<p><strong>ಯಳಂದೂರು</strong>: ‘ನಾಯಕ ಸಮುದಾಯ ಸರ್ಕಾರದ ಸವಲತ್ತು ಬಳಸಿಕೊಂಡು ಶೈಕ್ಷಣಿಕ ಹಾಗೂ ಸ್ಪರ್ಧಾತ್ಮಕ ವಿಭಾಗಗಳಲ್ಲಿ ಉನ್ನತ ಸಾಧನೆ ಮಾಡಬೇಕು’ ಎಂದು ತಾಲ್ಲೂಕು ನಾಯಕ ಮಂಡಳಿ ಅಧ್ಯಕ್ಷ ಮುರಳಿ ಕೃಷ್ಣ ಅಭಿಪ್ರಾಯಪಟ್ಟರು.</p>.<p>ಪಟ್ಟಣದ ಮಹರ್ಷಿ ವಾಲ್ಮೀಕಿ ಭವನದಲ್ಲಿ ಈಚಗೆ ತಾಲ್ಲೂಕು ನಾಯಕ ಮಂಡಳಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸಮುದಾಯದ ಹೆಣ್ಣು ಮಕ್ಕಳು ಕಲಿಕೆಯಲ್ಲಿ ಹಿಂದುಳಿದಿದ್ದು, ಸಾಕ್ಷರತೆ ಪ್ರಮಾಣ ಕಡಿಮೆ ಇದೆ. ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಒಲವು ತೋರುತ್ತಿಲ್ಲ. ಇದರಿಂದ ಸರ್ಕಾರದ ಶಿಷ್ಯ ವೇತನ ಪಡೆಯುವವರ ಸಂಖ್ಯೆ ಕುಸಿದಿದೆ. ಇದರಿಂದ ದೇಶ-ವಿದೇಶಗಳಲ್ಲಿ ಅಭ್ಯಾಸ ಮಾಡುವ ಅವಕಾಶಗಳಿಂದ ಸಮುದಾಯದ ಮಕ್ಕಳು ವಂಚಿತರಾಗಿದ್ದಾರೆ’ ಎಂದು ಹೇಳಿದರು.</p>.<p>ಪ.ಪಂ.ಸದಸ್ಯ ಮಹೇಶ್ ಮಾತನಾಡಿ, ‘ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಬೇಕು. ಬಾಲ ಕಾರ್ಮಿಕ ವ್ಯವಸ್ಥೆಯಿಂದ ವಿಮುಖರಾಗಬೇಕು. ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ನೆರವಾಗಬೇಕು. ಈ ದೆಸೆಯಲ್ಲಿ ಸಂಘ-ಸಂಸ್ಥೆಗಳು ನೆರವು ನೀಡಲಿವೆ’ ಎಂದು ತಿಳಿಸಿದರು.</p>.<p>ಗೌರವ ಅಧ್ಯಕ್ಷ ರಾಚನಾಯಕ, ಕಾರ್ಯದರ್ಶಿ ವೆಂಕಟಾಚಲ, ಖಜಾಂಚಿ ಉಮೇಶ್, ಪ.ಪಂ. ಸದಸ್ಯ ರಂಗನಾಥ್, ಮುಖಂಡರಾದ ಭೀಮಪ್ಪ, ಮಹೇಶ್, ಮಣಿಗಾರ್ ರಂಗನಾಥ್, ಬಿಳಿಗಿರಂಗನಾಯಕ, ಮಂಜು, ಬಂಗಾರನಾಯಕ, ಮದ್ದೂರು ಬಂಗಾರು, ಕಂದಹಳ್ಳಿ ಮಹೇಶ್ ಕುಮಾರ್, ಮಹದೇವಸ್ವಾಮಿ, ರಾಜಣ್ಣ, ಕಿಟ್ಟಿ, ರಾಮಚಂದ್ರು, ವರದನಾಯಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಳಂದೂರು</strong>: ‘ನಾಯಕ ಸಮುದಾಯ ಸರ್ಕಾರದ ಸವಲತ್ತು ಬಳಸಿಕೊಂಡು ಶೈಕ್ಷಣಿಕ ಹಾಗೂ ಸ್ಪರ್ಧಾತ್ಮಕ ವಿಭಾಗಗಳಲ್ಲಿ ಉನ್ನತ ಸಾಧನೆ ಮಾಡಬೇಕು’ ಎಂದು ತಾಲ್ಲೂಕು ನಾಯಕ ಮಂಡಳಿ ಅಧ್ಯಕ್ಷ ಮುರಳಿ ಕೃಷ್ಣ ಅಭಿಪ್ರಾಯಪಟ್ಟರು.</p>.<p>ಪಟ್ಟಣದ ಮಹರ್ಷಿ ವಾಲ್ಮೀಕಿ ಭವನದಲ್ಲಿ ಈಚಗೆ ತಾಲ್ಲೂಕು ನಾಯಕ ಮಂಡಳಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸಮುದಾಯದ ಹೆಣ್ಣು ಮಕ್ಕಳು ಕಲಿಕೆಯಲ್ಲಿ ಹಿಂದುಳಿದಿದ್ದು, ಸಾಕ್ಷರತೆ ಪ್ರಮಾಣ ಕಡಿಮೆ ಇದೆ. ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಒಲವು ತೋರುತ್ತಿಲ್ಲ. ಇದರಿಂದ ಸರ್ಕಾರದ ಶಿಷ್ಯ ವೇತನ ಪಡೆಯುವವರ ಸಂಖ್ಯೆ ಕುಸಿದಿದೆ. ಇದರಿಂದ ದೇಶ-ವಿದೇಶಗಳಲ್ಲಿ ಅಭ್ಯಾಸ ಮಾಡುವ ಅವಕಾಶಗಳಿಂದ ಸಮುದಾಯದ ಮಕ್ಕಳು ವಂಚಿತರಾಗಿದ್ದಾರೆ’ ಎಂದು ಹೇಳಿದರು.</p>.<p>ಪ.ಪಂ.ಸದಸ್ಯ ಮಹೇಶ್ ಮಾತನಾಡಿ, ‘ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಬೇಕು. ಬಾಲ ಕಾರ್ಮಿಕ ವ್ಯವಸ್ಥೆಯಿಂದ ವಿಮುಖರಾಗಬೇಕು. ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ನೆರವಾಗಬೇಕು. ಈ ದೆಸೆಯಲ್ಲಿ ಸಂಘ-ಸಂಸ್ಥೆಗಳು ನೆರವು ನೀಡಲಿವೆ’ ಎಂದು ತಿಳಿಸಿದರು.</p>.<p>ಗೌರವ ಅಧ್ಯಕ್ಷ ರಾಚನಾಯಕ, ಕಾರ್ಯದರ್ಶಿ ವೆಂಕಟಾಚಲ, ಖಜಾಂಚಿ ಉಮೇಶ್, ಪ.ಪಂ. ಸದಸ್ಯ ರಂಗನಾಥ್, ಮುಖಂಡರಾದ ಭೀಮಪ್ಪ, ಮಹೇಶ್, ಮಣಿಗಾರ್ ರಂಗನಾಥ್, ಬಿಳಿಗಿರಂಗನಾಯಕ, ಮಂಜು, ಬಂಗಾರನಾಯಕ, ಮದ್ದೂರು ಬಂಗಾರು, ಕಂದಹಳ್ಳಿ ಮಹೇಶ್ ಕುಮಾರ್, ಮಹದೇವಸ್ವಾಮಿ, ರಾಜಣ್ಣ, ಕಿಟ್ಟಿ, ರಾಮಚಂದ್ರು, ವರದನಾಯಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>