<p><strong>ಯಳಂದೂರು</strong>: ತಾಲ್ಲೂಕಿನ ಬಿಳಗಿರಂಗನ ಬೆಟ್ಟದ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಶನಿವಾರ ನಡೆದ ಗರುಡೋತ್ಸವ ಮೆರವಣಿಗೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಶ್ರದ್ಧಾ ಭಕ್ತಿಯಿಂದ ತೇರು ಎಳೆದರು.</p>.<p>ಮಧ್ಯಾಹ್ನ ನಡೆದ ಗರುಡೋತ್ಸವ ಸೇವೆಯಲ್ಲಿ ರಂಗನಾಥನ ಬೆಳ್ಳಿ ದಂಡಕಗಳನ್ನು ಹೊತ್ತು ಭಕ್ತರು ದೇವಸ್ಥಾನದ ಸುತ್ತಲೂ ಸಾಗಿ ಹರಕೆ ಸಲ್ಲಿಸಿದರು.</p>.<p>ವಾರಾಂತ್ಯ ದಿನ ಹಾಗೂ ಬೇಸಿಗೆ ರಜೆಯಿಂದಾಗಿ ದೇಗುಲಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದರು. ಅಮಾವಾಸ್ಯೆ ಪೂಜೆ ಹಾಗೂ ಬಿದ್ದ ಆಂಜನೇಯ ದೇವಸ್ಥಾನದಲ್ಲಿ ಜರಗಿದ ಪೂಜೆ,ಮಹಿಳೆಯರು ಮತ್ತು ಮಕ್ಕಳು ಭೇಟಿ ನೀಡಿ ಧಾರ್ಮಿಕ ಕಾರ್ಯದಲ್ಲಿ ಭಾಗಿಯಾದರು.</p>.<p>‘ರಾತ್ರಿ ತುಂತುರು ಮಳೆ ಸುರಿದ ಹಿತಕರವಾದ ವಾತಾವರಣ ನಿರ್ಮಾಣವಾಗಿತ್ತು. ಬೆಳಗಿನಿಂದಲೇ ಮೋಡ ಮತ್ತು ಮಂಜಿನ ಹೊದಿಕೆ ರೂಪಿತವಾಗಿತ್ತು. ಇದು ಬಿಆರ್ಟಿ ನಿಸರ್ಗದಲ್ಲಿ ಸುಂದರ ಅನುಭೂತಿ ಸೃಷ್ಟಿಸಿತ್ತು’ ಎಂದು ದೇವಳದ ಪಾರುಪತ್ತೆಗಾರ ರಾಜು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-37-292341739</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಳಂದೂರು</strong>: ತಾಲ್ಲೂಕಿನ ಬಿಳಗಿರಂಗನ ಬೆಟ್ಟದ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಶನಿವಾರ ನಡೆದ ಗರುಡೋತ್ಸವ ಮೆರವಣಿಗೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಶ್ರದ್ಧಾ ಭಕ್ತಿಯಿಂದ ತೇರು ಎಳೆದರು.</p>.<p>ಮಧ್ಯಾಹ್ನ ನಡೆದ ಗರುಡೋತ್ಸವ ಸೇವೆಯಲ್ಲಿ ರಂಗನಾಥನ ಬೆಳ್ಳಿ ದಂಡಕಗಳನ್ನು ಹೊತ್ತು ಭಕ್ತರು ದೇವಸ್ಥಾನದ ಸುತ್ತಲೂ ಸಾಗಿ ಹರಕೆ ಸಲ್ಲಿಸಿದರು.</p>.<p>ವಾರಾಂತ್ಯ ದಿನ ಹಾಗೂ ಬೇಸಿಗೆ ರಜೆಯಿಂದಾಗಿ ದೇಗುಲಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದರು. ಅಮಾವಾಸ್ಯೆ ಪೂಜೆ ಹಾಗೂ ಬಿದ್ದ ಆಂಜನೇಯ ದೇವಸ್ಥಾನದಲ್ಲಿ ಜರಗಿದ ಪೂಜೆ,ಮಹಿಳೆಯರು ಮತ್ತು ಮಕ್ಕಳು ಭೇಟಿ ನೀಡಿ ಧಾರ್ಮಿಕ ಕಾರ್ಯದಲ್ಲಿ ಭಾಗಿಯಾದರು.</p>.<p>‘ರಾತ್ರಿ ತುಂತುರು ಮಳೆ ಸುರಿದ ಹಿತಕರವಾದ ವಾತಾವರಣ ನಿರ್ಮಾಣವಾಗಿತ್ತು. ಬೆಳಗಿನಿಂದಲೇ ಮೋಡ ಮತ್ತು ಮಂಜಿನ ಹೊದಿಕೆ ರೂಪಿತವಾಗಿತ್ತು. ಇದು ಬಿಆರ್ಟಿ ನಿಸರ್ಗದಲ್ಲಿ ಸುಂದರ ಅನುಭೂತಿ ಸೃಷ್ಟಿಸಿತ್ತು’ ಎಂದು ದೇವಳದ ಪಾರುಪತ್ತೆಗಾರ ರಾಜು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-37-292341739</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>