<p><strong>ಸಂತೇಮರಹಳ್ಳಿ</strong>: ಸಮೀಪದ ಯಲಕ್ಕೂರು ಗ್ರಾಮದಲ್ಲಿರುವ ಸರ್ಕಾರಿ ಜಾಗವನ್ನು ತಹಶೀಲ್ದಾರ್ ಎಂ.ಗಿರಿಜಾ ಅವರ ನೇತೃತ್ವದಲ್ಲಿ ಸರ್ವೆ ನಡೆಸಿ ಜಾಗ ಗುರುತಿಸಲಾಯಿತು.</p>.<p>ಈ ಸಂದರ್ಭದಲ್ಲಿ ಅವರು ಮಾತನಾಡಿ, ಗ್ರಾಮದಲ್ಲಿ 4 ಎಕರೆ ಸರ್ಕಾರಿ ಜಾಗದಲ್ಲಿ 1 ಎಕರೆ ಜಾಗವನ್ನು ಜಿಲ್ಲಾಡಳಿತದಿಂದ ಸ್ಮಶಾನಕ್ಕೆ ಮಂಜೂರು ಮಾಡಲಾಗಿದೆ. ಇನ್ನುಳಿದ 4 ಎಕರೆ ಜಮೀನಿನಲ್ಲಿ ಕೆಲವು ಖಾಸಗಿ ವ್ಯಕ್ತಿಗಳು ಅಕ್ಕ ಪಕ್ಕದಲ್ಲಿ ಒತ್ತುವರಿ ಮಾಡಿಕೊಂಡಿದ್ದಾರೆ. ಈ ಸಂಬಂಧವಾಗಿ ಜಾಗವನ್ನು ಸರ್ವೆ ಮಾಡಿ ಜಾಗ ಗುರುತಿಸಿಕೊಡಬೇಕೆಂದು ಸರ್ವೆ ಇಲಾಖೆಗೆ ಗ್ರಾಮಸ್ಥರು ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ, ಸರ್ವೆ ಇಲಾಖೆ, ಗ್ರಾಮ ಪಂಚಾಯಿತಿ ಹಾಗೂ ಪೊಲೀಸ್ ಇಲಾಖೆ, ಗ್ರಾಮಸ್ಥರ ಸಮ್ಮುಖದಲ್ಲಿ ಸರ್ಕಾರದ 5 ಎಕರೆ ಜಾಗವನ್ನು ಸರ್ವೆ ನಡೆಸಿ ಗುರುತಿಸಲಾಗಿದೆ’ ಎಂದು ತಿಳಿಸಿದರು.</p>.<p>ಯಜಮಾನ ಸೋಮಶೇಖರ್ ಮಾತನಾಡಿ, ಗ್ರಾಮದಲ್ಲಿ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣ ಮಾಡಲು ಸ್ಥಳದ ಅಭಾವವಿರುವ ಹಿನ್ನೆಲೆಯಲ್ಲಿ ಒಂದು ಎಕರೆ ಜಾಗವನ್ನು ಭವನ ನಿರ್ಮಿಸಲು ಮಂಜೂರು ಮಾಡಿಕೊಡಬೇಕೆಂದು ಮನವಿ ಮಾಡಿದರು.</p>.<p>ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಿಸಲು ಒಂದು ಎಕರೆ ಜಾಗವನ್ನು ಪ್ರತ್ಯೇಕವಾಗಿ ಕೂಡಲೇ ಮಂಜೂರು ಮಾಡಿ ಗ್ರಾಮ ಪಂಚಾಯಿತಿಗೆ ವರ್ಗಾಯಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಹಶೀಲ್ದಾರ್ ಗಿರಿಜಾ ತಿಳಿಸಿದರು.</p>.<p>ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ರಾಜಶೇಖರ್ಮೂರ್ತಿ, ಸರ್ವೆ ಅಧಿಕಾರಿ ರಮೇಶ್, ಗ್ರಾಮ ಆಡಳಿತಾಧಿಕಾರಿ ಚಂದನ್, ಗ್ರಾಮ ಪಂಚಾಯಿರಿ ಅಭಿವೃದ್ಧಿ ಅಧಿಕಾರಿ ಗೋವಿಂದಯ್ಯ, ಎಎಸ್ಐ ಮಹದೇವಪ್ಪ, ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜು, ಯಜಮಾನರಾದ ಸಿದ್ದರಾಜು, ಬಸವಣ್ಣ, ಚಂದ್ರು, ಸೇರಿದಂತೆ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂತೇಮರಹಳ್ಳಿ</strong>: ಸಮೀಪದ ಯಲಕ್ಕೂರು ಗ್ರಾಮದಲ್ಲಿರುವ ಸರ್ಕಾರಿ ಜಾಗವನ್ನು ತಹಶೀಲ್ದಾರ್ ಎಂ.ಗಿರಿಜಾ ಅವರ ನೇತೃತ್ವದಲ್ಲಿ ಸರ್ವೆ ನಡೆಸಿ ಜಾಗ ಗುರುತಿಸಲಾಯಿತು.</p>.<p>ಈ ಸಂದರ್ಭದಲ್ಲಿ ಅವರು ಮಾತನಾಡಿ, ಗ್ರಾಮದಲ್ಲಿ 4 ಎಕರೆ ಸರ್ಕಾರಿ ಜಾಗದಲ್ಲಿ 1 ಎಕರೆ ಜಾಗವನ್ನು ಜಿಲ್ಲಾಡಳಿತದಿಂದ ಸ್ಮಶಾನಕ್ಕೆ ಮಂಜೂರು ಮಾಡಲಾಗಿದೆ. ಇನ್ನುಳಿದ 4 ಎಕರೆ ಜಮೀನಿನಲ್ಲಿ ಕೆಲವು ಖಾಸಗಿ ವ್ಯಕ್ತಿಗಳು ಅಕ್ಕ ಪಕ್ಕದಲ್ಲಿ ಒತ್ತುವರಿ ಮಾಡಿಕೊಂಡಿದ್ದಾರೆ. ಈ ಸಂಬಂಧವಾಗಿ ಜಾಗವನ್ನು ಸರ್ವೆ ಮಾಡಿ ಜಾಗ ಗುರುತಿಸಿಕೊಡಬೇಕೆಂದು ಸರ್ವೆ ಇಲಾಖೆಗೆ ಗ್ರಾಮಸ್ಥರು ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ, ಸರ್ವೆ ಇಲಾಖೆ, ಗ್ರಾಮ ಪಂಚಾಯಿತಿ ಹಾಗೂ ಪೊಲೀಸ್ ಇಲಾಖೆ, ಗ್ರಾಮಸ್ಥರ ಸಮ್ಮುಖದಲ್ಲಿ ಸರ್ಕಾರದ 5 ಎಕರೆ ಜಾಗವನ್ನು ಸರ್ವೆ ನಡೆಸಿ ಗುರುತಿಸಲಾಗಿದೆ’ ಎಂದು ತಿಳಿಸಿದರು.</p>.<p>ಯಜಮಾನ ಸೋಮಶೇಖರ್ ಮಾತನಾಡಿ, ಗ್ರಾಮದಲ್ಲಿ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣ ಮಾಡಲು ಸ್ಥಳದ ಅಭಾವವಿರುವ ಹಿನ್ನೆಲೆಯಲ್ಲಿ ಒಂದು ಎಕರೆ ಜಾಗವನ್ನು ಭವನ ನಿರ್ಮಿಸಲು ಮಂಜೂರು ಮಾಡಿಕೊಡಬೇಕೆಂದು ಮನವಿ ಮಾಡಿದರು.</p>.<p>ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಿಸಲು ಒಂದು ಎಕರೆ ಜಾಗವನ್ನು ಪ್ರತ್ಯೇಕವಾಗಿ ಕೂಡಲೇ ಮಂಜೂರು ಮಾಡಿ ಗ್ರಾಮ ಪಂಚಾಯಿತಿಗೆ ವರ್ಗಾಯಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಹಶೀಲ್ದಾರ್ ಗಿರಿಜಾ ತಿಳಿಸಿದರು.</p>.<p>ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ರಾಜಶೇಖರ್ಮೂರ್ತಿ, ಸರ್ವೆ ಅಧಿಕಾರಿ ರಮೇಶ್, ಗ್ರಾಮ ಆಡಳಿತಾಧಿಕಾರಿ ಚಂದನ್, ಗ್ರಾಮ ಪಂಚಾಯಿರಿ ಅಭಿವೃದ್ಧಿ ಅಧಿಕಾರಿ ಗೋವಿಂದಯ್ಯ, ಎಎಸ್ಐ ಮಹದೇವಪ್ಪ, ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜು, ಯಜಮಾನರಾದ ಸಿದ್ದರಾಜು, ಬಸವಣ್ಣ, ಚಂದ್ರು, ಸೇರಿದಂತೆ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>