ಗ್ರಾಮದಿಂದ ಎಂಟು ಮಂದಿ ಬೆಟ್ಟಕ್ಕೆ ಬಂದಿದ್ದರು. ಈ ಪೈಕಿ ಲಕ್ಷ್ಮಿ, ಪದ್ಮಮ್ಮ, ಪುಟ್ಟರಾಜು ಅವರು ತಾಳಬೆಟ್ಟದಲ್ಲಿ ವಾಹನದಿಂದ ಇಳಿದು ಪಾದಯಾತ್ರೆ ಮೂಲಕ ಬೆಟ್ಟಕ್ಕೆ ಹೊರಟರು. ಸಂಜೆ 7 ಗಂಟೆಯ ಸುಮಾರಿಗೆ ರಂಗಸ್ವಾಮಿ ಒಡ್ಡು ಮತ್ತು ಆನೆ ತಲೆದಿಂಬ ನಡುವಿನ ಕಾಡು ದಾರಿಯಲ್ಲಿ ಕಾಡಾನೆಯೊಂದ ದಾಳಿ ಮಾಡಿದೆ. ಈ ಸಂದರ್ಭದಲ್ಲಿ ಆನೆ ತುಳಿತಕ್ಕೆ ಒಳಗಾದ ಲಕ್ಷ್ಮಿ ಅವರು ಸ್ಥಳದಲ್ಲೇ ಮೃತಪಟ್ಟರು.