<p><strong>ಚಾಮರಾಜನಗರ:</strong> ಯಳಂದೂರು ತಾಲ್ಲೂಕಿನ ಬಿಳಿಗಿರಿ ರಂಗನಾಥ ಸ್ವಾಮಿ ಬೆಟ್ಟದಲ್ಲಿ ಜ.15 ರಿಂದ 17ರವರೆಗೆ ನಡೆಯುವ ಜಾತ್ರೆಯಲ್ಲಿ ಪ್ರಾಣಿ ಬಲಿ ಕೊಡದಂತೆ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ಅಧ್ಯಕ್ಷ ದಯಾನಂದ ಸ್ವಾಮೀಜಿ ಒತ್ತಾಯಿಸಿದ್ದಾರೆ.</p>.<p>ವಡೆಗೆರೆ ಆಂಜನೇಯ ಸ್ವಾಮಿ ದೇವಸ್ಥಾನ ಸಹಿತ ಧಾರ್ಮಿಕ ಸ್ಥಳಗಳು, ಆವರಣಗಳು, ದೇವಸ್ಥಾನದ ಮುಂಭಾಗ, ಸುತ್ತಮುತ್ತಲಿನ ಪರಿಸರ ಹಾಗೂ ರಸ್ತೆಯ ಇಕ್ಕೆಲಗಳಲ್ಲಿ ಪ್ರಾಣಿ ಬಲಿ ಕೊಡಬಾರದು. ಪ್ರಾಣಿಗಳ ಅಂಗಾಗಗಳ ನೈವೇದ್ಯ ಸಲ್ಲಿಸುವುದಕ್ಕೆ ಅವಕಾಶ ನೀಡಬಾರದು ಎಂದು ಸ್ವಾಮೀಜಿ ಆಗ್ರಹಿಸಿದ್ದಾರೆ.</p>.<p>ಪ್ರಾಣಿಬಲಿ ಅಂಧ ಶ್ರದ್ಧೆ ಹಾಗೂ ಕಾನೂನು ವಿರೋಧಿ ಕ್ರಮವಾಗಿದ್ದು ಭಕ್ತರು ಪ್ರಾಣಿಬಲಿ ತ್ಯಜಿಸಿ ಅಹಿಂಸಾತ್ಮಕವಾಗಿ ಪೂಜೆ ಸಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ. </p>.<p>ದೇವಾಲಯಗಳು ವಧಾಲಯಗಳಾಗದೆ ದಿವ್ಯಾಲಯವಾಗಬೇಕು, ಜಾತ್ರಾ ಪರಿಸರಗಳ ಧಾರ್ಮಿಕ ಸ್ಥಾನಗಳು ಕಟುಕರ ಕೇರಿಗಳಾಗಬಾರದು, ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿ ಹಿಂಸೆ, ಮದ್ಯ ಹಾಗೂ ಮಾದಕ ಪದಾರ್ಥಗಳಿಂದ ಮುಕ್ತವಾಗಿರಬೇಕು, ಅಹಿಂಸೆ, ಕರುಣೆ, ಪ್ರೇಮ, ಜೀವದಯೆ, ಮಾನವೀಯತೆ, ಆಧ್ಯಾತ್ಮಿಕತೆಯಿಂದ ಕೂಡಿರುಬೇಕು ಎಂದು ಮನವಿ ಮಾಡಿದ್ದಾರೆ.</p>.<p>ಪ್ರಾಣಿ ಬಲಿ ತಡೆ ಕುರಿತು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ನ್ಯಾಯಾಲಯದ ಆದೇಶದಂತೆ ಅಧಿಕಾರಿಗಳು ಪ್ರಾಣಿ ಬಲಿ ತಡೆಯಬೇಕು. ವಿಶ್ವ ಪ್ರಾಣಿ ಕಲ್ಯಾಣ ಮಂಡಳಿಯಿಂದ ಅಹಿಂಸಾ ಪ್ರಾಣಿ ದಯಾ ಆಧ್ಯಾತ್ಮ ಸಂದೇಶ ಯಾತ್ರೆ ಕೈಗೊಂಡಿದ್ದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ದಯಾನಂದ ಸ್ವಾಮೀಜಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಯಳಂದೂರು ತಾಲ್ಲೂಕಿನ ಬಿಳಿಗಿರಿ ರಂಗನಾಥ ಸ್ವಾಮಿ ಬೆಟ್ಟದಲ್ಲಿ ಜ.15 ರಿಂದ 17ರವರೆಗೆ ನಡೆಯುವ ಜಾತ್ರೆಯಲ್ಲಿ ಪ್ರಾಣಿ ಬಲಿ ಕೊಡದಂತೆ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ಅಧ್ಯಕ್ಷ ದಯಾನಂದ ಸ್ವಾಮೀಜಿ ಒತ್ತಾಯಿಸಿದ್ದಾರೆ.</p>.<p>ವಡೆಗೆರೆ ಆಂಜನೇಯ ಸ್ವಾಮಿ ದೇವಸ್ಥಾನ ಸಹಿತ ಧಾರ್ಮಿಕ ಸ್ಥಳಗಳು, ಆವರಣಗಳು, ದೇವಸ್ಥಾನದ ಮುಂಭಾಗ, ಸುತ್ತಮುತ್ತಲಿನ ಪರಿಸರ ಹಾಗೂ ರಸ್ತೆಯ ಇಕ್ಕೆಲಗಳಲ್ಲಿ ಪ್ರಾಣಿ ಬಲಿ ಕೊಡಬಾರದು. ಪ್ರಾಣಿಗಳ ಅಂಗಾಗಗಳ ನೈವೇದ್ಯ ಸಲ್ಲಿಸುವುದಕ್ಕೆ ಅವಕಾಶ ನೀಡಬಾರದು ಎಂದು ಸ್ವಾಮೀಜಿ ಆಗ್ರಹಿಸಿದ್ದಾರೆ.</p>.<p>ಪ್ರಾಣಿಬಲಿ ಅಂಧ ಶ್ರದ್ಧೆ ಹಾಗೂ ಕಾನೂನು ವಿರೋಧಿ ಕ್ರಮವಾಗಿದ್ದು ಭಕ್ತರು ಪ್ರಾಣಿಬಲಿ ತ್ಯಜಿಸಿ ಅಹಿಂಸಾತ್ಮಕವಾಗಿ ಪೂಜೆ ಸಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ. </p>.<p>ದೇವಾಲಯಗಳು ವಧಾಲಯಗಳಾಗದೆ ದಿವ್ಯಾಲಯವಾಗಬೇಕು, ಜಾತ್ರಾ ಪರಿಸರಗಳ ಧಾರ್ಮಿಕ ಸ್ಥಾನಗಳು ಕಟುಕರ ಕೇರಿಗಳಾಗಬಾರದು, ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿ ಹಿಂಸೆ, ಮದ್ಯ ಹಾಗೂ ಮಾದಕ ಪದಾರ್ಥಗಳಿಂದ ಮುಕ್ತವಾಗಿರಬೇಕು, ಅಹಿಂಸೆ, ಕರುಣೆ, ಪ್ರೇಮ, ಜೀವದಯೆ, ಮಾನವೀಯತೆ, ಆಧ್ಯಾತ್ಮಿಕತೆಯಿಂದ ಕೂಡಿರುಬೇಕು ಎಂದು ಮನವಿ ಮಾಡಿದ್ದಾರೆ.</p>.<p>ಪ್ರಾಣಿ ಬಲಿ ತಡೆ ಕುರಿತು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ನ್ಯಾಯಾಲಯದ ಆದೇಶದಂತೆ ಅಧಿಕಾರಿಗಳು ಪ್ರಾಣಿ ಬಲಿ ತಡೆಯಬೇಕು. ವಿಶ್ವ ಪ್ರಾಣಿ ಕಲ್ಯಾಣ ಮಂಡಳಿಯಿಂದ ಅಹಿಂಸಾ ಪ್ರಾಣಿ ದಯಾ ಆಧ್ಯಾತ್ಮ ಸಂದೇಶ ಯಾತ್ರೆ ಕೈಗೊಂಡಿದ್ದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ದಯಾನಂದ ಸ್ವಾಮೀಜಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>