ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕ ಎನ್.ಮಹೇಶ್ ಹಾಗೂ ಸಚಿವ ವಿ.ಸೋಮಣ್ಣ ಸೇರಿ ಎಲ್ಲರೂ ಚುನಾವಣೆಯನ್ನು ಒಟ್ಟಿಗೆ ಎದುರಿಸುತ್ತೇವೆ. ಒಳ್ಳೆಯ ಕೆಲಸಗಳಿಗೆ ಆದ್ಯತೆ ನೀಡುತ್ತೇವೆ. ಬಿ.ಎಸ್.ಯಡಿಯೂರಪ್ಪ ರಾಜ್ಯ ಪ್ರವಾಸ ಮಾಡುತ್ತಾರೆ. ಅವರು ಸುಮ್ಮನೆ ಕೊರುವ ವ್ಯಕ್ತಿ ಅಲ್ಲ. ಅವರೊಬ್ಬ ಪ್ರಶ್ನಾತೀತ ನಾಯಕ ರಾಜ್ಯ ಪ್ರವಾಸಕ್ಕೆ ನಾನೂ ಹೋಗುತ್ತೇನೆ. ಇಲ್ಲಿಗೆ ಬಂದಾಗಲ್ಲೂ ಇರುತ್ತೇನೆ. ನಾಯಕ ಯಾವತ್ತಿದ್ರೂ ನಾಯಕನೇ. ಹಾಗಂತ ಎಲ್ಲರೂ ನಾಯಕರಾಗಲು ಆಗಲ್ಲ. ರಾಜ್ಯ ಬಿಜೆಪಿ ಸರ್ಕಾರದಲ್ಲಿ ಯಾವ ಬದಲಾವಣೆಯೂ ಆಗಲ್ಲ ಕಾಂಗ್ರೆಸ್ನವರು ಅದೇ ರೀತಿ ಸುಳ್ಳು ಹೇಳಿಕೊಂಡು ಹೋಗುತ್ತಿದ್ದಾರೆ. ದೇಶದ ಜನ ಎಲ್ಲ ಬೆಳವಣಿಗೆ ಗಮನಿಸುತ್ತಿದ್ದಾರೆ. ಹತ್ತಾರು ವರ್ಷ ಕಾಲ ಆಳಿದವರನ್ನು ನೋಡಿದ್ದಾರೆ. ಮುಂದೆಯೂ ನೋಡುತ್ತಾರೆ’ ಎಂದರು.