ಮಹಿಳೆ ಆನೆ ದಾಳಿಗೆ ತುತ್ತಾಗಿ ಮೃತಪಟ್ಟಿರುವ ವಿಷಯ ತಿಳಿದಿದೆ. ಮೂರು ದಿನಗಳೊಳಗೆ ಮೃತಪಟ್ಟ ಮಹಿಳೆ ಕುಟುಂಬಕ್ಕೆ ₹7.5 ಲಕ್ಷ ಪರಿಹಾರ ವಿತರಿಸಲಾಗುವುದು. ‘ಗುರುವಾರ ಸ್ಥಳಕ್ಕೆ ತೆರಳಿ ಘಟನೆ ಬಗ್ಗೆ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಮಲೆಮಹದೇಶ್ವರ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ. ಏಡುಕುಂಡಲು 'ಪ್ರಜಾವಾಣಿ'ಗೆ ತಿಳಿಸಿದರು.