<p><strong>ಚಾಮರಾಜನಗರ</strong>: ‘ಬಿಆರ್ಟಿಯಲ್ಲಿ ಅರಣ್ಯ, ಹುಲಿಗಳ ಸಂರಕ್ಷಣೆ ಚೆನ್ನಾಗಿ ಆಗುತ್ತಿದೆ. ಬೇರೆ ಅರಣ್ಯ ಪ್ರದೇಶಗಳಿಗೆ ಹೋಲಿಸಿದರೆ, ಇಲ್ಲಿನ ಕಾಡಂಚಿನ ಜನರು, ರೈತರು ಉತ್ತಮ ಸಹಕಾರ ನೀಡುತ್ತಿದ್ದಾರೆ’ ಎಂದು ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕಿ ಮತ್ತು ಡಿಸಿಎಫ್ ದೀಪ್ ಜೆ.ಕಾಂಟ್ರ್ಯಾಕ್ಟರ್ ಶನಿವಾರ ಹೇಳಿದರು. </p>.<p>ಸಂರಕ್ಷಿತ ಪ್ರದೇಶದ ವತಿಯಿಂದ ತಾಲ್ಲೂಕಿನ ಕೆ.ಗುಡಿಯಲ್ಲಿ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಹುಲಿ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. </p>.<p>‘ಅರಣ್ಯ, ವನ್ಯಜೀವಿಗಳ ರಕ್ಷಣೆಗೆ ಎಲ್ಲರ ಸಹಕಾರವೂ ಅಗತ್ಯ. ಹಿಂದಿನ ಹುಲಿಗಣತಿಗೆ ಹೋಲಿಸಿದರೆ ಈ ಬಾರಿಯ ಗಣತಿಯಲ್ಲಿ ನಮ್ಮಲ್ಲಿ ಹುಲಿಗಳ ಸಂಖ್ಯೆ ಸ್ವಲ್ಪ ಕಡಿಮೆಯಾಗಿದೆ. ಅದರ ಅರ್ಥ ಹುಲಿಗಳು ಸತ್ತು ಹೋಗಿವೆ ಎಂದಲ್ಲ. ಹುಲಿಗಳು ಒಂದು ಕಾಡಿನಿಂದ ಒನ್ನೊಂದು ಕಾಡಿಗೆ ವಲಸೆ ಹೋಗುತ್ತವೆ’ ಎಂದರು.</p>.<p>‘ಕಾಡಂಚಿನ ಶಾಲಾ ಮಕ್ಕಳಲ್ಲಿ ಅರಣ್ಯ, ವನ್ಯಜೀವಿಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಚಿತ್ರಕಲಾ ಸ್ಪರ್ಧೆ ಏರ್ಪಡಿಸಿದ್ದೆವು. ಕಾಡಂಚಿನ ಮಕ್ಕಳಿಗೆ ಅರಣ್ಯದ ಬಗ್ಗೆ ತಿಳಿವಳಿಕೆ ಇದೆ. ಆದರೆ, ಸಫಾರಿ, ಕಾಡಿನಲ್ಲಿ ವಾಹನದ ಸುತ್ತಾಟದ ಬಗ್ಗೆ ಗೊತ್ತಿರುವುದಿಲ್ಲ. ಆ ಕಾರಣಕ್ಕಾಗಿ ಸ್ಪರ್ಧೆಯಲ್ಲಿ ವಿಜೇತರಾದ ಎಲ್ಲ ಮಕ್ಕಳನ್ನು ಕರೆದು, ಅವರಿಗೆ ಸಫಾರಿ ವ್ಯವಸ್ಥೆ ಮಾಡಲಾಗಿದೆ’ ಎಂದರು. </p>.<p><strong>ಬಹುಮಾನ ವಿತರಣೆ:</strong> ಬಿಆರ್ಟಿ ವ್ಯಾಪ್ತಿಯ ಕೆ.ಗುಡಿ, ಪುಣಜನೂರು, ಬೈಲೂರು ಮತ್ತು ಕೊಳ್ಳೇಗಾಲ ವಲಯಗಳ ಕಾಡಂಚಿನ ಶಾಲಾ ಮಕ್ಕಳಿಗೆ ಆಯೀಜಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು. </p>.<p>ವಲಯ ಅರಣ್ಯಾಧಿಕಾರಿಗಳಾದ ವಿನೋದ್ ಗೌಡ, ನಿಸಾರ್ ಅಹಮದ್, ಉಮೇಶ್, ಪ್ರಮೋದ್, ವಾಸು ಸೇರಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ‘ಬಿಆರ್ಟಿಯಲ್ಲಿ ಅರಣ್ಯ, ಹುಲಿಗಳ ಸಂರಕ್ಷಣೆ ಚೆನ್ನಾಗಿ ಆಗುತ್ತಿದೆ. ಬೇರೆ ಅರಣ್ಯ ಪ್ರದೇಶಗಳಿಗೆ ಹೋಲಿಸಿದರೆ, ಇಲ್ಲಿನ ಕಾಡಂಚಿನ ಜನರು, ರೈತರು ಉತ್ತಮ ಸಹಕಾರ ನೀಡುತ್ತಿದ್ದಾರೆ’ ಎಂದು ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕಿ ಮತ್ತು ಡಿಸಿಎಫ್ ದೀಪ್ ಜೆ.ಕಾಂಟ್ರ್ಯಾಕ್ಟರ್ ಶನಿವಾರ ಹೇಳಿದರು. </p>.<p>ಸಂರಕ್ಷಿತ ಪ್ರದೇಶದ ವತಿಯಿಂದ ತಾಲ್ಲೂಕಿನ ಕೆ.ಗುಡಿಯಲ್ಲಿ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಹುಲಿ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. </p>.<p>‘ಅರಣ್ಯ, ವನ್ಯಜೀವಿಗಳ ರಕ್ಷಣೆಗೆ ಎಲ್ಲರ ಸಹಕಾರವೂ ಅಗತ್ಯ. ಹಿಂದಿನ ಹುಲಿಗಣತಿಗೆ ಹೋಲಿಸಿದರೆ ಈ ಬಾರಿಯ ಗಣತಿಯಲ್ಲಿ ನಮ್ಮಲ್ಲಿ ಹುಲಿಗಳ ಸಂಖ್ಯೆ ಸ್ವಲ್ಪ ಕಡಿಮೆಯಾಗಿದೆ. ಅದರ ಅರ್ಥ ಹುಲಿಗಳು ಸತ್ತು ಹೋಗಿವೆ ಎಂದಲ್ಲ. ಹುಲಿಗಳು ಒಂದು ಕಾಡಿನಿಂದ ಒನ್ನೊಂದು ಕಾಡಿಗೆ ವಲಸೆ ಹೋಗುತ್ತವೆ’ ಎಂದರು.</p>.<p>‘ಕಾಡಂಚಿನ ಶಾಲಾ ಮಕ್ಕಳಲ್ಲಿ ಅರಣ್ಯ, ವನ್ಯಜೀವಿಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಚಿತ್ರಕಲಾ ಸ್ಪರ್ಧೆ ಏರ್ಪಡಿಸಿದ್ದೆವು. ಕಾಡಂಚಿನ ಮಕ್ಕಳಿಗೆ ಅರಣ್ಯದ ಬಗ್ಗೆ ತಿಳಿವಳಿಕೆ ಇದೆ. ಆದರೆ, ಸಫಾರಿ, ಕಾಡಿನಲ್ಲಿ ವಾಹನದ ಸುತ್ತಾಟದ ಬಗ್ಗೆ ಗೊತ್ತಿರುವುದಿಲ್ಲ. ಆ ಕಾರಣಕ್ಕಾಗಿ ಸ್ಪರ್ಧೆಯಲ್ಲಿ ವಿಜೇತರಾದ ಎಲ್ಲ ಮಕ್ಕಳನ್ನು ಕರೆದು, ಅವರಿಗೆ ಸಫಾರಿ ವ್ಯವಸ್ಥೆ ಮಾಡಲಾಗಿದೆ’ ಎಂದರು. </p>.<p><strong>ಬಹುಮಾನ ವಿತರಣೆ:</strong> ಬಿಆರ್ಟಿ ವ್ಯಾಪ್ತಿಯ ಕೆ.ಗುಡಿ, ಪುಣಜನೂರು, ಬೈಲೂರು ಮತ್ತು ಕೊಳ್ಳೇಗಾಲ ವಲಯಗಳ ಕಾಡಂಚಿನ ಶಾಲಾ ಮಕ್ಕಳಿಗೆ ಆಯೀಜಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು. </p>.<p>ವಲಯ ಅರಣ್ಯಾಧಿಕಾರಿಗಳಾದ ವಿನೋದ್ ಗೌಡ, ನಿಸಾರ್ ಅಹಮದ್, ಉಮೇಶ್, ಪ್ರಮೋದ್, ವಾಸು ಸೇರಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>