ಟ್ರಸ್ಟ್ನ ಮುಖ್ಯಸ್ಥ ವೆಂಕಟೇಶ್ ಅವರ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆಯೂ ನಡೆದಿತ್ತು. ಆ ಬಳಿಕ, ಕೆಂಪಮ್ಮ ಅದೇ ಮನೆಯ ಮುಂದೆ ಕುಳಿತಿದ್ದು, ನ್ಯಾಯ ಕೊಡಿಸುವಂತೆ ಪ್ರಾಧಿಕಾರದ ಅಧಿಕಾರಿಗಳನ್ನು ಒತ್ತಾಯಿಸುತ್ತಿದ್ದಾರೆ. ಗುರುವಾರ ರಾತ್ರಿ ಇಡಿ ಅಲ್ಲೇ ಇದ್ದ ಮಹಿಳೆ ಶುಕ್ರವಾರವೂ ಅಲ್ಲೇ ಕುಳಿತಿದ್ದಾರೆ. ಮನೆಯ ಬಾಗಿಲು ತೆರೆಯುವರೆಗೆ ಊಟ ಮಾಡುವುದಿಲ್ಲ ಎಂದು ಹಟ ಹಿಡಿದಿದ್ದಾರೆ. ಪ್ರಾಧಿಕಾರದ ಸಿಬ್ಬಂದಿ ಆಕೆಯನ್ನು ಮನವೊಲಿಸಲು ಪ್ರಯತ್ನಿಸಿದರೂ ಪಟ್ಟು ಸಡಿಸಲಿಲ್ಲ.