‘ಕೆಲವು ಕಿಡಿಗೇಡಿಗಳು ನನ್ನ ಬಗ್ಗೆಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರ ನಿರ್ದೇಶನದಂತೆ ವಿಶ್ವಾಸಮತ ವೇಳೆ ಸದನದಿಂದ ದೂರ ಉಳಿದಿದ್ದೆ. ಹೈಕಮಾಂಡ್ ಸೂಚನೆಯಂತೆ ನಡೆದುಕೊಂಡಿದ್ದೇನೆ. ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡಬೇಕು ಎಂದು ಮಾಯಾವತಿ ಟ್ವೀಟ್ ಮಾಡಿರುವುದು ನನ್ನ ಗಮನಕ್ಕೆ ಬಂದಿರಲಿಲ್ಲ’ ಎಂದು ಸುದ್ದಿಗಾರರಿಗೆ ಅವರು ತಿಳಿಸಿದರು.