<p><strong>ಕೊಳ್ಳೇಗಾಲ:</strong> ‘ವನ್ಯಜೀವಿ ಮತ್ತು ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ’ ಎಂದು ಸಿಐಡಿ ಅರಣ್ಯ ಸಂಚಾರಿ ದಳದ ಪಿಎಸ್ಐ ವಿಜಯರಾಜ್ ಹೇಳಿದರು.</p>.<p>ನಗರದ ಮುಡಿಗುಂಡದ ಆದರ್ಶ ಶಾಲೆಯಲ್ಲಿ ಸೋಮವಾರ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ವತಿಯಿಂದ ಆಯೋಜಿಸಿದ್ದ ವನ್ಯಜೀವಿ ಮತ್ತು ಪರಿಸರ ಸಂರಕ್ಷಣೆ ಅರಿವು ಕಾರ್ಯಕ್ರಮದಲ್ಲಿ ಉದ್ಘಾಟಿಸಿ ಮಾತನಾಡಿದರು.</p>.<p>‘ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಅರಿವಿಲ್ಲದೆ ಜನರು ಪ್ರಾಣಿಗಳನ್ನು ಬೇಟೆಯಾಡುವುದು, ಕೊಲ್ಲುವುದು ಸೇರಿದಂತೆ ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಮುಂದಾಗುತ್ತಿದ್ದಾರೆ. ಹಾಗಾಗಿ ಅನೇಕರು ಪ್ರಕರಣದಲ್ಲಿ ಸಿಲುಕಿಕೊಳ್ಳುತ್ತಿದ್ದಾರೆ’ ಎಂದರು.</p>.<p>‘ಇಲ್ಲಿನ ಕೆಲವು ಭಾಗಗಳಲ್ಲಿ ದನಗಳನ್ನು ಕಾಡಿಗೆ ಮೇಯಿಸಲು ಕಳುಹಿಸಿ ಅರಣ್ಯವನ್ನು ನಾಶ ಮಾಡುವುದು ಹಾಗೂ ಅರಣ್ಯ ಸಂಪತ್ತನ್ನು ಲೂಟಿ ಮಾಡುವುದು ನಡೆಯುತ್ತಿದೆ. ತಿಂಗಳ ಹಿಂದೆ ದನ ಮೇಯಿಸುವವರು 5 ಹುಲಿಗೆ ವಿಷ ಹಾಕಿ ಸಾಯಿಸಿರುವ ಘಟನೆ ಎಲ್ಲರಿಗೂ ತಿಳಿದಿದೆ’ ಎಂದರು.</p>.<p>‘ಪ್ರತಿಯೊಬ್ಬರೂ ಅರಣ್ಯವನ್ನು ಕಾಪಾಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪ್ರಕೃತಿ ವಿಕೋಪ ಆಗುವುದರಲ್ಲಿ ಅನುಮಾನವೇ ಇಲ್ಲ. ಕೆಲವು ಮೌಢ್ಯಗಳ ಹೆಸರಲ್ಲಿ ಪ್ರಾಣಿಗಳನ್ನು ಬಳಸಿಕೊಳ್ಳುವುದು, ಕೊಲ್ಲುವುದು ಅಪರಾಧ. ವಿದ್ಯಾರ್ಥಿಗಳು ಈ ಎಲ್ಲದರ ಬಗ್ಗೆ ಅರಿತುಕೊಳ್ಳಬೇಕು’ ಎಂದರು.<br /><br />ಹೆಡ್ ಕಾನ್ಸ್ಟೆಬಲ್ ಬಸವರಾಜು, ರಾಮಚಂದ್ರ, ಸ್ವಾಮಿ, ಲತಾ, ಬಸವರಾಜು, ಶಾಲಾ ಶಿಕ್ಷಕರು, ಮಕ್ಕಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಳ್ಳೇಗಾಲ:</strong> ‘ವನ್ಯಜೀವಿ ಮತ್ತು ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ’ ಎಂದು ಸಿಐಡಿ ಅರಣ್ಯ ಸಂಚಾರಿ ದಳದ ಪಿಎಸ್ಐ ವಿಜಯರಾಜ್ ಹೇಳಿದರು.</p>.<p>ನಗರದ ಮುಡಿಗುಂಡದ ಆದರ್ಶ ಶಾಲೆಯಲ್ಲಿ ಸೋಮವಾರ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ವತಿಯಿಂದ ಆಯೋಜಿಸಿದ್ದ ವನ್ಯಜೀವಿ ಮತ್ತು ಪರಿಸರ ಸಂರಕ್ಷಣೆ ಅರಿವು ಕಾರ್ಯಕ್ರಮದಲ್ಲಿ ಉದ್ಘಾಟಿಸಿ ಮಾತನಾಡಿದರು.</p>.<p>‘ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಅರಿವಿಲ್ಲದೆ ಜನರು ಪ್ರಾಣಿಗಳನ್ನು ಬೇಟೆಯಾಡುವುದು, ಕೊಲ್ಲುವುದು ಸೇರಿದಂತೆ ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಮುಂದಾಗುತ್ತಿದ್ದಾರೆ. ಹಾಗಾಗಿ ಅನೇಕರು ಪ್ರಕರಣದಲ್ಲಿ ಸಿಲುಕಿಕೊಳ್ಳುತ್ತಿದ್ದಾರೆ’ ಎಂದರು.</p>.<p>‘ಇಲ್ಲಿನ ಕೆಲವು ಭಾಗಗಳಲ್ಲಿ ದನಗಳನ್ನು ಕಾಡಿಗೆ ಮೇಯಿಸಲು ಕಳುಹಿಸಿ ಅರಣ್ಯವನ್ನು ನಾಶ ಮಾಡುವುದು ಹಾಗೂ ಅರಣ್ಯ ಸಂಪತ್ತನ್ನು ಲೂಟಿ ಮಾಡುವುದು ನಡೆಯುತ್ತಿದೆ. ತಿಂಗಳ ಹಿಂದೆ ದನ ಮೇಯಿಸುವವರು 5 ಹುಲಿಗೆ ವಿಷ ಹಾಕಿ ಸಾಯಿಸಿರುವ ಘಟನೆ ಎಲ್ಲರಿಗೂ ತಿಳಿದಿದೆ’ ಎಂದರು.</p>.<p>‘ಪ್ರತಿಯೊಬ್ಬರೂ ಅರಣ್ಯವನ್ನು ಕಾಪಾಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪ್ರಕೃತಿ ವಿಕೋಪ ಆಗುವುದರಲ್ಲಿ ಅನುಮಾನವೇ ಇಲ್ಲ. ಕೆಲವು ಮೌಢ್ಯಗಳ ಹೆಸರಲ್ಲಿ ಪ್ರಾಣಿಗಳನ್ನು ಬಳಸಿಕೊಳ್ಳುವುದು, ಕೊಲ್ಲುವುದು ಅಪರಾಧ. ವಿದ್ಯಾರ್ಥಿಗಳು ಈ ಎಲ್ಲದರ ಬಗ್ಗೆ ಅರಿತುಕೊಳ್ಳಬೇಕು’ ಎಂದರು.<br /><br />ಹೆಡ್ ಕಾನ್ಸ್ಟೆಬಲ್ ಬಸವರಾಜು, ರಾಮಚಂದ್ರ, ಸ್ವಾಮಿ, ಲತಾ, ಬಸವರಾಜು, ಶಾಲಾ ಶಿಕ್ಷಕರು, ಮಕ್ಕಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>