ಸೋಮಣ್ಣ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಬೇಕು ಎಂದು ಕೆಲವು ಕಾಂಗ್ರೆಸ್ ಮುಖಂಡರು ಹೇಳಿಕೆ ನೀಡಿರುವ ಬಗ್ಗೆ ಕೇಳಿದ್ದಕ್ಕೆ, ‘ಸರ್ಕಾರ ನಿಂತ ನೀರಲ್ಲ. ಹರಿಯುವ ನೀರು. ಸಾಮಾನ್ಯ ಜನರ ನೋವನ್ನು ಬಗೆಹರಿಸಬೇಕೇ ವಿನಾ, ಸಾರ್ವಜನಿಕ ಅಭಿವೃದ್ಧಿ ವಿಚಾರದಲ್ಲಿ ಮೂಗು ತೂರಿಸಬಾರದು. 10 ತಿಂಗಳು ಇಲ್ಲಿ ಉಸ್ತುವಾರಿ ಸಚಿವನಾಗಿ ಕೆಲಸ ಮಾಡಿದ್ದೆ. ಆ ಕಾರಣಕ್ಕೆ ಅವರು ಹೇಳಿರಬಹುದು.ಅವರಿಗೆ ಅಭಾರಿಯಾಗಿದ್ದೇನೆ’ ಎಂದರು.