂದಿ ಸ್ಥಳಕ್ಕೆ ತಲುಪಿ ಕಾರ್ಯಾಚರಣೆ ಮಾಡುವುದು ಕಷ್ಟವಾಗುತ್ತದೆ. ಗಾಳಿಯೂ ಇದ್ದರೆ ಬೆಂಕಿ ಇನ್ನಷ್ಟು ವೇಗದಲ್ಲಿ ಹರಡಿ ನಿಯಂತ್ರಣಕ್ಕೆ ತರುವುದು ಸುಲಭವಿಲ್ಲ ಎಂದು ಹೇಳುತ್ತಾರೆ ಸಿಬ್ಬಂದಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>