<p><strong>ಗುಂಡ್ಲುಪೇಟೆ: ‘</strong>ಭೂಮಿ ಜೀವ ಸಂಕುಲ ಹೊಂದಿರುವ ಏಕೈಕ ಗ್ರಹ. ಭೂಮಿಯ ಆರೋಗ್ಯ ಕಾಪಾಡಿಕೊಳ್ಳುವುದು ಅನಿವಾರ್ಯವಾಗಿದೆ’ ಎಂದು ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶ ಬಸವರಾಜ ತಳವಾರ ಹೇಳಿದರು.</p>.<p>ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಭೂಮಿ ದಿನ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಮನುಷ್ಯನ ಜ್ಞಾನ ಬೆಳೆದಂತೆಲ್ಲ ದುರಾಸೆ ಹೆಚ್ಚಿದೆ. ಮಾನವನ ಅತಿಯಾಸೆಯಿಂದ ವಾತಾವರಣ ಕಲುಷಿತವಾಗುತ್ತಿದೆ. ಏರುತ್ತಿರುವ ಜಾಗತಿಕ ತಾಪಮಾನ, ಪರಿಸರ ನಾಶದಿಂದ ಭೂಮಿ ನಿರಂತರವಾಗಿ ಹದೆಗೆಡುತ್ತಿದೆ. ಈ ಕುರಿತು ಜಾಗೃತಿ ಮೂಡಿಸಲು ವಿಶ್ವ ಭೂದಿನ ಆಚರಣೆ ಮಾಡಲಾಗುತ್ತಿದೆ ಎಂದರು.</p>.<p>1970ರಲ್ಲಿ ಮೊದಲ ಪ್ರಾರಂಭವಾದ ವಿಶ್ವ ಭೂದಿನ ಆಚರಣೆ ಇಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತಿದೆ. ನಮ್ಮ ದೇಶದಲ್ಲಿ ಭೂಮಿಯ ಬಗ್ಗೆ ಪೂಜ್ಯ ಭಾವನೆ ಹೊಂದಿದ್ದು, ಮಾತೃ ಸ್ಥಾನ ನೀಡಿದ್ದೇವೆ. ಇತ್ತೀಚಿಗೆ ಕೋವಿಡ್ ಸೇರಿ ಅನೇಕ ಸಾಂಕ್ರಾಮಿಕ ರೋಗಗಳು ಜಾಗತಿಕವಾಗಿ ಮನುಷ್ಯನ ಕಾಡುತ್ತಿದೆ. ಈ ಕಾರಣದಿಂದಾಗಿ ನಮ್ಮ ಸುತ್ತಮುತ್ತಲಿನ ಮಣ್ಣು, ನೀರು ಮತ್ತು ಗಾಳಿ ಸಂರಕ್ಷಣೆ ಮಾಡಬೇಕಾಗಿದೆ. ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದು ನಮ್ಮಲ್ಲರ ಕರ್ತವ್ಯ ಎಂದು ತಿಳಿಸಿದರು.</p>.<p>ಪ್ರಧಾನ ಸಿವಿಲ್ ನ್ಯಾಯಾಧೀಶ ಜಿ.ಜಿ.ಶಿವಕುಮಾರ್, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ಎಸ್.ವೆಂಕಟೇಶ್, ಕಾರ್ಯದರ್ಶಿ ಬೀರೇಗೌಡ, ವಕೀಲರಾದ ನಾಗೇಂದ್ರ, ಯೋಗೇಶ್, ಪುಟ್ಟಸ್ವಾಮಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ: ‘</strong>ಭೂಮಿ ಜೀವ ಸಂಕುಲ ಹೊಂದಿರುವ ಏಕೈಕ ಗ್ರಹ. ಭೂಮಿಯ ಆರೋಗ್ಯ ಕಾಪಾಡಿಕೊಳ್ಳುವುದು ಅನಿವಾರ್ಯವಾಗಿದೆ’ ಎಂದು ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶ ಬಸವರಾಜ ತಳವಾರ ಹೇಳಿದರು.</p>.<p>ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಭೂಮಿ ದಿನ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಮನುಷ್ಯನ ಜ್ಞಾನ ಬೆಳೆದಂತೆಲ್ಲ ದುರಾಸೆ ಹೆಚ್ಚಿದೆ. ಮಾನವನ ಅತಿಯಾಸೆಯಿಂದ ವಾತಾವರಣ ಕಲುಷಿತವಾಗುತ್ತಿದೆ. ಏರುತ್ತಿರುವ ಜಾಗತಿಕ ತಾಪಮಾನ, ಪರಿಸರ ನಾಶದಿಂದ ಭೂಮಿ ನಿರಂತರವಾಗಿ ಹದೆಗೆಡುತ್ತಿದೆ. ಈ ಕುರಿತು ಜಾಗೃತಿ ಮೂಡಿಸಲು ವಿಶ್ವ ಭೂದಿನ ಆಚರಣೆ ಮಾಡಲಾಗುತ್ತಿದೆ ಎಂದರು.</p>.<p>1970ರಲ್ಲಿ ಮೊದಲ ಪ್ರಾರಂಭವಾದ ವಿಶ್ವ ಭೂದಿನ ಆಚರಣೆ ಇಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತಿದೆ. ನಮ್ಮ ದೇಶದಲ್ಲಿ ಭೂಮಿಯ ಬಗ್ಗೆ ಪೂಜ್ಯ ಭಾವನೆ ಹೊಂದಿದ್ದು, ಮಾತೃ ಸ್ಥಾನ ನೀಡಿದ್ದೇವೆ. ಇತ್ತೀಚಿಗೆ ಕೋವಿಡ್ ಸೇರಿ ಅನೇಕ ಸಾಂಕ್ರಾಮಿಕ ರೋಗಗಳು ಜಾಗತಿಕವಾಗಿ ಮನುಷ್ಯನ ಕಾಡುತ್ತಿದೆ. ಈ ಕಾರಣದಿಂದಾಗಿ ನಮ್ಮ ಸುತ್ತಮುತ್ತಲಿನ ಮಣ್ಣು, ನೀರು ಮತ್ತು ಗಾಳಿ ಸಂರಕ್ಷಣೆ ಮಾಡಬೇಕಾಗಿದೆ. ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದು ನಮ್ಮಲ್ಲರ ಕರ್ತವ್ಯ ಎಂದು ತಿಳಿಸಿದರು.</p>.<p>ಪ್ರಧಾನ ಸಿವಿಲ್ ನ್ಯಾಯಾಧೀಶ ಜಿ.ಜಿ.ಶಿವಕುಮಾರ್, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ಎಸ್.ವೆಂಕಟೇಶ್, ಕಾರ್ಯದರ್ಶಿ ಬೀರೇಗೌಡ, ವಕೀಲರಾದ ನಾಗೇಂದ್ರ, ಯೋಗೇಶ್, ಪುಟ್ಟಸ್ವಾಮಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>