ಕಸ ವಿಲೇವಾರಿ ಮಾಡುವುದರ ಜತೆಗೆ ಗ್ರಾಮದ ಮಹಿಳೆಯರಿಗೆ ಸ್ವಚ್ಛ ಭಾರತ್ ಅಭಿಯಾನ, ನೈರ್ಮಲ್ಯದ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ಗ್ರಾಮವನ್ನು ಸ್ವಚ್ಛಗೊಳಿಸುವ ನಿಟ್ಟಿನಲ್ಲಿ ಪಂಚಾಯಿತಿ ರೂಪಿಸುವ ಕಾರ್ಯಕ್ರಮಗಳಲ್ಲಿ ಮಹೇಶ್ವರಿ ಅವರ ಭಾಗಿದಾರಿಕೆ ಹೆಚ್ಚಿದೆ. ಮೂಲದಲ್ಲಿ ಹಸಿ ಕಸ ಮತ್ತು ಒಣ ಕಸವನ್ನು ಪ್ರತ್ಯೇಕಗೊಳಿಸುವ ಬಗ್ಗೆ ಪ್ರತಿ ದಿನ ಜನರಿಗೆ ತಿಳಿ ಹೇಳುವ ಕೆಲಸವನ್ನು ಅವರು ಮಾಡುತ್ತಿದ್ದಾರೆ.