ಇಲ್ಲಿಗೆ ಸಮೀಪದ ಸಂದನಪಾಳ್ಯ ಗ್ರಾಮದ ಮದಲೈಮುತ್ತು ಎಂಬುವವರು ಕೂಲಿ ಕೆಲಸಕ್ಕಾಗಿ ಆಂಧ್ರಪ್ರದೇಶಕ್ಕೆ ತೆರಳಿದ್ದರು. ಲಾಕ್ಡೌನ್ನಿಂದ ವಾರದ ಹಿಂದೆ ಗ್ರಾಮಕ್ಕೆ ಮರಳಿದ್ದರು. ಬಳಿಕ ಗಂಟಲು ದ್ರವವನ್ನು ಪರೀಕ್ಷೆಗೊಳಪಡಿಸಿದಾಗ ಸೋಂಕು ದೃಢಪಟ್ಟಿತ್ತು. ನಂತರ ಕೊಳ್ಳೆಗಾಲ ಸರ್ಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಇವರು ಮೇ 17ರಂದು ಮೃತಪಟ್ಟಿದ್ದರು. ಬಳಿಕ ಖಾಸಗಿ ಆಂಬ್ಯೂಲೆನ್ಸ್ನಲ್ಲಿ ಶವವನ್ನು ತಂದು ಸ್ಮಶಾನದ ಮುಂದೆ ಬಿಟ್ಟು ಹೋಗಿದ್ದಾರೆ. ಅಂತ್ಯ ಸಂಸ್ಕಾರ ಮಾಡುವವರಿಲ್ಲದೇ ಪತ್ನಿ ಶವದ ಮುಂದೆ ಗೋಳಾಡುತ್ತಿರುವ ಚಿತ್ರ ಇದಾಗಿದೆ ಎಂದು ಹೇಳಲಾಗುತ್ತಿದೆ.