<p><strong>ಯಳಂದೂರು</strong>: ತಾಲ್ಲೂಕಿನ ಬಿಳಿಗಿರಿರಂಗನಬೆಟ್ಟದಿಂದ ಕೆ.ಗುಡಿ ಮಾರ್ಗವಾಗಿ ಕನ್ನೇರಿ ಕಾಲೊನಿಯಿಂದ ವಾಪಸ್ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಶನಿವಾರ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ.</p>.<p>ಚಾಲಕ ಮತ್ತು ನಿರ್ವಾಹಕರು ಅಪಾಯ ದಿಂದ ಪಾರಾಗಿದ್ದಾರೆ. ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಚಾಲಕ ಯತ್ನಿಸಿದಾಗ ಬಸ್ ಉರುಳಿದೆ ಎಂದುಜನರು ತಿಳಿಸಿದರು.</p>.<p>ಬೆಟ್ಟದಿಂದ ಕೆ.ಗುಡಿಗೆ ಹೋಗುವ ರಸ್ತೆಯನ್ನು ದುರಸ್ತಿಗಾಗಿ ಮುಚ್ಚಲಾಗಿದೆ. ಆದರೆ, ಸಂಜೆ ಪೋಡುಗಳ ಜನರಿಗಾಗಿ ಬಸ್ ಸೌಲಭ್ಯ ಕಲ್ಪಿಸಲಾಗಿತ್ತು. ಪ್ರಯಾಣಿಕರನ್ನು ಇಳಿಸಿ ವಾಪಸ್ ಆಗುವಾಗ ಬಸ್ ರಸ್ತೆ ಬದಿಗೆ ಉರುಳಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-37-532733882</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಳಂದೂರು</strong>: ತಾಲ್ಲೂಕಿನ ಬಿಳಿಗಿರಿರಂಗನಬೆಟ್ಟದಿಂದ ಕೆ.ಗುಡಿ ಮಾರ್ಗವಾಗಿ ಕನ್ನೇರಿ ಕಾಲೊನಿಯಿಂದ ವಾಪಸ್ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಶನಿವಾರ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ.</p>.<p>ಚಾಲಕ ಮತ್ತು ನಿರ್ವಾಹಕರು ಅಪಾಯ ದಿಂದ ಪಾರಾಗಿದ್ದಾರೆ. ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಚಾಲಕ ಯತ್ನಿಸಿದಾಗ ಬಸ್ ಉರುಳಿದೆ ಎಂದುಜನರು ತಿಳಿಸಿದರು.</p>.<p>ಬೆಟ್ಟದಿಂದ ಕೆ.ಗುಡಿಗೆ ಹೋಗುವ ರಸ್ತೆಯನ್ನು ದುರಸ್ತಿಗಾಗಿ ಮುಚ್ಚಲಾಗಿದೆ. ಆದರೆ, ಸಂಜೆ ಪೋಡುಗಳ ಜನರಿಗಾಗಿ ಬಸ್ ಸೌಲಭ್ಯ ಕಲ್ಪಿಸಲಾಗಿತ್ತು. ಪ್ರಯಾಣಿಕರನ್ನು ಇಳಿಸಿ ವಾಪಸ್ ಆಗುವಾಗ ಬಸ್ ರಸ್ತೆ ಬದಿಗೆ ಉರುಳಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-37-532733882</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>