66ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಕೊಳ್ಳೇಗಾಲದ ವನ್ಯಜೀವಿ ಟ್ರಸ್ಟ್, ಅರಣ್ಯ ಇಲಾಖೆ ಜಂಟಿಯಾಗಿ ಆಯೋಜಿಸಿದ್ದ ಚಿತ್ರಪಟ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ‘ವನ್ಯಜೀವಿ, ಅರಣ್ಯ ಸಂರಕ್ಷಣೆಗೆ ಸಂವಿಧಾನದಲ್ಲಿ ಪ್ರತ್ಯೇಕ ಕಲಂಗಳಿವೆ. ಸರ್ಕಾರ ಕೂಡ ಸಂರಕ್ಷಣಾ ಕಾನೂನುಗಳನ್ನು ರೂಪಿಸಿದೆ. ಸರ್ಕಾರ ಅಥವಾ ಇಲಾಖೆಗಳಿಂದ ಸಂರಕ್ಷಣೆ ಸಾಧ್ಯವಿಲ್ಲ. ಜನರು ಕೂಡ ವೈಯಕ್ತಿಕ ನೆಲೆಗಟ್ಟಿನಲ್ಲಿ ಸಂರಕ್ಷಣೆಯಲ್ಲಿ ತೊಡಗಬೇಕು’ ಎಂದು ಅವರು ಹೇಳಿದರು.