<p><strong>ಕೊಳ್ಳೇಗಾಲ (ಚಾಮರಾಜನಗರ ಜಿಲ್ಲೆ):</strong> ‘ಮಾನವ ಹಾಗೂ ವನ್ಯಜೀವಿ ಸಂಘರ್ಷ ತಡೆಯಲು ನಾಗರಹೊಳೆ, ಮಲೆಮಹದೇಶ್ವರ ಬೆಟ್ಟ, ಕಾಳಿ, ಮಡಿಕೇರಿ ವನ್ಯಧಾಮಗಳಲ್ಲಿ ಕಮಾಂಡ್ ಕೇಂದ್ರ ತೆರೆಯಲಾಗಿದೆ’ ಎಂದು ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಬುಧವಾರ ಹೇಳಿದರು.</p>.<p>ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಅರಣ್ಯ ಇಲಾಖೆಯ ಕಚೇರಿ ಆವರಣದಲ್ಲಿ ಸಮಗ್ರ ಕಮಾಂಡ್ ಸೆಂಟರ್ ಉದ್ಘಾಟಿಸಿದ ಅವರು, ‘ಅರಣ್ಯದೊಳಗೆ ಗಸ್ತು ಹೆಚ್ಚಿಸಲು ಇದು ಸಹಕಾರಿ’ ಎಂದರು.</p>.<p>‘ಚಿಕ್ಕಮಗಳೂರು, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ, ಮೈಸೂರು ವಿಭಾಗ, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶ, ಹಾಸನ ವಲಯದಲ್ಲೂ ಸೆಂಟರ್ ತೆರೆಯಲಾಗುವುದು. ಬೆಂಗಳೂರಿನಲ್ಲಿ ರಾಜ್ಯಮಟ್ಟದ ಕೇಂದ್ರವನ್ನು ಅಧಿವೇಶನದ ನಂತರ ಉದ್ಘಾಟಿಸಲಾಗುವುದು’ ಎಂದರು.</p>.<p>‘ಈ ಕೇಂದ್ರದಲ್ಲಿ ಕೃತಕ ಬುದ್ಧಿಮತ್ತೆ ಕ್ಯಾಮೆರಾ, ಥರ್ಮಲ್ ಡ್ರೋನ್ ಕ್ಯಾಮೆರಾ, ಆಧುನಿಕ ತಂತ್ರಜ್ಞಾನ ಆಧಾರಿತ ಪರಿಕರಗಳು ಇರಲಿದ್ದು, ವನ್ಯಜೀವಿಗಳ ಚಲನವಲನದ ಬಗ್ಗೆ ನಿಗಾ ಇರಿಸಲಾಗುವುದು. ಯಾವ ಗ್ರಾಮಗಳ ವನ್ಯಜೀವಿ ಬಳಿ ಬಂದಿವೆ ಎಂಬ ಅರಿತು ಕ್ರಮ ವಹಿಸಿ ಜೀವಹಾನಿ ತಡೆಯಬಹುದು’ ಎಂದರು.</p>.<h2>ಗಸ್ತು ನಿಗಾಕ್ಕೆ ತಂತ್ರಾಂಶ:</h2>.<p>‘ಸಿಬ್ಬಂದಿಯು ಕಾಡಿನಲ್ಲಿ ಎಷ್ಟು ಹೊತ್ತು ಗಸ್ತು ತಿರುಗುತ್ತಾರೆ ಎಂದು ಗಮನಿಸಲು ಇ-ಗಸ್ತು ತಂತ್ರಾಂಶ ರೂಪಿಸಿದ್ದು, ಎಂ.ಸ್ಟ್ರೈಪ್ ಜೊತೆಗೆ ಇದನ್ನೂ ಜಾರಿ ಮಾಡಿ ನಿಗಾ ಇರಿಸಬೇಕು’ ಎಂದು ಸಚಿವರು ಸೂಚಿಸಿದರು.</p>.<p>‘ನಾಗರಹೊಳೆ, ಬಂಡೀಪುರ ವ್ಯಾಪ್ತಿಯಲ್ಲಿ 20ಕ್ಕೂ ಹೆಚ್ಚು ಹುಲಿಗಳನ್ನು ಸೆರೆಹಿಡಿದು ಸ್ಥಳಾಂತರಿಸಲಾಗಿದೆ’ ಎಂದು ಸಚಿವರು ತಿಳಿಸಿದರು.</p>.<div><blockquote>ಸಿಬ್ಬಂದಿ ಕಾಡಿನಲ್ಲಿ ಎಷ್ಟು ಹೊತ್ತು ಗಸ್ತು ತಿರುಗುತ್ತಾರೆ ಎಂದು ಗಮನಿಸಲು ಇ-ಗಸ್ತು ತಂತ್ರಾಂಶ ರೂಪಿಸಿದ್ದು, ಎಂ.ಸ್ಟ್ರೈಪ್ ಜೊತೆಗೆ ಜಾರಿಗೆ ಸೂಚಿಸಲಾಗಿದೆ </blockquote><span class="attribution">ಈಶ್ವರ ಖಂಡ್ರೆ, ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಳ್ಳೇಗಾಲ (ಚಾಮರಾಜನಗರ ಜಿಲ್ಲೆ):</strong> ‘ಮಾನವ ಹಾಗೂ ವನ್ಯಜೀವಿ ಸಂಘರ್ಷ ತಡೆಯಲು ನಾಗರಹೊಳೆ, ಮಲೆಮಹದೇಶ್ವರ ಬೆಟ್ಟ, ಕಾಳಿ, ಮಡಿಕೇರಿ ವನ್ಯಧಾಮಗಳಲ್ಲಿ ಕಮಾಂಡ್ ಕೇಂದ್ರ ತೆರೆಯಲಾಗಿದೆ’ ಎಂದು ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಬುಧವಾರ ಹೇಳಿದರು.</p>.<p>ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಅರಣ್ಯ ಇಲಾಖೆಯ ಕಚೇರಿ ಆವರಣದಲ್ಲಿ ಸಮಗ್ರ ಕಮಾಂಡ್ ಸೆಂಟರ್ ಉದ್ಘಾಟಿಸಿದ ಅವರು, ‘ಅರಣ್ಯದೊಳಗೆ ಗಸ್ತು ಹೆಚ್ಚಿಸಲು ಇದು ಸಹಕಾರಿ’ ಎಂದರು.</p>.<p>‘ಚಿಕ್ಕಮಗಳೂರು, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ, ಮೈಸೂರು ವಿಭಾಗ, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶ, ಹಾಸನ ವಲಯದಲ್ಲೂ ಸೆಂಟರ್ ತೆರೆಯಲಾಗುವುದು. ಬೆಂಗಳೂರಿನಲ್ಲಿ ರಾಜ್ಯಮಟ್ಟದ ಕೇಂದ್ರವನ್ನು ಅಧಿವೇಶನದ ನಂತರ ಉದ್ಘಾಟಿಸಲಾಗುವುದು’ ಎಂದರು.</p>.<p>‘ಈ ಕೇಂದ್ರದಲ್ಲಿ ಕೃತಕ ಬುದ್ಧಿಮತ್ತೆ ಕ್ಯಾಮೆರಾ, ಥರ್ಮಲ್ ಡ್ರೋನ್ ಕ್ಯಾಮೆರಾ, ಆಧುನಿಕ ತಂತ್ರಜ್ಞಾನ ಆಧಾರಿತ ಪರಿಕರಗಳು ಇರಲಿದ್ದು, ವನ್ಯಜೀವಿಗಳ ಚಲನವಲನದ ಬಗ್ಗೆ ನಿಗಾ ಇರಿಸಲಾಗುವುದು. ಯಾವ ಗ್ರಾಮಗಳ ವನ್ಯಜೀವಿ ಬಳಿ ಬಂದಿವೆ ಎಂಬ ಅರಿತು ಕ್ರಮ ವಹಿಸಿ ಜೀವಹಾನಿ ತಡೆಯಬಹುದು’ ಎಂದರು.</p>.<h2>ಗಸ್ತು ನಿಗಾಕ್ಕೆ ತಂತ್ರಾಂಶ:</h2>.<p>‘ಸಿಬ್ಬಂದಿಯು ಕಾಡಿನಲ್ಲಿ ಎಷ್ಟು ಹೊತ್ತು ಗಸ್ತು ತಿರುಗುತ್ತಾರೆ ಎಂದು ಗಮನಿಸಲು ಇ-ಗಸ್ತು ತಂತ್ರಾಂಶ ರೂಪಿಸಿದ್ದು, ಎಂ.ಸ್ಟ್ರೈಪ್ ಜೊತೆಗೆ ಇದನ್ನೂ ಜಾರಿ ಮಾಡಿ ನಿಗಾ ಇರಿಸಬೇಕು’ ಎಂದು ಸಚಿವರು ಸೂಚಿಸಿದರು.</p>.<p>‘ನಾಗರಹೊಳೆ, ಬಂಡೀಪುರ ವ್ಯಾಪ್ತಿಯಲ್ಲಿ 20ಕ್ಕೂ ಹೆಚ್ಚು ಹುಲಿಗಳನ್ನು ಸೆರೆಹಿಡಿದು ಸ್ಥಳಾಂತರಿಸಲಾಗಿದೆ’ ಎಂದು ಸಚಿವರು ತಿಳಿಸಿದರು.</p>.<div><blockquote>ಸಿಬ್ಬಂದಿ ಕಾಡಿನಲ್ಲಿ ಎಷ್ಟು ಹೊತ್ತು ಗಸ್ತು ತಿರುಗುತ್ತಾರೆ ಎಂದು ಗಮನಿಸಲು ಇ-ಗಸ್ತು ತಂತ್ರಾಂಶ ರೂಪಿಸಿದ್ದು, ಎಂ.ಸ್ಟ್ರೈಪ್ ಜೊತೆಗೆ ಜಾರಿಗೆ ಸೂಚಿಸಲಾಗಿದೆ </blockquote><span class="attribution">ಈಶ್ವರ ಖಂಡ್ರೆ, ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>