ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ಅವರು, ‘ಈ ಪ್ರಕರಣ ನನ್ನ ಗಮನಕ್ಕೆ ಬಂದಿಲ್ಲ. ಆ ಮಹಿಳೆ ನನ್ನ ಬಳಿ ಬಂದಿದ್ದರು. ಭದ್ರತೆ ಒದಗಿಸುವುದಾಗಿ ಹೇಳಿದ್ದೆ. ಘಟನೆ ಬಗ್ಗೆ ಠಾಣೆಯಿಂದ ವರದಿ ಕೇಳಿದ್ದೇನೆ. ಸಿಬ್ಬಂದಿಯ ತಪ್ಪಿದ್ದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇನೆ’ ಎಂದು ಹೇಳಿದರು.